ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ಬೆಳ್ತಂಗಡಿ: ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಹೇರಿರುವ ನಿಯಮಗಳನ್ನು ಸರಕಾರಿ ಕಚೇರಿಗಳಲ್ಲಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್‌ಪಿ ಕಲಾವತಿ ನೇತೃತ್ವದಲ್ಲಿ ಬೆಳ್ತಂಗಡಿ ವಿವಿಧ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಳ್ತಂಗಡಿಯ ಮಿನಿ ವಿಧಾನ ಸೌಧ ದಲ್ಲಿರುವ ತಾಲೂಕು ಕಚೇರಿ, ಕೊಕ್ಕಡ, ವೇಣೂರು, ಬೆಳ್ತಂಗಡಿ ಹೋಬಳಿಯ ಕಂದಾಯ ನಿರೀಕ್ಷಕರ ಕಚೇರಿ, ನಗರ ಪಂಚಾಯತ್, ಬಸ್ ನಿಲ್ದಾಣ, ಕೃಷಿ ಹೋಬಳಿ ಕೇಂದ್ರ, ಪಣಕಜೆ ಹಿ.ಪ್ರಾ. ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-೧೯ ಅನ್ವಯ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಪ.ಪಂ. ಅಧಿಕಾರಿ, ಸಿಬಂದಿಗಳು ಮಾಸ್ಕ್ ಧರಸಿದೇ ಇರುವುದು ಸೇರಿದಂತೆ ಸಾರ್ವಜನಿಕರೋರ್ವರು ಮಾಸ್ಕ್ ಧರಿಸದೇ ಸಿಬಂದಿಯೊಂದಿಗೆ ವ್ಯವಹರಿಸುತ್ತಿದ್ದು ಕಂಡುಬಂದ ಕುರಿತು ಡಿವೈಎಸ್‌ಪಿ ಕಲಾವತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತಕ್ಷಣದಿಂದಲೇ ಪ್ರತಿ ಸಿಬ್ಬಂದಿ ಮಾಸ್ಕ್ ಧರಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದರು.
ಸಾರ್ವಜನಿಕ ಪ್ರದೇಶದಲ್ಲಿ ಉಗುಳುವವರ ಮತ್ತು ಮಾಸ್ಕ್ ಧರಿಸದೇ ಇರುವವರ ವಿರುದ್ಧ ಪ.ಪಂ. ಎಷ್ಟು ಪ್ರಕರಣ ದಾಖಲಿಸಿವೆ ಎಂಬುದರ ಮಾಹಿತಿ ಪಡೆದರು.

ಕಚೇರಿಗಳಲ್ಲಿ ಅಧಿಕಾರಿಗಳು, ಸಿಬಂದಿಗಳು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ, ಥರ್ಮಲ್ ಸ್ಕ್ಯಾನಿಂಗ್, ಸಾರ್ವಜನಿಕ ಕಚೇರಿಗೆ ಬರುವಾಗ ಪಾಲಿಸಬೇಕಾದ ನಿಯಮ ಸೇರಿದಂತೆ ಸರಕಾರ ಜಾರಿಗೆ ತಂದಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆಗೆ ಸೂಕ್ತ ಮಾರ್ಗದರ್ಶನ ಹಾಗೂ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಎಚ್.ಸಿ.ಗಳಾದ ವೇಣುಗೋಪಾಲ್ ಹಾಗೂ ಪ್ರದೀಪ್ ಜತೆಗಿದ್ದರು.

Spread the love
  • Related Posts

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    You Missed

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 7 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 3 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 10 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 16 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 10 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ