ಬೆಳ್ತಂಗಡಿ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಎರಡು A ಗ್ರೇಡ್ ತಶೀಲ್ದಾರ್ ನೇಮಕ ಅವಶ್ಯಕ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಎರಡು Aಗ್ರೇಡ್ ತಹಶೀಲ್ದಾರ್ ನೇಮಕ ಆಗಬೇಕು ಎಂಬುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗಳಾಗುತ್ತಿದ್ದು 2ಲಕ್ಷಕ್ಕೂ ಮಿಗಿಲಾಗಿ ರೆವೆನ್ಯೂ RTC ಇದ್ದು, ತಾಲೂಕಿನ ಇತರೇ ಜವಾಬ್ದಾರಿ ಕೆಲಸಗಳು ಹಾಗೂ ಪುಣ್ಯ ಕ್ಷೇತ್ರ ಭೇಟಿಗೆ ರಾಜಕಾರಣಿಗಳು, ಹಿರಿಯ ಅಧಿಕಾರಿಗಳು ಬರುವ ಸಮಯದಲ್ಲಿ, ಹಾಗೂ ವಿಪತ್ತು ಮತ್ತು ಅಪತ್ತು ಹಾಗೂ ಇತರೇ ಸಾರ್ವಜನಿಕ ಜಂಜಾಟಗಳು ಬರುವಾಗ 81ಗ್ರಾಮದ ಕಡೆ ಗಮನ ಹರಿಸಲು ಸಾಧ್ಯವಾಗದೇ ಸಹಜವಾಗಿ ತಹಶೀಲ್ದಾರ್ ಒತ್ತಡಕ್ಕೆ ಸಿಲುಕಿ ಸಾರ್ವಜನಿಕರಿಗೆ ಸರಿಯಾಗಿ ಸ್ಪಂದನೆ ನೀಡಲು ಸಾಧ್ಯವಿಲ್ಲ ಹಾಗಾಗಿ ರಾಜ್ಯ ಸರ್ಕಾರ ಜನಸಾಮಾನ್ಯರ ಕೂಗಿಗೆ ಧ್ವನಿ ಯಾಗಬೇಕು ಎಂಬ ಕೂಗೂ ಜೋರಾಗಿ ಕೇಳಿ ಬರುತ್ತಿದೆ. ತಾಲೂಕಿನಲ್ಲಿ ಪ್ರಸ್ತುತ ರಾಜ್ಯಸರ್ಕಾರವನ್ನು ಪ್ರತಿನಿಧಿಸುವ ಒರ್ವ ಶಾಸಕರು, 2ಮಂದಿ ವಿಧಾನ ಪರಿಷತ್ ಸದಸ್ಯರು ಇದ್ದು ಕೂಡಲೇ ಸರ್ಕಾರದ ಗಮನಸೆಳೆಯಬೇಕಾಗಿದೆ.

ಬೆಳ್ತಂಗಡಿ ತಾಲೂಕು 81ಗ್ರಾಮ ಪಂಚಾಯತ್ ಗಳನ್ನು ಒಳಗೊಂಡ ಅತೀ ದೊಡ್ಡ ತಾಲೂಕು 4ಹೋಬಳಿಗಳು ಇದ್ದು ಬಹುತೇಕ ಜನರು ಕೃಷಿ ಚಟುವಟಿಕೆಗಳನ್ನೇ ಅವಲಂಭಿಸಿರುತ್ತಾರೆ. ಹೈನುಗಾರಿಕೆ ಇಲ್ಲಿಯ ಉಪಕಸೂಬು ಆಗಿರುತ್ತದೆ.

ಇದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿ ವಿಸ್ತಾರವಾದ ತಾಲೂಕು. ಎಳನೀರು,ದಿಡುಪೆ ,ಚಾರ್ಮಾಡಿಯಿಂದ ಪೂಂಜಾಲಕಟ್ಟೆಯವರೆಗೂ, ವೇಣೂರು ನಿಂದ ಉಪ್ಪಿನಂಗಡಿಯವರೆಗೂ ಬೆಳ್ತಂಗಡಿ ತಾಲೂಕು ಹರಡಿದೆ. ಇದರ ಪೂರ್ವ-ಉತ್ತರ ಭಾಗದಲ್ಲಿ ರಮಣೀಯವಾದ ಪಶ್ಚಿಮ ಘಟ್ಟವಿದೆ. ಈ ತಾಲೂಕಿನಲ್ಲಿ ಪ್ರಸಿದ್ದ ಯಾತ್ರಾಸ್ಥಳ ಧರ್ಮಸ್ಥಳ, ಶಿಕ್ಷಣ ಕೇಂದ್ರವಾದ ಉಜಿರೆ, ಪ್ರೇಕ್ಷಣೀಯ ಸ್ಥಳವಾದ ಜಮಲಾಬಾದ್ ಕೋಟೆಯೂ ಇದೆ. ಇದಲ್ಲದೆ ಬೆಳ್ತಂಗಡಿಯಲ್ಲಿ ಹಲವಾರು ಧಾರ್ಮಿಕ ಕ್ಷೇತ್ರಗಳೂ ಇವೆ.

ತಾಲೂಕಿನಲ್ಲಿ ಬಹಳಷ್ಟು ರೈತರಿಗೆ ಇನ್ನೂ ಕೂಡ ಸರಿಯಾಗಿ ತಮ್ಮ ಜಮೀನುಗಳ ಮೂಲ ದಾಖಲೆಗಳನ್ನು ಸರಿಪಡಿಸಿಕೊಳ್ಳು ಆಗದೇ ತೀವ್ರ ಸಮಸ್ಯೆ ಇರುವ ಈ ತಾಲೂಕಿನ ಆಡಳಿತ ದೃಷ್ಟಿಯಿಂದ ತಾಲೂಕಿಗೆ 2 Aಗ್ರೇಡ್ ತಹಶೀಲ್ದಾರ್ ಅವಶ್ಯಕವಾಗಿ ಬೇಕಾಗಿದೆ ಎಂಬುದು ಸಾರ್ವಜನಿಕರ ಕೂಗಾಗಿದೆ. ಹತ್ತು ಹಲವಾರು ವರ್ಷಗಳಿಂದ ಪ್ಲೋಟಿಂಗ್ ಮಾಡಲು ಬಾಕಿ ಇರುವ ಬಹಳಷ್ಟು ಜಾಗಗಳು ಇದ್ದು ಇದಕ್ಕಾಗಿ ಹಣ ಸಂದಾಯ ಮಾಡಿ ವರ್ಷಾನುಗಟ್ಟಲೆ ಆದರೂ ರೈತರಿಗೆ ಸರಿಯಾದ ಸ್ಪಂದನೆ ಇಲ್ಲದಂತಾಗಿದೆ ಕೂಡಲೇ ಸರ್ಕಾರ ಈ ಬಗ್ಗೆ ಗಮನಹರಿಸಿ ತಾಲೂಕಿನ ಅಭಿವೃದ್ಧಿಗೆ ಪೂರಕ ಸಹಕಾರವನ್ನು ಶೀಘ್ರದಲ್ಲೇ ನೀಡಬೇಕಾಗಿದೆ. ಈಗಾಗಲೇ ಸರ್ವೆಗೆ ಹಣ ಪಡೆದರೂ ಕೂಡ ಸರ್ಕಾರ ಈ ಬಗ್ಗೆ ಗಮನಹರಿಸದೇ ಇರೋದು ವಿಪರ್ಯಾಸವಾಗಿದೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ