ಚಿಕ್ಕಮಗಳೂರು ವಕೀಲರ ಮೇಲಿನ ಹಲ್ಲೆ ಖಂಡಿಸಿ ಬಂಟ್ವಾಳದಲ್ಲಿ ವಕೀಲರಿಂದ ಪ್ರತಿಭಟನೆ ವಕೀಲರ ರಕ್ಷಣಾ ಕಾಯಿದೆಯನ್ನು ತಕ್ಷಣ ಜಾರಿಗೆ ತರುವಂತೆ ಸರ್ಕಾರಕ್ಕೆ ಆಗ್ರಹ

ಬಂಟ್ವಾಳ: ಚಿಕ್ಕಮಂಗಳೂರಿನಲ್ಲಿ ಯುವ ವಕೀಲರಾದ ಪ್ರೀತಮ್ ಎಂ ಟಿ ಇವರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿ ವಕೀಲರ ಸಂಘ (ರಿ ) ಬಂಟ್ವಾಳ ಇದರ ವತಿಯಿಂದ ಇಂದು ದಿನಾಂಕ 4/12/2023 ರಂದು ಬಂಟ್ವಾಳದ ಜೆ ಎಂ ಎಫ್ ಸಿ ನ್ಯಾಯಾಲಯದ ಎದುರು ಪ್ರತಿಭಟನೆಯನ್ನು ನಡೆಸಿದರು.

ಪ್ರತಿಭಟನೆಯ ನಂತರ ಮಾನ್ಯ ಗ್ರಹ ಸಚಿವರು, ಕರ್ನಾಟಕ ಸರಕಾರ ಇವರಿಗೆ ತಹಸೀಲ್ದಾರ್ ಬಂಟ್ವಾಳ ಇವರ ಮುಖಾoತರ ಮನವಿಯನ್ನು ಸಲ್ಲಿಸಲಾಯಿತು. ತಪ್ಪಿತಸ್ಥ ಪೋಲೀಸರನ್ನು ತಕ್ಷಣ ಬಂಧಿಸಬೇಕು ಮತ್ತು ಅವರ ವಿರುದ್ದ ಕಾನೂನಾತ್ಮಕ ಕ್ರಮ ಕೈಗೊಳ್ಳಬೇಕು ಮತ್ತು ತಕ್ಷಣ ಸರಕಾರ ವಕೀಲರ ರಕ್ಷಣಾ ಕಾಯಿದೆ ಜಾರಿಗೊಳಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ವಕೀಲರ ಸಂಘ (ರಿ ) ಬಂಟ್ವಾಳದ ಮಾಜಿ ಅಧ್ಯಕ್ಷರಾದ ಉಮೇಶ್ ಕುಮಾರ್ ವೈ ಮಾತಾಡುತ್ತಾ ಪೊಲೀಸರ ದೌರ್ಜನ್ಯ ಕಾನೂನು ಬಾಹಿರವಾದುದ್ದು ಅಲ್ಲದೆ ಆರೋಪಿಗಳ ವಿರುದ್ದ I P C ಸೆಕ್ಷನ್ 307 ಪ್ರಕಾರ FIR ದಾಖಲೆ ಆದರೂ ಈ ವರೆಗೂ ಬಂಧಿಸದೆ ಇರೋದು ವಿಳಂಬ ದೋರಣೆಯಾಗಿದೆ. ಇದನ್ನು ವಕೀಲರ ಸಂಘ (ರಿ ) ಬಂಟ್ವಾಳ ತೀವ್ರವಾಗಿ ಖಂಡಿಸುತ್ತದೆ. ವಕೀಲರ ಮೇಲಿನ ದೌರ್ಜನ್ಯ ತಡೆಗೆ ವಕೀಲರ ರಕ್ಷಣಾ ಕಾಯಿದೆಯನ್ನು ಸರಕಾರ ತಕ್ಷಣ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ವಕೀಲರಾದ ಮೋಹನ್ ಕಡೇಶಿವಾಲ್ಯ ಮಾತನಾಡಿ ನಿರಂತರವಾಗಿ ಯುವ ವಕೀಲರ ಮೇಲಿನ ದೌರ್ಜನ್ಯ ಖoಡನೀಯ . ನ್ಯಾಯಾಲಯ ಈ ಬಗ್ಗೆ ತಕ್ಷಣ ಮದ್ಯ ಪ್ರವೇಶಬೇಕು ಎಂಬುದಾಗಿ ಒತ್ತಾಯಿಸಿದರು. ಪ್ರತಿಭಟನೆಯ ಸಂದರ್ಭದಲ್ಲಿ ವಕೀಲರ ಸಂಘ (ರಿ ) ಬಂಟ್ವಾಳದ ಅಧ್ಯಕ್ಷರಾದ ರಿಚರ್ಡ್ ಕೋಸ್ತಾ ರವರು ಮಾತಾಡಿ ಹಲ್ಲೆಗೊಳಗಾದ ವಕೀಲರಾದ ಪ್ರೀತಮ್ ಎಂ ಟಿ ಅವರ ಬೆಂಬಲವಾಗಿ ವಕೀಲರ ಸಂಘ (ರಿ ) ಬಂಟ್ವಾಳ ಸದಾ ಜೊತೆಗಿರುತ್ತದೆ ಎಂಬ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ವಕೀಲರ ಸಂಘ (ರಿ ) ಬಂಟ್ವಾಳದ ಹಿರಿಯ ಕಿರಿಯ ವಕೀಲ ಮಿತ್ರರು ಉಪಸ್ಥಿತರಿದ್ದರು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ