ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಪರಿಶೀಲನೆ

ಬೆಳ್ತಂಗಡಿ: ಕೋವಿಡ್-೧೯ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ಹೇರಿರುವ ನಿಯಮಗಳನ್ನು ಸರಕಾರಿ ಕಚೇರಿಗಳಲ್ಲಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಲೋಕಾಯುಕ್ತ ಮಂಗಳೂರು ವಿಭಾಗದ ಡಿವೈಎಸ್‌ಪಿ ಕಲಾವತಿ ನೇತೃತ್ವದಲ್ಲಿ ಬೆಳ್ತಂಗಡಿ ವಿವಿಧ ಸರಕಾರಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಬೆಳ್ತಂಗಡಿಯ ಮಿನಿ ವಿಧಾನ ಸೌಧ ದಲ್ಲಿರುವ ತಾಲೂಕು ಕಚೇರಿ, ಕೊಕ್ಕಡ, ವೇಣೂರು, ಬೆಳ್ತಂಗಡಿ ಹೋಬಳಿಯ ಕಂದಾಯ ನಿರೀಕ್ಷಕರ ಕಚೇರಿ, ನಗರ ಪಂಚಾಯತ್, ಬಸ್ ನಿಲ್ದಾಣ, ಕೃಷಿ ಹೋಬಳಿ ಕೇಂದ್ರ, ಪಣಕಜೆ ಹಿ.ಪ್ರಾ. ಶಾಲೆಯಲ್ಲಿರುವ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ ಕೋವಿಡ್-೧೯ ಅನ್ವಯ ನಿಯಮ ಪಾಲಿಸುತ್ತಿರುವ ಕುರಿತು ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಪ.ಪಂ. ಅಧಿಕಾರಿ, ಸಿಬಂದಿಗಳು ಮಾಸ್ಕ್ ಧರಸಿದೇ ಇರುವುದು ಸೇರಿದಂತೆ ಸಾರ್ವಜನಿಕರೋರ್ವರು ಮಾಸ್ಕ್ ಧರಿಸದೇ ಸಿಬಂದಿಯೊಂದಿಗೆ ವ್ಯವಹರಿಸುತ್ತಿದ್ದು ಕಂಡುಬಂದ ಕುರಿತು ಡಿವೈಎಸ್‌ಪಿ ಕಲಾವತಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತಕ್ಷಣದಿಂದಲೇ ಪ್ರತಿ ಸಿಬ್ಬಂದಿ ಮಾಸ್ಕ್ ಧರಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದರು.
ಸಾರ್ವಜನಿಕ ಪ್ರದೇಶದಲ್ಲಿ ಉಗುಳುವವರ ಮತ್ತು ಮಾಸ್ಕ್ ಧರಿಸದೇ ಇರುವವರ ವಿರುದ್ಧ ಪ.ಪಂ. ಎಷ್ಟು ಪ್ರಕರಣ ದಾಖಲಿಸಿವೆ ಎಂಬುದರ ಮಾಹಿತಿ ಪಡೆದರು.

ಕಚೇರಿಗಳಲ್ಲಿ ಅಧಿಕಾರಿಗಳು, ಸಿಬಂದಿಗಳು, ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ, ಥರ್ಮಲ್ ಸ್ಕ್ಯಾನಿಂಗ್, ಸಾರ್ವಜನಿಕ ಕಚೇರಿಗೆ ಬರುವಾಗ ಪಾಲಿಸಬೇಕಾದ ನಿಯಮ ಸೇರಿದಂತೆ ಸರಕಾರ ಜಾರಿಗೆ ತಂದಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆಗೆ ಸೂಕ್ತ ಮಾರ್ಗದರ್ಶನ ಹಾಗೂ ಮಾಹಿತಿಯನ್ನು ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಎಚ್.ಸಿ.ಗಳಾದ ವೇಣುಗೋಪಾಲ್ ಹಾಗೂ ಪ್ರದೀಪ್ ಜತೆಗಿದ್ದರು.

Spread the love
  • Related Posts

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಅನಿಲ್ ಪಾರ್ಮ್ ನ ಮಾಲೀಕ ಅನಿಲ್ ಭಟ್(45) ಅವರ…

    Spread the love

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, 2054ನೇ ಮದ್ಯವರ್ಜನ ಶಿಬಿರದ ವ್ಯವಸ್ಥಾಪನಾ ಸಮಿತಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ, ಕರ್ನಾಟಕ…

    Spread the love

    You Missed

    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    • By admin
    • May 17, 2026
    • 2120 views
    ಬೆಳ್ತಂಗಡಿ :ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ,ಮಹಿಳೆ ಸಾವು

    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    • By admin
    • May 16, 2026
    • 563 views
    ಶ್ರೀ.ಕ್ಷೇ.ಧ.ಗ್ರಾ ಯೋಜನೆ ವತಿಯಿಂದ ಸಕಲೇಶಪುರದಲ್ಲಿ 2054ನೇ ಮದ್ಯವರ್ಜನ ಶಿಬಿರದ ಉದ್ಘಾಟನೆ, ಮದ್ಯವರ್ಜನ ಶಿಬಿರ ಜೀವನದ ಪಾಠ ಶಾಲೆ: ವನರಾಜ್ ವಿ.ಸಿ,

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 219 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 69 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 48 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 44 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”