ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಎರಡು A ಗ್ರೇಡ್ ತಶೀಲ್ದಾರ್ ನೇಮಕ ಅವಶ್ಯಕ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಎರಡು Aಗ್ರೇಡ್ ತಹಶೀಲ್ದಾರ್ ನೇಮಕ ಆಗಬೇಕು ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದ್ದು 2ಲಕ್ಷಕ್ಕೂ ಮಿಗಿಲಾಗಿ ರೆವೆನ್ಯೂ RTC ಇದ್ದು, ತಾಲೂಕಿನ ಇತರೇ ಜವಾಬ್ದಾರಿ ಕೆಲಸಗಳು ಹಾಗೂ ಪುಣ್ಯ ಕ್ಷೇತ್ರ ಭೇಟಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಬರುವ ಸಮಯದಲ್ಲಿ, ಹಾಗೂ ವಿಪತ್ತು ಮತ್ತು ಅಪತ್ತು ಹಾಗೂ ಇತರೇ ಸಾರ್ವಜನಿಕ ಜಂಜಾಟಗಳು ಬರುವಾಗ 81ಗ್ರಾಮದ ಕಡೆ ಗಮನ ಹರಿಸಲು ಸಾಧ್ಯವಾಗದೇ ಸಹಜವಾಗಿ ತಹಶೀಲ್ದಾರ್ ಒತ್ತಡಕ್ಕೆ ಸಿಲುಕಿ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದನೆ ನೀಡಲು ಸಾಧ್ಯವಿಲ್ಲ ಹಾಗಾಗಿ ರಾಜ್ಯ ಸರ್ಕಾರ ಜನಸಾಮಾನ್ಯರ ಕೂಗಿಗೆ ಧ್ವನಿ ಯಾಗಬೇಕು ಎಂಬ ಕೂಗೂ ಜೋರಾಗಿ ಕೇಳಿ ಬರುತ್ತಿದೆ. ತಾಲೂಕಿನಲ್ಲಿ ಪ್ರಸ್ತುತ ರಾಜ್ಯಸರ್ಕಾರವನ್ನು ಪ್ರತಿನಿಧಿಸುವ ಒರ್ವ ಶಾಸಕರು, 2ಮಂದಿ ವಿಧಾನ ಪರಿಷತ್ ಸದಸ್ಯರು ಇದ್ದು ಕೂಡಲೇ ಸರ್ಕಾರದ ಗಮನಸೆಳೆಯಬೇಕಾಗಿದೆ.

ಬೆಳ್ತಂಗಡಿ ತಾಲೂಕು 81ಗ್ರಾಮ ಪಂಚಾಯತ್ ಗಳನ್ನು ಒಳಗೊಂಡ ಅತೀ ದೊಡ್ಡ ತಾಲೂಕು 4ಹೋಬಳಿಗಳು ಇದ್ದು ಬಹುತೇಕ ಜನರು ಕೃಷಿ ಚಟುವಟಿಕೆಗಳನ್ನೇ ಅವಲಂಭಿಸಿರುತ್ತಾರೆ. ಹೈನುಗಾರಿಕೆ ಇಲ್ಲಿಯ ಉಪಕಸೂಬು ಆಗಿರುತ್ತದೆ.

ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ವಿಸ್ತಾರವಾದ ತಾಲೂಕು. ಎಳನೀರು,ದಿಡುಪೆ ,ಚಾರ್ಮಾಡಿಯಿಂದ ಪೂಂಜಾಲಕಟ್ಟೆಯವರೆಗೂ, ವೇಣೂರು ನಿಂದ ಉಪ್ಪಿನಂಗಡಿಯವರೆಗೂ ಬೆಳ್ತಂಗಡಿ ತಾಲೂಕು ಹರಡಿದೆ. ಇದರ ಪೂರ್ವ-ಉತ್ತರ ಭಾಗದಲ್ಲಿ ರಮಣೀಯವಾದ ಪಶ್ಚಿಮ ಘಟ್ಟವಿದೆ. ಈ ತಾಲೂಕಿನಲ್ಲಿ ಪ್ರಸಿದ್ದ ಯಾತ್ರಾಸ್ಥಳ ಧರ್ಮಸ್ಥಳ, ಶಿಕ್ಷಣ ಕೇಂದ್ರವಾದ ಉಜಿರೆ, ಪ್ರೇಕ್ಷಣೀಯ ಸ್ಥಳವಾದ ಜಮಲಾಬಾದ್ ಕೋಟೆಯೂ ಇದೆ. ಇದಲ್ಲದೆ ಬೆಳ್ತಂಗಡಿಯಲ್ಲಿ ಹಲವಾರು ಧಾರ್ಮಿಕ ಕ್ಷೇತ್ರಗಳೂ ಇವೆ.

ತಾಲೂಕಿನಲ್ಲಿ ಬಹಳಷ್ಟು ರೈತರಿಗೆ ಇನ್ನೂ ಕೂಡ ಸರಿಯಾಗಿ ತಮ್ಮ ಜಮೀನುಗಳ ಮೂಲ ದಾಖಲೆಗಳನ್ನು ಸರಿಪಡಿಸಿಕೊಳ್ಳು ಆಗದೇ ತೀವ್ರ ಸಮಸ್ಯೆ ಇರುವ ಈ ತಾಲೂಕಿನ ಆಡಳಿತ ದೃಷ್ಟಿಯಿಂದ ತಾಲೂಕಿಗೆ 2 Aಗ್ರೇಡ್ ತಹಶೀಲ್ದಾರ್ ಅವಶ್ಯಕವಾಗಿ ಬೇಕಾಗಿದೆ ಎಂಬುದು ಸಾರ್ವಜನಿಕರ ಕೂಗಾಗಿದೆ. ಹತ್ತು ಹಲವಾರು ವರ್ಷಗಳಿಂದ ಪ್ಲೋಟಿಂಗ್ ಮಾಡಲು ಬಾಕಿ ಇರುವ ಬಹಳಷ್ಟು ಜಾಗಗಳು ಇದ್ದು ಇದಕ್ಕಾಗಿ ಹಣ ಸಂದಾಯ ಮಾಡಿ ವರ್ಷಾನುಗಟ್ಟಲೆ ಆದರೂ ರೈತರಿಗೆ ಸರಿಯಾದ ಸ್ಪಂದನೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ತಾಲೂಕಿನ ಅಭಿವೃದ್ಧಿಗೆ ಪೂರಕ ಸಹಕಾರವನ್ನು ಶೀಘ್ರದಲ್ಲೇ ನೀಡಬೇಕಾಗಿದೆ. ಈಗಾಗಲೇ ಸರ್ವೆಗೆ ಹಣ ಪಡೆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸದೇ ಇರೋದು ವಿಪರ್ಯಾಸವಾಗಿದೆ.

Spread the love
  • Related Posts

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

    Spread the love

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

    Spread the love

    You Missed

    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    • By admin
    • July 23, 2024
    • 56 views
    ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    • By admin
    • July 22, 2024
    • 147 views
    ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

    ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    • By admin
    • July 21, 2024
    • 65 views
    ಶಿರೂರು ಗುಡ್ಡ ಕುಸಿತ  ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ  ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    • By admin
    • July 21, 2024
    • 15 views
    ಮಾಣಿಯಲ್ಲಿ ಶ್ರೀಲಲಿತೆ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    • By admin
    • July 21, 2024
    • 18 views
    ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು

    • By admin
    • July 21, 2024
    • 148 views
    ಮಂಗಳ ಲಕ್ಷದ್ವೀಪ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲಿನಲ್ಲಿ ಸುರಿದ ನೀರು ಪ್ರಯಾಣಿಕರು ಕಂಗಾಲು