ನಿಮಗೆ ಆಕರ್ಷಕ ಸ್ಮರಣಿಕೆಯನ್ನು ಹುಡುಕುವ ಹಂಬಲವೇ ಹಾಗಾದ್ರೆ ನವರಂಗ ಸ್ಮರಣಿಕಾಕ್ಕೆ ಭೇಟಿ ನೀಡಿ

ನಿಮ್ಮಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಬಂದ ಅತಿಥಿಗಳಿಗೆ ನೆನಪಲ್ಲಿ ಉಳಿಯಲು ಒಂದು ಸ್ಮರಣಿಕೆ ಬೇಕಾಗಿದೆ ಎಂದಿಟ್ಟುಕೊಳ್ಳಿ . ನಾವು ಕೊಡುವ ಸ್ಮರಣಿಕೆ ನಮ್ಮ ಕಲ್ಪನೆಯಂತೆ ಇರಬೇಕೆಂಬ ಅಪೇಕ್ಷೆ ಪಟ್ಟರೆ ಖಂಡಿತವಾಗಿ ನೀವು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಸಮೀಪ ತಲೆಯೆತ್ತಿ ನಿಂತಿರುವ ನವರಂಗ್ ಸ್ಮರಣಿಕೆಗಳ ಮಳಿಗೆಗೆ ಭೇಟಿ ನೀಡಬಹುದಾಗಿದೆ.

ವಿಸ್ತಾರವಾದ ಮಳಿಗೆ, ನಗುಮೊಗದಿಂದ ಸ್ವಾಗತಿಸುವ ಶ್ರಮಿಕರು, ಒಳಹೋಗುತ್ತಿದ್ದಂತೆ ಕಣ್ಮಣ ತಣಿಸುವ ಚಿತ್ರ
ವೈಚಿತ್ರಗಳಿಂದ ಕೂಡಿದ ಸ್ಮರಣಿಕೆಗಳ ಬೃಹತ್ ಸಂಗ್ರಹ. ಅದರಲ್ಲೊಂದು ಆಯ್ಕೆ ಮಾಡಿ ಮುಂದಡಿ ಇಟ್ಟಾಗ ಸದಾ ಹಸನ್ಮುಖದಿಂದ ಬರಮಾಡಿಕೊಳ್ಳುವ ಮಲ್ಯರು. ಹೌದು ನವರಂಗ್ ಎಂಬ ಬಿ.ಸಿ ರೋಡಿನ ಅದ್ಭುತ ಸ್ಮರಣಿಕೆಗಳ ಅಗಾಧ ಆಯ್ಕೆ ಮಳಿಗೆಯ ಕೇಂದ್ರ ಶಕ್ತಿ ಮಲ್ಯರು .ಸದಾ ಹಸನ್ಮುಖಿ, ಯಾರು ಬಂದರೂ ಸತ್ಕರಿಸಿ ಕೂರಿಸಿ ಮಾತನಾಡುವ ಔದಾರ್ಯ . ಎಲ್ಲವನ್ನೂ ನಗುತ್ತ ವಿವರಿಸುವ ಜಾದುಗಾರ. ನಿಮ್ಮ ಆಯ್ಕೆಯಲ್ಲದೆ ನಿಮ್ಮ ಮನದಲ್ಲಿರುವ ಕಲ್ಪನೆಗಳಿಗೂ ಬಣ್ಣ ಹಚ್ಚಿ ಸ್ಮರಣಿಕೆ ತಯಾರಿಸುವ ಮಾಂತ್ರಿಕ ಅವರು. ಕೇವಲ ವ್ಯಾಪಾರ ದೃಷ್ಟಿ ಮಾತ್ರವಲ್ಲದೆ, ಮಾನವೀಯತೆ , ಸಮಾಜಮುಖಿ , ಸಾಧನಶೀಲ ವ್ಯಕ್ತಿತ್ವ ಅವರದ್ದು . ಪ್ರಕೃತಿ ಪ್ರಿಯರಾದ ಮಲ್ಯರು ಪ್ರತಿ ಭಾನುವಾರ ಒಂದಿಲ್ಲೊಂದು ಪ್ರಕೃತಿ ಶಿಬಿರಗಳಿಗೆ ಭೇಟಿ ನೀಡುತ್ತಾರೆ. ಅಷ್ಟೇ ಅಲ್ಲದೆ ತುಳುನಾಡಿನ ಹಣ್ಣುಗಳ ರಾಜ ಹಲಸಿನ ಬಗ್ಗೆ ವಿಶೇಷ ವ್ಯಾಮೋಹ ಹೊಂದಿರುವ ಇವರು ಬಂಟ್ವಾಳದಲ್ಲಿ ಹಲಸು ಮೇಳವನ್ನು ಸಂಯೋಜಿಸಿದವರಲ್ಲಿ ಓರ್ವರು . ಆಸ್ಟ್ರೇಲಿಯಾದ ಖ್ಯಾತ ಹಣ್ಣು ತಜ್ಞ ಕೆನ್ ಲವ್ ಜೊತೆಗೆ ಸಂಪರ್ಕವಿರುವ ಮಲ್ಯರು ಶ್ರೀ ಪಡ್ರೆಯವರ ನಿಕಟವರ್ತಿಗಳು.


ಬಡತನದೊಂದಿಗೆ ಬಂಟ್ವಾಳದಲ್ಲಿ ಜನಿಸಿದ ಮೌನೇಶ್ ಮಲ್ಯರು, ಎಸ್ವಿಎಸ್ ಪ್ರೌಢ ಶಾಲೆ ಮತ್ತು ಕಾಲೇಜು ಬಂಟ್ವಾಳದಲಿೢ ಕಾಲೇಜು ಶಿಕ್ಷಣ ಮುಗಿಸಿ ಮುಂದೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಡಿಪ್ಲೊಮಾ ಪದವಿಯನ್ನು ಪಡೆದರು. ಶಿಕ್ಷಣದ ನಂತರ ನಾಲ್ಕು ವರ್ಷಗಳ ಕಾಲ ವ್ಯಂಗ್ಯಚಿತ್ರಕಾರರಾಗಿ 2000 ಕ್ಕಿಂತಲೂ ಅಧಿಕ ವ್ಯಂಗ್ಯಚಿತ್ರಗಳನ್ನು ನಾಡಿನ ಪ್ರಮುಖ ಪತ್ರಿಕೆಗಳಾದ ಸುಧಾ, ತರಂಗ, ಕರ್ಮವೀರ, ಮಂಗಳ ಮುಂತಾದ ಪತ್ರಿಕೆಗಳಲ್ಲಿ ಪ್ರಕಟಗೊಂಡು ರಾಜ್ಯಮಟ್ಟದಲ್ಲಿ ಹೆಸರು ಗಳಿಸಿದವರು .ನಂತರದ ದಿನಗಳಲ್ಲಿ ಮಲ್ಯರು ನಾಟಕ ರಂಗದ ಮೇಕಪ್ ಕಲಾವಿದರಾಗಿ ಸುಮಾರು ವರ್ಷ ರಂಗಭೂಮಿಯಲ್ಲಿ ದುಡಿದು, ನಂತರ ಸಣ್ಣ ಮಟ್ಟದಲ್ಲಿ ಬಿಸಿ ರೋಡಿನಲ್ಲಿ ನವರಂಗ್ ಎಂಬ ಸ್ಮರಣಿಕೆಗಳ ಮಳಿಗೆಯನ್ನು ಆರಂಭಿಸಿದರು. ಈಗಿದು ಸ್ಮರಣಿಕೆಗಳ ತಯಾರಿಯ ಲೋಕದಲ್ಲಿ ನವರಂಗ್ ಒಂದು ದೊಡ್ಡ ಹೆಸರು. ದಕ್ಷಿಣ ಕನ್ನಡ, ಉಡುಪಿ , ಕಾಸರಗೋಡು, ಹಾಸನ, ಚಿಕ್ಕಮಗಳೂರು ಅಲ್ಲದೆ ಮುಂಬಯಿ , ಅಬುಧಾಬಿಯಲ್ಲಿ ತನ್ನ ನವರಂಗಿನ ಸ್ಮರಣಿಕೆಗಳ ಘಮಲವನ್ನು ಹಂಚಿದ್ದಾರೆ .ಏನೇ ಆಗಲಿ ಮೌನೇಶ್ ಮಲ್ಯರ ನೆನಪಿನ ಕಾಣಿಕೆಗಳು ನೂರಾರು ವರ್ಷ ನೆನಪಿನಲ್ಲಿ ಉಳಿಯುವಂತಾಗಲಿ.. ನಿಮಗೇನಾದರೂ ಬಿಡುವಿದ್ದರೆ ಸ್ಮರಣಿಕೆಗಳು ಬೇಕೆನಿಸಿದರೆ ದಯವಿಟ್ಟು ಬಿಸಿರೋಡಿನಿಂದ ಮುಂದೆ ಪಾಣೆಮಂಗಳೂರು ಸಮೀಪವಿರುವ ನವರಂಗ ಸ್ಮರಣಿಕಾಕ್ಕೆ ತಪ್ಪದೆ ಭೇಟಿ ನೀಡಿ ..
ಶುಭ ಹಾರೈಕೆಯೊಂದಿಗೆ,

ಬರಹ: 🖊️ ಹರೀಶ್ ಮಂಜೊಟ್ಟಿ, ಪೆರಾಜೆ, ಬಂಟ್ವಾಳ.

Spread the love
  • Related Posts

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಮುಂಬೈ: ಐಸಿಸಿ ಟಿ–20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್‌ಗೆ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ಸಮಗ್ರ ಆಟದ ಪ್ರದರ್ಶನ ನೀಡಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ…

    Spread the love

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ: ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ ನೀಡಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿಗಳಾದ ಮಹಾಸ್ವಾಮಿಗಳು ಶಾಸಕ ಹರೀಶ್…

    Spread the love

    You Missed

    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    • By admin
    • March 5, 2026
    • 11 views
    ಇಂಗ್ಲೆಂಡ್ ವಿರುದ್ಧ ಗೆದ್ದು ಫೈನಲ್‌ಗೆ ಭಾರತ ಪ್ರವೇಶ

    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    • By admin
    • March 5, 2026
    • 33 views
    ಶ್ರೀರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಮಹಾಸ್ವಾಮಿಗಳಿಂದ ಶಾಸಕ ಹರೀಶ್ ಪೂಂಜಾ ರವರ ನಿವಾಸ ಮಿಥಿಲಾಗೆ ಭೇಟಿ

    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    • By admin
    • March 5, 2026
    • 49 views
    ಬೆಳ್ತಂಗಡಿ : ಕಡಿರುದ್ಯಾವರ ಅಕ್ರಮ ಮರಳು ಸಾಗಾಟಕ್ಕೆ ಯತ್ನ, ಬೆಳ್ತಂಗಡಿ ಪೊಲೀಸರಿಂದ ಇಬ್ಬರ ವಿರುದ್ಧ ಪ್ರಕರಣ ದಾಖಲು

    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ, ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    • By admin
    • March 5, 2026
    • 22 views
    ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ವಿಜಯಗೋಪುರ ಲೋಕಾರ್ಪಣೆ,  ಊರಿನ ಧಾರ್ಮಿಕ ಕ್ಷೇತ್ರಗಳನ್ನು ನೋಡಿದಾಗ ಊರಿನ ಸ್ಥಿತಿಯನ್ನು ಅರಿಯಬಹುದು: ಡಾ.ಹೆಗ್ಗಡೆ

    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    • By admin
    • March 5, 2026
    • 15 views
    ರಾಜಸ್ಥಾನದಲ್ಲಿ ಅಖಿಲ ಭಾರತ ಮಟ್ಟದ ಬೈಠಕ್

    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ

    • By admin
    • March 4, 2026
    • 20 views
    ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ– ಶಾಸಕ ಹರೀಶ್ ಪೂಂಜ