ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಎರಡು A ಗ್ರೇಡ್ ತಶೀಲ್ದಾರ್ ನೇಮಕ ಅವಶ್ಯಕ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಎರಡು Aಗ್ರೇಡ್ ತಹಶೀಲ್ದಾರ್ ನೇಮಕ ಆಗಬೇಕು ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದ್ದು 2ಲಕ್ಷಕ್ಕೂ ಮಿಗಿಲಾಗಿ ರೆವೆನ್ಯೂ RTC ಇದ್ದು, ತಾಲೂಕಿನ ಇತರೇ ಜವಾಬ್ದಾರಿ ಕೆಲಸಗಳು ಹಾಗೂ ಪುಣ್ಯ ಕ್ಷೇತ್ರ ಭೇಟಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಬರುವ ಸಮಯದಲ್ಲಿ, ಹಾಗೂ ವಿಪತ್ತು ಮತ್ತು ಅಪತ್ತು ಹಾಗೂ ಇತರೇ ಸಾರ್ವಜನಿಕ ಜಂಜಾಟಗಳು ಬರುವಾಗ 81ಗ್ರಾಮದ ಕಡೆ ಗಮನ ಹರಿಸಲು ಸಾಧ್ಯವಾಗದೇ ಸಹಜವಾಗಿ ತಹಶೀಲ್ದಾರ್ ಒತ್ತಡಕ್ಕೆ ಸಿಲುಕಿ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದನೆ ನೀಡಲು ಸಾಧ್ಯವಿಲ್ಲ ಹಾಗಾಗಿ ರಾಜ್ಯ ಸರ್ಕಾರ ಜನಸಾಮಾನ್ಯರ ಕೂಗಿಗೆ ಧ್ವನಿ ಯಾಗಬೇಕು ಎಂಬ ಕೂಗೂ ಜೋರಾಗಿ ಕೇಳಿ ಬರುತ್ತಿದೆ. ತಾಲೂಕಿನಲ್ಲಿ ಪ್ರಸ್ತುತ ರಾಜ್ಯಸರ್ಕಾರವನ್ನು ಪ್ರತಿನಿಧಿಸುವ ಒರ್ವ ಶಾಸಕರು, 2ಮಂದಿ ವಿಧಾನ ಪರಿಷತ್ ಸದಸ್ಯರು ಇದ್ದು ಕೂಡಲೇ ಸರ್ಕಾರದ ಗಮನಸೆಳೆಯಬೇಕಾಗಿದೆ.

ಬೆಳ್ತಂಗಡಿ ತಾಲೂಕು 81ಗ್ರಾಮ ಪಂಚಾಯತ್ ಗಳನ್ನು ಒಳಗೊಂಡ ಅತೀ ದೊಡ್ಡ ತಾಲೂಕು 4ಹೋಬಳಿಗಳು ಇದ್ದು ಬಹುತೇಕ ಜನರು ಕೃಷಿ ಚಟುವಟಿಕೆಗಳನ್ನೇ ಅವಲಂಭಿಸಿರುತ್ತಾರೆ. ಹೈನುಗಾರಿಕೆ ಇಲ್ಲಿಯ ಉಪಕಸೂಬು ಆಗಿರುತ್ತದೆ.

ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ವಿಸ್ತಾರವಾದ ತಾಲೂಕು. ಎಳನೀರು,ದಿಡುಪೆ ,ಚಾರ್ಮಾಡಿಯಿಂದ ಪೂಂಜಾಲಕಟ್ಟೆಯವರೆಗೂ, ವೇಣೂರು ನಿಂದ ಉಪ್ಪಿನಂಗಡಿಯವರೆಗೂ ಬೆಳ್ತಂಗಡಿ ತಾಲೂಕು ಹರಡಿದೆ. ಇದರ ಪೂರ್ವ-ಉತ್ತರ ಭಾಗದಲ್ಲಿ ರಮಣೀಯವಾದ ಪಶ್ಚಿಮ ಘಟ್ಟವಿದೆ. ಈ ತಾಲೂಕಿನಲ್ಲಿ ಪ್ರಸಿದ್ದ ಯಾತ್ರಾಸ್ಥಳ ಧರ್ಮಸ್ಥಳ, ಶಿಕ್ಷಣ ಕೇಂದ್ರವಾದ ಉಜಿರೆ, ಪ್ರೇಕ್ಷಣೀಯ ಸ್ಥಳವಾದ ಜಮಲಾಬಾದ್ ಕೋಟೆಯೂ ಇದೆ. ಇದಲ್ಲದೆ ಬೆಳ್ತಂಗಡಿಯಲ್ಲಿ ಹಲವಾರು ಧಾರ್ಮಿಕ ಕ್ಷೇತ್ರಗಳೂ ಇವೆ.

ತಾಲೂಕಿನಲ್ಲಿ ಬಹಳಷ್ಟು ರೈತರಿಗೆ ಇನ್ನೂ ಕೂಡ ಸರಿಯಾಗಿ ತಮ್ಮ ಜಮೀನುಗಳ ಮೂಲ ದಾಖಲೆಗಳನ್ನು ಸರಿಪಡಿಸಿಕೊಳ್ಳು ಆಗದೇ ತೀವ್ರ ಸಮಸ್ಯೆ ಇರುವ ಈ ತಾಲೂಕಿನ ಆಡಳಿತ ದೃಷ್ಟಿಯಿಂದ ತಾಲೂಕಿಗೆ 2 Aಗ್ರೇಡ್ ತಹಶೀಲ್ದಾರ್ ಅವಶ್ಯಕವಾಗಿ ಬೇಕಾಗಿದೆ ಎಂಬುದು ಸಾರ್ವಜನಿಕರ ಕೂಗಾಗಿದೆ. ಹತ್ತು ಹಲವಾರು ವರ್ಷಗಳಿಂದ ಪ್ಲೋಟಿಂಗ್ ಮಾಡಲು ಬಾಕಿ ಇರುವ ಬಹಳಷ್ಟು ಜಾಗಗಳು ಇದ್ದು ಇದಕ್ಕಾಗಿ ಹಣ ಸಂದಾಯ ಮಾಡಿ ವರ್ಷಾನುಗಟ್ಟಲೆ ಆದರೂ ರೈತರಿಗೆ ಸರಿಯಾದ ಸ್ಪಂದನೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ತಾಲೂಕಿನ ಅಭಿವೃದ್ಧಿಗೆ ಪೂರಕ ಸಹಕಾರವನ್ನು ಶೀಘ್ರದಲ್ಲೇ ನೀಡಬೇಕಾಗಿದೆ. ಈಗಾಗಲೇ ಸರ್ವೆಗೆ ಹಣ ಪಡೆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸದೇ ಇರೋದು ವಿಪರ್ಯಾಸವಾಗಿದೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆಯು 07/02/2026 ಶನಿವಾರದಿಂದ 10/02/2026ಮಂಗಳವಾರದವರೆಗೆ ನಡೆಯಲಿದೆ. Spread the love

    Spread the love

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    • By admin
    • January 28, 2026
    • 57 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೆ

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 305 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 103 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 97 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 89 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 69 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️