ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು.

ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾ ಧೀಶರಾದ ಅನಿಲ್ ಪ್ರಕಾಶ್ ಎಂ.ಪಿ , ಮಾತನಾಡಿ, ರಿಚರ್ಡ್ ಕೋಸ್ತಾ ಎಂ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ ಅಂದ್ರೆ, ಅವರು ಈ ಹಿಂದೆ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ನಾವು ಭಾವಿಸಬಹುದು. ಇನ್ನು ಬೃಹತ್ ಲೋಕ ಅದಾಲತ್ ಯೋಚನೆ ಮಾಡಲಾಗಿದೆ. ಅಲ್ಲಿ ಎಲ್ಲರೂ ಸಹಕಾರ ನೀಡಿ, ಹೆಚ್ಚು ಪ್ರಕರಣ ಇತ್ಯರ್ಥವಾಗಲು ಸಹಕಾರ ನೀಡಬೇಕು ಎಂದು ತಿಳಿಸಿದರು.ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾದ ಕೃಷ್ಣಮೂರ್ತಿ ಎನ್,ಮಾತನಾಡಿ ಅಧ್ಯಕ್ಷರು ವಕೀಲರ ಸಂಘದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಮನಸ್ಸು ಅವರದ್ದು, ಜೊತೆಗೆ ಪದಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ. ನನ್ನ 3 ವರ್ಷದ ಅವಧಿ ಯಲ್ಲಿ, ಬಂಟ್ವಾಳದಲ್ಲಿ ಯಾವುದೇ ಕೆಟ್ಟ ಅನುಭವ ಆಗಿಲ್ಲ ಎಂದು ಅವರು ತಿಳಿಸಿದರು.ನೂತನ ಎಲ್ಲಾ ಯೋಜನೆಗಳು ಸಾಕಾರಗೊಳ್ಳಲಿ ಎಂದು ಶುಭ ಹಾರೈಸಿದರು.ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್,ಮಾತನಾಡಿ ಕ್ರಿಯಾಶೀಲ ಸಂಘಟನೆಯ ಪದಾಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಮಾಡಬಹುದು ಎಂದು ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರ ಸಂಘ (ರಿ ) ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೋಸ್ತಾಎಂ ಎಂ ಅವರು ಮಾತನಾಡಿಪ್ರಸಕ್ತ ವರ್ಷದಲ್ಲಿ ಮಾಡಬೇಕಾದ ಯೋಜನೆಗಳ ಬಗ್ಗೆ ಪೂರ್ವ ತಯಾರಿ ಮಾಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ‌ಅವರು ತಿಳಿಸಿದರು.ಹೈ ಕೋರ್ಟು ಪೀಠ ಸ್ಥಾಪನೆ ವಿಚಾರದ ಹೋರಾಟಕ್ಕೆ ವೇಗ ನೀಡುವಲ್ಲಿ ವಕೀಲ ಮಿತ್ರರ ಸಹಕಾರ ಯಾಚಿಸಿದರು. ಕೆಲಸ ಮಾಡುವ ಸಂದರ್ಭದಲ್ಲಿ ಬರುವ ಎಲ್ಲಾ ಅಡೆತಡೆಗಳನ್ನು ಪಾಸಿಟಿವ್ ಆಗಿ ತೆಗೆದುಕೊಂಡು ವಕೀಲರ ಸಂಘದ ಅಭಿವೃದ್ಧಿಯ ಮೂಲಕ ಆಗಬೇಕಾದ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.ಎರಡನೇ ಅವಧಿಗೆ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲರಿಗೂ ‌ಧನ್ಯವಾದ ನೀಡಿದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎನ್. ನಾಯಕ್ ಹಾಗೂ ಗೌರವ ಅತಿಥಿಗಳಾಗಿ , ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿತನುಡಿ ಗಳನ್ನಾಡಿದರು. ಜೊತೆ ಕಾರ್ಯದರ್ಶಿಯಾದ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ,ಪ್ರದಾನ ಕಾರ್ಯದರ್ಶಿ ಕೆ ನರೇಂದ್ರನಾಥ ಭಂಢಾರಿ ಪ್ರಸ್ತಾವಿಕವಾಗಿ‌ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಉಪಾಧ್ಯಕ್ಷ ದಯಾನಂದ ರೈ, ವಂದಿಸಿದರು. ಅಭಿನಯ ಚಿದಾನಂದ ಹಾಗೂ ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಕಿರಿಯ ವಕೀಲ ಮಿತ್ರರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕಿನ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡ ಉದ್ಘಾಟನೆ ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಬೆಳ್ಳೂರುಬೈಲಿನಲ್ಲಿ ಶ್ರೀ ಮಾರಿಯಮ್ಮ ದೇವಿ ಭಜನಾ ಮಂದಿರದ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮವು ಇಂದು ಭಕ್ತಿಭಾವ ಹಾಗೂ ಸಂಭ್ರಮದ ವಾತಾವರಣದಲ್ಲಿ ನೆರವೇರಿತು.…

    Spread the love

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಸಿಇಟಿ ಫಲಿತಾಂಶದಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅದ್ಭುತ ಸಾಧನೆ ಗುರುವಾಯನಕೆರೆ, ಜೂನ್ 7: ಇತ್ತೀಚೆಗೆ ಪ್ರಕಟಗೊಂಡ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶದಲ್ಲಿ ಗುರುವಾಯನಕೆರೆಯ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತೊಮ್ಮೆ ಗಮನಾರ್ಹ ಸಾಧನೆ ಮಾಡಿ ಶಿಕ್ಷಣ ಕ್ಷೇತ್ರದಲ್ಲಿ ತಮ್ಮ ಮೇಲುಗೈಯನ್ನು…

    Spread the love

    You Missed

    “ಭಜನೆಯಿಂದ ಸಂಸ್ಕಾರ ವೃದ್ಧಿಯಾಗಿ, ಸಮಾಜಸೇವೆಯ ಮನೋಭಾವ ಬೆಳೆಯಲಿ; ವೃದ್ಧಾಶ್ರಮಗಳ ಸಂಖ್ಯೆ ಕಡಿಮೆಯಾಗಲಿ” : ಶಾಸಕ ಹರೀಶ್ ಪೂಂಜಾ

    • By admin
    • June 7, 2026
    • 165 views

    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    • By admin
    • June 6, 2026
    • 233 views
    ಎಕ್ಸೆಲ್ ಕಾಲೇಜಿಗೆ ಮತ್ತೊಂದು ಗರಿ: ಸಿಇಟಿಯಲ್ಲಿ ಮಿಂಚಿದ ಎಕ್ಸೆಲ್ ವಿದ್ಯಾರ್ಥಿಗಳು; ರಾಜ್ಯ ಮಟ್ಟದಲ್ಲಿ ಗಮನಾರ್ಹ ರ‍್ಯಾಂಕ್

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 98 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 86 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 40 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 36 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ