ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಎರಡು A ಗ್ರೇಡ್ ತಶೀಲ್ದಾರ್ ನೇಮಕ ಅವಶ್ಯಕ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಎರಡು Aಗ್ರೇಡ್ ತಹಶೀಲ್ದಾರ್ ನೇಮಕ ಆಗಬೇಕು ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದ್ದು 2ಲಕ್ಷಕ್ಕೂ ಮಿಗಿಲಾಗಿ ರೆವೆನ್ಯೂ RTC ಇದ್ದು, ತಾಲೂಕಿನ ಇತರೇ ಜವಾಬ್ದಾರಿ ಕೆಲಸಗಳು ಹಾಗೂ ಪುಣ್ಯ ಕ್ಷೇತ್ರ ಭೇಟಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಬರುವ ಸಮಯದಲ್ಲಿ, ಹಾಗೂ ವಿಪತ್ತು ಮತ್ತು ಅಪತ್ತು ಹಾಗೂ ಇತರೇ ಸಾರ್ವಜನಿಕ ಜಂಜಾಟಗಳು ಬರುವಾಗ 81ಗ್ರಾಮದ ಕಡೆ ಗಮನ ಹರಿಸಲು ಸಾಧ್ಯವಾಗದೇ ಸಹಜವಾಗಿ ತಹಶೀಲ್ದಾರ್ ಒತ್ತಡಕ್ಕೆ ಸಿಲುಕಿ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದನೆ ನೀಡಲು ಸಾಧ್ಯವಿಲ್ಲ ಹಾಗಾಗಿ ರಾಜ್ಯ ಸರ್ಕಾರ ಜನಸಾಮಾನ್ಯರ ಕೂಗಿಗೆ ಧ್ವನಿ ಯಾಗಬೇಕು ಎಂಬ ಕೂಗೂ ಜೋರಾಗಿ ಕೇಳಿ ಬರುತ್ತಿದೆ. ತಾಲೂಕಿನಲ್ಲಿ ಪ್ರಸ್ತುತ ರಾಜ್ಯಸರ್ಕಾರವನ್ನು ಪ್ರತಿನಿಧಿಸುವ ಒರ್ವ ಶಾಸಕರು, 2ಮಂದಿ ವಿಧಾನ ಪರಿಷತ್ ಸದಸ್ಯರು ಇದ್ದು ಕೂಡಲೇ ಸರ್ಕಾರದ ಗಮನಸೆಳೆಯಬೇಕಾಗಿದೆ.

ಬೆಳ್ತಂಗಡಿ ತಾಲೂಕು 81ಗ್ರಾಮ ಪಂಚಾಯತ್ ಗಳನ್ನು ಒಳಗೊಂಡ ಅತೀ ದೊಡ್ಡ ತಾಲೂಕು 4ಹೋಬಳಿಗಳು ಇದ್ದು ಬಹುತೇಕ ಜನರು ಕೃಷಿ ಚಟುವಟಿಕೆಗಳನ್ನೇ ಅವಲಂಭಿಸಿರುತ್ತಾರೆ. ಹೈನುಗಾರಿಕೆ ಇಲ್ಲಿಯ ಉಪಕಸೂಬು ಆಗಿರುತ್ತದೆ.

ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ವಿಸ್ತಾರವಾದ ತಾಲೂಕು. ಎಳನೀರು,ದಿಡುಪೆ ,ಚಾರ್ಮಾಡಿಯಿಂದ ಪೂಂಜಾಲಕಟ್ಟೆಯವರೆಗೂ, ವೇಣೂರು ನಿಂದ ಉಪ್ಪಿನಂಗಡಿಯವರೆಗೂ ಬೆಳ್ತಂಗಡಿ ತಾಲೂಕು ಹರಡಿದೆ. ಇದರ ಪೂರ್ವ-ಉತ್ತರ ಭಾಗದಲ್ಲಿ ರಮಣೀಯವಾದ ಪಶ್ಚಿಮ ಘಟ್ಟವಿದೆ. ಈ ತಾಲೂಕಿನಲ್ಲಿ ಪ್ರಸಿದ್ದ ಯಾತ್ರಾಸ್ಥಳ ಧರ್ಮಸ್ಥಳ, ಶಿಕ್ಷಣ ಕೇಂದ್ರವಾದ ಉಜಿರೆ, ಪ್ರೇಕ್ಷಣೀಯ ಸ್ಥಳವಾದ ಜಮಲಾಬಾದ್ ಕೋಟೆಯೂ ಇದೆ. ಇದಲ್ಲದೆ ಬೆಳ್ತಂಗಡಿಯಲ್ಲಿ ಹಲವಾರು ಧಾರ್ಮಿಕ ಕ್ಷೇತ್ರಗಳೂ ಇವೆ.

ತಾಲೂಕಿನಲ್ಲಿ ಬಹಳಷ್ಟು ರೈತರಿಗೆ ಇನ್ನೂ ಕೂಡ ಸರಿಯಾಗಿ ತಮ್ಮ ಜಮೀನುಗಳ ಮೂಲ ದಾಖಲೆಗಳನ್ನು ಸರಿಪಡಿಸಿಕೊಳ್ಳು ಆಗದೇ ತೀವ್ರ ಸಮಸ್ಯೆ ಇರುವ ಈ ತಾಲೂಕಿನ ಆಡಳಿತ ದೃಷ್ಟಿಯಿಂದ ತಾಲೂಕಿಗೆ 2 Aಗ್ರೇಡ್ ತಹಶೀಲ್ದಾರ್ ಅವಶ್ಯಕವಾಗಿ ಬೇಕಾಗಿದೆ ಎಂಬುದು ಸಾರ್ವಜನಿಕರ ಕೂಗಾಗಿದೆ. ಹತ್ತು ಹಲವಾರು ವರ್ಷಗಳಿಂದ ಪ್ಲೋಟಿಂಗ್ ಮಾಡಲು ಬಾಕಿ ಇರುವ ಬಹಳಷ್ಟು ಜಾಗಗಳು ಇದ್ದು ಇದಕ್ಕಾಗಿ ಹಣ ಸಂದಾಯ ಮಾಡಿ ವರ್ಷಾನುಗಟ್ಟಲೆ ಆದರೂ ರೈತರಿಗೆ ಸರಿಯಾದ ಸ್ಪಂದನೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ತಾಲೂಕಿನ ಅಭಿವೃದ್ಧಿಗೆ ಪೂರಕ ಸಹಕಾರವನ್ನು ಶೀಘ್ರದಲ್ಲೇ ನೀಡಬೇಕಾಗಿದೆ. ಈಗಾಗಲೇ ಸರ್ವೆಗೆ ಹಣ ಪಡೆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸದೇ ಇರೋದು ವಿಪರ್ಯಾಸವಾಗಿದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ