BBMP ಆಯುಕ್ತರಾಗಿ ಮಂಜುನಾಥ ಪ್ರಸಾದ್ ರವರನ್ನು ನೇಮಕಗೊಳಿಸಿ ರಾಜ್ಯಸರ್ಕಾರದ ಆದೇಶ

ಬೆಂಗಳೂರು: ಕೊರೋನಾಗೆ ಬೆಂಗಳೂರಿನಲ್ಲಿ ನಡೆಯಿತು ಮೊದಲ ಅಧಿಕಾರಿಯ ತಲೆದಂಡ. ಅನಿಲ್ ಕುಮಾರ್ BBMP ಆಯುಕ್ತರಾಗಿದ್ದರು ಇದೀಗ ಮಂಜುನಾಥ ಪ್ರಸಾದ್ ರವರನ್ನು ಆಯ್ಕೆ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಕೊರೋನಾ ಗೆ ಸಂಬಂಧಿಸಿದಂತೆ ಕಾರ್ಯವೈಖರಿಯಲ್ಲಿ ಮುಖ್ಯಮಂತ್ರಿಯವರು ಅಸಮಾಧಾನಗೊಂಡಿದ್ದರು ಇದರ ಬೆನ್ನಲ್ಲೇ ಈಗ ವರ್ಗಾವಣೆ ಮಾಡಿ ರಾಜ್ಯಸರ್ಕಾರ ಆದೇಶಿಸಿದೆ.

ಕೋವಿಡ್ ಪರಿಸ್ಥಿತಿ ನಿಯಂತ್ರಿಸುವಲ್ಲಿ ಅನಿಲ್​ ಕುಮಾರ್ ಅವರು ವೈಫಲ್ಯರಾಗಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೇ ಹೈಕೋರ್ಟ್‌ನಿಂದಲೂ ಬಿಬಿಎಂಪಿ ಕಾರ್ಯ ವೈಖರಿಗೆ ಚಾಟಿ ಬೀಸಿತ್ತು. ಈ ಕಾರಣಕ್ಕೆ ಅನಿಲ್ ಕುಮಾರ್ ಅವರನ್ನು ಆ ಸ್ಥಾನದಿಂದ ಎತ್ತಂಗಡಿ ಮಾಡಬೇಕು ಎನ್ನುವ ಮಾತು ಕೇಳಿ ಬಂದಿತ್ತು. ಅಲ್ಲದೆ,ಈ ಹಿಂದೆ ಬಿಬಿಎಂಪಿ ಆಯುಕ್ತರಾಗಿ ಕೆಲಸ ಮಾಡಿದ್ದ ಕುಮಾರ ನಾಯಕ್ ಅವರನ್ನು ಬಿಬಿಎಂಪಿ ಆಯುಕ್ತರನ್ನಾಗಿ ನೇಮಿಸಲು ಚಿಂತನೆ ನಡೆದಿದೆ ಎನ್ನಲಾಗಿತ್ತು. ಆದರೆ, ಈ ಸ್ಥಾನಕ್ಕೆ ಈಗ ಎನ್.ಮಂಜುನಾಥ್ ಪ್ರಸಾದ್ ಅವರನ್ನು ನೂತನ ಕಮಿಷನರ್​ ಆಗಿ ನೇಮಕ ಮಾಡಲಾಗಿದೆ. ಇನ್ನು, ಅನಿಲ್ ಕುಮಾರ್ ರನ್ನು ಸಾರ್ವಜನಿಕ ಉದ್ದಿಮೆ ಅಪರ ಮುಖ್ಯ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಲಾಗಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 65 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 106 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 45 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 615 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 151 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 64 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ