ನಿಮಗೆ ಆಕರ್ಷಕ ಸ್ಮರಣಿಕೆಯನ್ನು ಹುಡುಕುವ ಹಂಬಲವೇ ಹಾಗಾದ್ರೆ ನವರಂಗ ಸ್ಮರಣಿಕಾಕ್ಕೆ ಭೇಟಿ ನೀಡಿ

ನಿಮ್ಮಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಬಂದ ಅತಿಥಿಗಳಿಗೆ ನೆನಪಲ್ಲಿ ಉಳಿಯಲು ಒಂದು ಸ್ಮರಣಿಕೆ ಬೇಕಾಗಿದೆ ಎಂದಿಟ್ಟುಕೊಳ್ಳಿ . ನಾವು ಕೊಡುವ ಸ್ಮರಣಿಕೆ ನಮ್ಮ ಕಲ್ಪನೆಯಂತೆ ಇರಬೇಕೆಂಬ ಅಪೇಕ್ಷೆ ಪಟ್ಟರೆ ಖಂಡಿತವಾಗಿ ನೀವು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಸಮೀಪ ತಲೆಯೆತ್ತಿ ನಿಂತಿರುವ ನವರಂಗ್ ಸ್ಮರಣಿಕೆಗಳ ಮಳಿಗೆಗೆ ಭೇಟಿ ನೀಡಬಹುದಾಗಿದೆ.

ವಿಸ್ತಾರವಾದ ಮಳಿಗೆ, ನಗುಮೊಗದಿಂದ ಸ್ವಾಗತಿಸುವ ಶ್ರಮಿಕರು, ಒಳಹೋಗುತ್ತಿದ್ದಂತೆ ಕಣ್ಮಣ ತಣಿಸುವ ಚಿತ್ರ
ವೈಚಿತ್ರಗಳಿಂದ ಕೂಡಿದ ಸ್ಮರಣಿಕೆಗಳ ಬೃಹತ್ ಸಂಗ್ರಹ. ಅದರಲ್ಲೊಂದು ಆಯ್ಕೆ ಮಾಡಿ ಮುಂದಡಿ ಇಟ್ಟಾಗ ಸದಾ ಹಸನ್ಮುಖದಿಂದ ಬರಮಾಡಿಕೊಳ್ಳುವ ಮಲ್ಯರು. ಹೌದು ನವರಂಗ್ ಎಂಬ ಬಿ.ಸಿ ರೋಡಿನ ಅದ್ಭುತ ಸ್ಮರಣಿಕೆಗಳ ಅಗಾಧ ಆಯ್ಕೆ ಮಳಿಗೆಯ ಕೇಂದ್ರ ಶಕ್ತಿ ಮಲ್ಯರು .ಸದಾ ಹಸನ್ಮುಖಿ, ಯಾರು ಬಂದರೂ ಸತ್ಕರಿಸಿ ಕೂರಿಸಿ ಮಾತನಾಡುವ ಔದಾರ್ಯ . ಎಲ್ಲವನ್ನೂ ನಗುತ್ತ ವಿವರಿಸುವ ಜಾದುಗಾರ. ನಿಮ್ಮ ಆಯ್ಕೆಯಲ್ಲದೆ ನಿಮ್ಮ ಮನದಲ್ಲಿರುವ ಕಲ್ಪನೆಗಳಿಗೂ ಬಣ್ಣ ಹಚ್ಚಿ ಸ್ಮರಣಿಕೆ ತಯಾರಿಸುವ ಮಾಂತ್ರಿಕ ಅವರು. ಕೇವಲ ವ್ಯಾಪಾರ ದೃಷ್ಟಿ ಮಾತ್ರವಲ್ಲದೆ, ಮಾನವೀಯತೆ , ಸಮಾಜಮುಖಿ , ಸಾಧನಶೀಲ ವ್ಯಕ್ತಿತ್ವ ಅವರದ್ದು . ಪ್ರಕೃತಿ ಪ್ರಿಯರಾದ ಮಲ್ಯರು ಪ್ರತಿ ಭಾನುವಾರ ಒಂದಿಲ್ಲೊಂದು ಪ್ರಕೃತಿ ಶಿಬಿರಗಳಿಗೆ ಭೇಟಿ ನೀಡುತ್ತಾರೆ. ಅಷ್ಟೇ ಅಲ್ಲದೆ ತುಳುನಾಡಿನ ಹಣ್ಣುಗಳ ರಾಜ ಹಲಸಿನ ಬಗ್ಗೆ ವಿಶೇಷ ವ್ಯಾಮೋಹ ಹೊಂದಿರುವ ಇವರು ಬಂಟ್ವಾಳದಲ್ಲಿ ಹಲಸು ಮೇಳವನ್ನು ಸಂಯೋಜಿಸಿದವರಲ್ಲಿ ಓರ್ವರು . ಆಸ್ಟ್ರೇಲಿಯಾದ ಖ್ಯಾತ ಹಣ್ಣು ತಜ್ಞ ಕೆನ್ ಲವ್ ಜೊತೆಗೆ ಸಂಪರ್ಕವಿರುವ ಮಲ್ಯರು ಶ್ರೀ ಪಡ್ರೆಯವರ ನಿಕಟವರ್ತಿಗಳು.


ಬಡತನದೊಂದಿಗೆ ಬಂಟ್ವಾಳದಲ್ಲಿ ಜನಿಸಿದ ಮೌನೇಶ್ ಮಲ್ಯರು, ಎಸ್ವಿಎಸ್ ಪ್ರೌಢ ಶಾಲೆ ಮತ್ತು ಕಾಲೇಜು ಬಂಟ್ವಾಳದಲಿೢ ಕಾಲೇಜು ಶಿಕ್ಷಣ ಮುಗಿಸಿ ಮುಂದೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದರು. ಶಿಕ್ಷಣದ ನಂತರ ನಾಲ್ಕು ವರ್ಷಗಳ ಕಾಲ ವ್ಯಂಗ್ಯಚಿತ್ರಕಾರರಾಗಿ 2000 ಕ್ಕಿಂತಲೂ ಅಧಿಕ ವ್ಯಂಗ್ಯಚಿತ್ರಗಳನ್ನು ನಾಡಿನ ಪ್ರಮುಖ ಪತ್ರಿಕೆಗಳಾದ ಸುಧಾ, ತರಂಗ, ಕರ್ಮವೀರ, ಮಂಗಳ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡು ರಾಜ್ಯಮಟ್ಟದಲ್ಲಿ ಹೆಸರು ಗಳಿಸಿದವರು .ನಂತರದ ದಿನಗಳಲ್ಲಿ ಮಲ್ಯರು ನಾಟಕ ರಂಗದ ಮೇಕಪ್ ಕಲಾವಿದರಾಗಿ ಸುಮಾರು ವರ್ಷ ರಂಗಭೂಮಿಯಲ್ಲಿ ದುಡಿದು, ನಂತರ ಸಣ್ಣ ಮಟ್ಟದಲ್ಲಿ ಬಿಸಿ ರೋಡಿನಲ್ಲಿ ನವರಂಗ್ ಎಂಬ ಸ್ಮರಣಿಕೆಗಳ ಮಳಿಗೆಯನ್ನು ಆರಂಭಿಸಿದರು. ಈಗಿದು ಸ್ಮರಣಿಕೆಗಳ ತಯಾರಿಯ ಲೋಕದಲ್ಲಿ ನವರಂಗ್ ಒಂದು ದೊಡ್ಡ ಹೆಸರು. ದಕ್ಷಿಣ ಕನ್ನಡ, ಉಡುಪಿ , ಕಾಸರಗೋಡು, ಹಾಸನ, ಚಿಕ್ಕಮಗಳೂರು ಅಲ್ಲದೆ ಮುಂಬಯಿ , ಅಬುಧಾಬಿಯಲ್ಲಿ ತನ್ನ ನವರಂಗಿನ ಸ್ಮರಣಿಕೆಗಳ ಘಮಲವನ್ನು ಹಂಚಿದ್ದಾರೆ .ಏನೇ ಆಗಲಿ ಮೌನೇಶ್ ಮಲ್ಯರ ನೆನಪಿನ ಕಾಣಿಕೆಗಳು ನೂರಾರು ವರ್ಷ ನೆನಪಿನಲ್ಲಿ ಉಳಿಯುವಂತಾಗಲಿ.. ನಿಮಗೇನಾದರೂ ಬಿಡುವಿದ್ದರೆ ಸ್ಮರಣಿಕೆಗಳು ಬೇಕೆನಿಸಿದರೆ ದಯವಿಟ್ಟು ಬಿಸಿರೋಡಿನಿಂದ ಮುಂದೆ ಪಾಣೆಮಂಗಳೂರು ಸಮೀಪವಿರುವ ನವರಂಗ ಸ್ಮರಣಿಕಾಕ್ಕೆ ತಪ್ಪದೆ ಭೇಟಿ ನೀಡಿ ..
ಶುಭ ಹಾರೈಕೆಯೊಂದಿಗೆ,

ಬರಹ: 🖊️ ಹರೀಶ್ ಮಂಜೊಟ್ಟಿ, ಪೆರಾಜೆ, ಬಂಟ್ವಾಳ.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 15 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 21 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 71 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 35 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 145 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 189 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”