ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ ಸ್ವಸ್ಥ ಸಮಾಜ ನಿರ್ಮಾಣ ಸಂಕಲ್ಪ: ಹರೀಶ್ ಪೂಂಜ

ಬೆಳ್ತಂಗಡಿ: ಕರೊನಾ ಮುಕ್ತವಾಗಿ ಸ್ವಸ್ಥ ಬೆಳ್ತಂಗಡಿ ತಾಲೂಕು ನಿರ್ಮಾಣ ಮಾಡಬೇಕೆಂಬ ಸಂಕಲ್ಪವನ್ನು ನಾವಿಂದು ಮಾಡೋಣ ಎಂದು ಶಾಸಕ ಹರೀಶ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಎರಡು ವರ್ಷದ ನನ್ನ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಬಿಂಬಿಸಿ ಎಚ್ಚರಿಸಿದ್ದಾರೆ. ಅದೇ ರೀತಿ ಸಮಸ್ಯೆಗಳು ಪರಿಹಾರವಾದಾಗಲೂ ತಾಲೂಕಿನ ಪತ್ರಕರ್ತರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಕ್ಲಿಷ್ಟಕರ ಸನ್ನಿವೇಶಗಳಲ್ಲಿ ನನ್ನನ್ನು ತಿದ್ದಿ ತೀಡಿ ಬೆಂಬಲ ನೀಡಿದ್ದೀರಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಾಜವನ್ನು ಕೊರೊನಾ ಮುಕ್ತವಾಗಿಸಲು ಪಣ ತೊಟ್ಟಿದ್ದಾರೆ. ಅದೇ ರೀತಿ ನಾವೆಲ್ಲಾ ಸೇರಿ ತಾಲೂಕಿನಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪತ್ರಿಕಾ ದಿನಾಚರಣೆಯಂದೇ ಸಂಕಲ್ಪ ಮಾಡೋಣ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ, ನಾನು ತಾಲೂಕಿನ ಪತ್ರಕರ್ತರೊಂದಿಗೆ ಹಲವು ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿದ್ದೇನೆ. ನನ್ನ ಸಾರ್ವಜನಿಕ ಜೀವನದ ಪ್ರಭಾವಲಯಕ್ಕೆ ಪತ್ರಕರ್ತರ ಕೊಡುಗೆ ಅಪಾರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ,‌ ಉಳಿಸುವಲ್ಲಿ ಮತ್ತು ಜನರನ್ನು ಎಚ್ಚರಿಸುವಲ್ಲಿ ಪತ್ರಿಕೆಗಳ ಮಹತ್ವ ಹೆಚ್ಚಿನದು ಎಂದರು.

ಎಂ.ಎಲ್.ಸಿ. ಹರೀಶ ಕುಮಾರ್ ಅವರು, ಜನರಿಗೆ‌ ಯಾವುದೇ ಸಂಶಯ ಬರದ ರೀತಿಯಲ್ಲಿ ಲೇಖನಗಳನ್ನು ಪ್ರಕಟಿಸಿದರೆ ಜನರಿಗೆ ಉಪಯೋಗವಾಗುತ್ತದೆ. ಸರಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು ಎಂದರು.

ಈ ಸಂದರ್ಭ ಪತ್ರಕರ್ತ ಮನೋಹರ ಬಳಂಜ ಅವರು ಪುತ್ರಿಯ ಸ್ಮರಣಾರ್ಥ ಮೂವರು ಅನಾರೋಗ್ಯಕ್ಕೊಳಗಾದ ಮಕ್ಕಳಿಗೆ ಕೊಡಮಾಡಿದ ದಿತಿ ನಿಧಿಯನ್ನು‌ ಅತಿಥಿಗಳು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ದ.ಕ.ಜಿ.ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಜಿ.ಗೇರುಕಟ್ಟೆ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಅಶ್ರಫ್ ಆಲಿ ಕುಂಞ ಅಧ್ಯಕ್ಷತೆ ವಹಿಸಿ ಸಂಘಕ್ಕೆ ನಿವೇಶನದ ಬೇಡಿಕೆಯನ್ನಿಟ್ಟರು.

ಸಂಘದ ಕಾರ್ಯದರ್ಶಿ ಮನೋಹರ ಬಳಂಜ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಚೈತ್ರೇಶ್ ಇಳಂತಿಲ, ಗಣೇಶ ಶಿರ್ಲಾಲು ಕಾರ್ಯಕ್ರಮ ನಿರ್ವಹಿಸಿದರು.

https://chat.whatsapp.com/CTDH16qVW5RL023JwWgknA

Spread the love
  • Related Posts

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಗುರುವಾಯನಕೆರೆ: ರಾಷ್ಟ್ರಮಟ್ಟದಲ್ಲಿ ಇನ್ಸಿಟ್ಯೂಟ್ ಆಫ್‌ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ನಡೆಸುವ ಕಂಪನಿ ಸೆಕ್ರೆಟರಿ ಪರೀಕ್ಷೆಯ ಎರಡನೇ ಆವೃತ್ತಿಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ. 200 ಅಂಕಗಳ ಪರೀಕ್ಷೆಯಲ್ಲಿ 183 ಅಂಕಗಳನ್ನು…

    Spread the love

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಬೆಳ್ತಂಗಡಿ: ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಪುಷ್ಟಿ ಮುಂಡಾಜೆಗೆ ಪ್ರಥಮ ಸ್ಥಾನ. ಅಳದಂಗಡಿ ಆಮಂತ್ರಣ ಪರಿವಾರದ ದಶಮಾನೋತ್ಸವದ ಸಂದರ್ಭ ಶನಿವಾರ ಅಳದಂಗಡಿಯಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯ 6-7ನೇ ತರಗತಿ ವಿಭಾಗದಲ್ಲಿ ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ…

    Spread the love

    You Missed

    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    • By admin
    • January 20, 2026
    • 266 views
    ಸಿ.ಎಸ್. ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅಭೂತಪೂರ್ವ ಸಾಧನೆ,  ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ

    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    • By admin
    • January 20, 2026
    • 86 views
    ಆಮಂತ್ರಣ ಪರಿವಾರದ ದಶಮಾನೋತ್ಸವದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಪುಷ್ಟಿ ಮುಂಡಾಜೆ ಪ್ರಥಮ

    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    • By admin
    • January 18, 2026
    • 88 views
    ಹಳ್ಳಿ ಹೈದ ಗಿಲ್ಲಿ ನಟನಿಗೆ ‘ಬಿಗ್’ ಕಿರೀಟ ಕರಾವಳಿಯ ಬೆಡಗಿ ರಕ್ಷಿತಾ ಶೆಟ್ಟಿ ರನ್ನರ್ ಆಫ್

    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    • By admin
    • January 18, 2026
    • 73 views
    ಚಾರ್ಮಾಡಿ ಘಾಟಿಯಲ್ಲಿ ಹಬ್ಬಿದ ಕಾಡ್ಗಿಚ್ಚು ಅಪಾರ ಸಸ್ಯ ಪ್ರಬೇಧಗಳು, ಪ್ರಾಣಿ ಸಂಕುಲಕ್ಕೆ ಹಾನಿ ಸಾಧ್ಯತೆ!!! ನಿರಂತರ ಕಾಡ್ಗಿಚ್ಚಿಗೆ ಶಾಶ್ವತ ಪರಿಹಾರ ಯಾವಾಗ???

    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    • By admin
    • January 18, 2026
    • 62 views
    ಚಾರ್ಮಾಡಿ ಘಾಟಿಯ ತುತ್ತ ತುದಿಯಲ್ಲಿ ಕಾಣಿಸಿಕೊಂಡ ಬೆಂಕಿ ಇದು ಆಕಸ್ಮಿಕವೋ‼️ ಅಥವಾ ದುಷ್ಟರ ಕೃತ್ಯವೋ⁉️

    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ ಬಂಧನಕ್ಕೆ ಕೋರ್ಟ್ ಆದೇಶ

    • By admin
    • January 17, 2026
    • 85 views
    ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಿಂದನೆ ಹಾಗೂ ನ್ಯಾಯಾಲಯದ ಪ್ರತಿಬಂಧಕ ಆಜ್ಞೆ ಉಲ್ಲಂಘಿಸಿದ ವಿಠಲಗೌಡ  ಬಂಧನಕ್ಕೆ ಕೋರ್ಟ್ ಆದೇಶ