ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು.

ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾ ಧೀಶರಾದ ಅನಿಲ್ ಪ್ರಕಾಶ್ ಎಂ.ಪಿ , ಮಾತನಾಡಿ, ರಿಚರ್ಡ್ ಕೋಸ್ತಾ ಎಂ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ ಅಂದ್ರೆ, ಅವರು ಈ ಹಿಂದೆ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ನಾವು ಭಾವಿಸಬಹುದು. ಇನ್ನು ಬೃಹತ್ ಲೋಕ ಅದಾಲತ್ ಯೋಚನೆ ಮಾಡಲಾಗಿದೆ. ಅಲ್ಲಿ ಎಲ್ಲರೂ ಸಹಕಾರ ನೀಡಿ, ಹೆಚ್ಚು ಪ್ರಕರಣ ಇತ್ಯರ್ಥವಾಗಲು ಸಹಕಾರ ನೀಡಬೇಕು ಎಂದು ತಿಳಿಸಿದರು.ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾದ ಕೃಷ್ಣಮೂರ್ತಿ ಎನ್,ಮಾತನಾಡಿ ಅಧ್ಯಕ್ಷರು ವಕೀಲರ ಸಂಘದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಮನಸ್ಸು ಅವರದ್ದು, ಜೊತೆಗೆ ಪದಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ. ನನ್ನ 3 ವರ್ಷದ ಅವಧಿ ಯಲ್ಲಿ, ಬಂಟ್ವಾಳದಲ್ಲಿ ಯಾವುದೇ ಕೆಟ್ಟ ಅನುಭವ ಆಗಿಲ್ಲ ಎಂದು ಅವರು ತಿಳಿಸಿದರು.ನೂತನ ಎಲ್ಲಾ ಯೋಜನೆಗಳು ಸಾಕಾರಗೊಳ್ಳಲಿ ಎಂದು ಶುಭ ಹಾರೈಸಿದರು.ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್,ಮಾತನಾಡಿ ಕ್ರಿಯಾಶೀಲ ಸಂಘಟನೆಯ ಪದಾಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಮಾಡಬಹುದು ಎಂದು ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರ ಸಂಘ (ರಿ ) ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೋಸ್ತಾಎಂ ಎಂ ಅವರು ಮಾತನಾಡಿಪ್ರಸಕ್ತ ವರ್ಷದಲ್ಲಿ ಮಾಡಬೇಕಾದ ಯೋಜನೆಗಳ ಬಗ್ಗೆ ಪೂರ್ವ ತಯಾರಿ ಮಾಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ‌ಅವರು ತಿಳಿಸಿದರು.ಹೈ ಕೋರ್ಟು ಪೀಠ ಸ್ಥಾಪನೆ ವಿಚಾರದ ಹೋರಾಟಕ್ಕೆ ವೇಗ ನೀಡುವಲ್ಲಿ ವಕೀಲ ಮಿತ್ರರ ಸಹಕಾರ ಯಾಚಿಸಿದರು. ಕೆಲಸ ಮಾಡುವ ಸಂದರ್ಭದಲ್ಲಿ ಬರುವ ಎಲ್ಲಾ ಅಡೆತಡೆಗಳನ್ನು ಪಾಸಿಟಿವ್ ಆಗಿ ತೆಗೆದುಕೊಂಡು ವಕೀಲರ ಸಂಘದ ಅಭಿವೃದ್ಧಿಯ ಮೂಲಕ ಆಗಬೇಕಾದ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.ಎರಡನೇ ಅವಧಿಗೆ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲರಿಗೂ ‌ಧನ್ಯವಾದ ನೀಡಿದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎನ್. ನಾಯಕ್ ಹಾಗೂ ಗೌರವ ಅತಿಥಿಗಳಾಗಿ , ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿತನುಡಿ ಗಳನ್ನಾಡಿದರು. ಜೊತೆ ಕಾರ್ಯದರ್ಶಿಯಾದ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ,ಪ್ರದಾನ ಕಾರ್ಯದರ್ಶಿ ಕೆ ನರೇಂದ್ರನಾಥ ಭಂಢಾರಿ ಪ್ರಸ್ತಾವಿಕವಾಗಿ‌ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಉಪಾಧ್ಯಕ್ಷ ದಯಾನಂದ ರೈ, ವಂದಿಸಿದರು. ಅಭಿನಯ ಚಿದಾನಂದ ಹಾಗೂ ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಕಿರಿಯ ವಕೀಲ ಮಿತ್ರರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕಿನ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ, ಬೆಂಗಳೂರು ಹೊರಡಿಸಿರುವ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು. ಇದೇ ಹವಾಮಾನ ಪರಿಸ್ಥಿತಿಯ ಮುಂದುವರಿಯುವ ಸೂಚನೆಯಿದ್ದು ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ…

    Spread the love

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    You Missed

    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    • By admin
    • July 22, 2026
    • 3 views
    ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಯೆಲ್ಲೊ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 7 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 10 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 11 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 10 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 16 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ