ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಾದ್ಯಂತ ವಿಪರೀತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತಾಲೂಕಿನ ಜಲಪಾತಗಳಿಗೆ ಪ್ರವಾಸಿಗರು ಬರದಂತೆ ನಿರ್ಬಂಧವನ್ನು ಹೇರಲಾಗಿದೆ.
ತಾಲೂಕಿನಾದ್ಯಂತ ಜಲಪಾತಗಳು ಅಪಾಯದ ಅಂಚಿನಲ್ಲಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಅರಣ್ಯ ಇಲಾಖೆಯಿಂದ ತಾಲೂಕಿನ ಎಲ್ಲಾ ಜಲಪಾತಗಳಿಗೆ ತಕ್ಷಣ ದಿಂದ ಜಾರಿ ಬರುವಂತೆ ಪ್ರವೇಶ ನಿಷೇಧ ಹೇರಲಾಗಿದೆ.