ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ : ವಕೀಲರ ಸಂಘ (ರಿ ) ಬಂಟ್ವಾಳ ಇದರ 2025-2027 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಜೂ.26 ರಂದು ಪ್ರಧಾನ ಸಿವಿಲ್ ನ್ಯಾಯಾಧೀಶರ ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಸಂಘದ ಕಚೇರಿಯಲ್ಲಿ ನಡೆಯಿತು.

ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಬಂಟ್ವಾಳದ ಹಿರಿಯ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾ ಧೀಶರಾದ ಅನಿಲ್ ಪ್ರಕಾಶ್ ಎಂ.ಪಿ , ಮಾತನಾಡಿ, ರಿಚರ್ಡ್ ಕೋಸ್ತಾ ಎಂ ಅವರು ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆ ಆಗಿದ್ದಾರೆ ಅಂದ್ರೆ, ಅವರು ಈ ಹಿಂದೆ ಹಲವಾರು ಉತ್ತಮ ಕೆಲಸಗಳನ್ನು ಮಾಡಿದ್ದಾರೆ ಎಂದು ನಾವು ಭಾವಿಸಬಹುದು. ಇನ್ನು ಬೃಹತ್ ಲೋಕ ಅದಾಲತ್ ಯೋಚನೆ ಮಾಡಲಾಗಿದೆ. ಅಲ್ಲಿ ಎಲ್ಲರೂ ಸಹಕಾರ ನೀಡಿ, ಹೆಚ್ಚು ಪ್ರಕರಣ ಇತ್ಯರ್ಥವಾಗಲು ಸಹಕಾರ ನೀಡಬೇಕು ಎಂದು ತಿಳಿಸಿದರು.ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ರಾದ ಕೃಷ್ಣಮೂರ್ತಿ ಎನ್,ಮಾತನಾಡಿ ಅಧ್ಯಕ್ಷರು ವಕೀಲರ ಸಂಘದ ಮೂಲಕ ಅನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಮನಸ್ಸು ಅವರದ್ದು, ಜೊತೆಗೆ ಪದಾಧಿಕಾರಿಗಳು ಕೂಡ ಕೈ ಜೋಡಿಸಿದ್ದಾರೆ. ನನ್ನ 3 ವರ್ಷದ ಅವಧಿ ಯಲ್ಲಿ, ಬಂಟ್ವಾಳದಲ್ಲಿ ಯಾವುದೇ ಕೆಟ್ಟ ಅನುಭವ ಆಗಿಲ್ಲ ಎಂದು ಅವರು ತಿಳಿಸಿದರು.ನೂತನ ಎಲ್ಲಾ ಯೋಜನೆಗಳು ಸಾಕಾರಗೊಳ್ಳಲಿ ಎಂದು ಶುಭ ಹಾರೈಸಿದರು.ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶರಾದ ರಾಜೇಂದ್ರ ಪ್ರಸಾದ್ ಕೆ.ಎಸ್,ಮಾತನಾಡಿ ಕ್ರಿಯಾಶೀಲ ಸಂಘಟನೆಯ ಪದಾಧಿಕಾರಿಗಳಿಂದ ಉತ್ತಮ ಕೆಲಸದ ನಿರೀಕ್ಷೆ ಮಾಡಬಹುದು ಎಂದು ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಕೀಲರ ಸಂಘ (ರಿ ) ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೋಸ್ತಾಎಂ ಎಂ ಅವರು ಮಾತನಾಡಿಪ್ರಸಕ್ತ ವರ್ಷದಲ್ಲಿ ಮಾಡಬೇಕಾದ ಯೋಜನೆಗಳ ಬಗ್ಗೆ ಪೂರ್ವ ತಯಾರಿ ಮಾಡಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಬೇಕಾಗಿದೆ ಎಂದು ‌ಅವರು ತಿಳಿಸಿದರು.ಹೈ ಕೋರ್ಟು ಪೀಠ ಸ್ಥಾಪನೆ ವಿಚಾರದ ಹೋರಾಟಕ್ಕೆ ವೇಗ ನೀಡುವಲ್ಲಿ ವಕೀಲ ಮಿತ್ರರ ಸಹಕಾರ ಯಾಚಿಸಿದರು. ಕೆಲಸ ಮಾಡುವ ಸಂದರ್ಭದಲ್ಲಿ ಬರುವ ಎಲ್ಲಾ ಅಡೆತಡೆಗಳನ್ನು ಪಾಸಿಟಿವ್ ಆಗಿ ತೆಗೆದುಕೊಂಡು ವಕೀಲರ ಸಂಘದ ಅಭಿವೃದ್ಧಿಯ ಮೂಲಕ ಆಗಬೇಕಾದ ಕೆಲಸಗಳನ್ನು ಮಾಡುತ್ತೇನೆ ಎಂದು ಭರವಸೆ ನೀಡಿದರು.ಎರಡನೇ ಅವಧಿಗೆ ಅಧ್ಯಕ್ಷನಾಗಿ ಆಯ್ಕೆ ಮಾಡಿದ ಎಲ್ಲರಿಗೂ ‌ಧನ್ಯವಾದ ನೀಡಿದರು.ಮುಖ್ಯ ಅತಿಥಿಗಳಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶರಾದ ಎಸ್.ಎನ್. ನಾಯಕ್ ಹಾಗೂ ಗೌರವ ಅತಿಥಿಗಳಾಗಿ , ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಎಚ್.ವಿ. ರಾಘವೇಂದ್ರ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿತನುಡಿ ಗಳನ್ನಾಡಿದರು. ಜೊತೆ ಕಾರ್ಯದರ್ಶಿಯಾದ ಅಕ್ಷತಾ ಶೆಟ್ಟಿ, ಕೋಶಾಧಿಕಾರಿಯಾಗಿ ಜೆಸಿಂತಾ ಕ್ರಾಸ್ತಾ ಉಪಸ್ಥಿತರಿದ್ದರು.ಕಾರ್ಯಕ್ರಮದಲ್ಲಿ,ಪ್ರದಾನ ಕಾರ್ಯದರ್ಶಿ ಕೆ ನರೇಂದ್ರನಾಥ ಭಂಢಾರಿ ಪ್ರಸ್ತಾವಿಕವಾಗಿ‌ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿದರು. ಉಪಾಧ್ಯಕ್ಷ ದಯಾನಂದ ರೈ, ವಂದಿಸಿದರು. ಅಭಿನಯ ಚಿದಾನಂದ ಹಾಗೂ ವೀರೇಂದ್ರ ಎಂ ಸಿದ್ದಕಟ್ಟೆ ಕಾರ್ಯಕ್ರಮ ನಿರೂಪಿಸಿದರು.ಹಿರಿಯ ಕಿರಿಯ ವಕೀಲ ಮಿತ್ರರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕಿನ ವಕೀಲರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 6 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ