ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ ಸ್ವಸ್ಥ ಸಮಾಜ ನಿರ್ಮಾಣ ಸಂಕಲ್ಪ: ಹರೀಶ್ ಪೂಂಜ

ಬೆಳ್ತಂಗಡಿ: ಕರೊನಾ ಮುಕ್ತವಾಗಿ ಸ್ವಸ್ಥ ಬೆಳ್ತಂಗಡಿ ತಾಲೂಕು ನಿರ್ಮಾಣ ಮಾಡಬೇಕೆಂಬ ಸಂಕಲ್ಪವನ್ನು ನಾವಿಂದು ಮಾಡೋಣ ಎಂದು ಶಾಸಕ ಹರೀಶ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಎರಡು ವರ್ಷದ ನನ್ನ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಬಿಂಬಿಸಿ ಎಚ್ಚರಿಸಿದ್ದಾರೆ. ಅದೇ ರೀತಿ ಸಮಸ್ಯೆಗಳು ಪರಿಹಾರವಾದಾಗಲೂ ತಾಲೂಕಿನ ಪತ್ರಕರ್ತರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಕ್ಲಿಷ್ಟಕರ ಸನ್ನಿವೇಶಗಳಲ್ಲಿ ನನ್ನನ್ನು ತಿದ್ದಿ ತೀಡಿ ಬೆಂಬಲ ನೀಡಿದ್ದೀರಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಾಜವನ್ನು ಕೊರೊನಾ ಮುಕ್ತವಾಗಿಸಲು ಪಣ ತೊಟ್ಟಿದ್ದಾರೆ. ಅದೇ ರೀತಿ ನಾವೆಲ್ಲಾ ಸೇರಿ ತಾಲೂಕಿನಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪತ್ರಿಕಾ ದಿನಾಚರಣೆಯಂದೇ ಸಂಕಲ್ಪ ಮಾಡೋಣ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ, ನಾನು ತಾಲೂಕಿನ ಪತ್ರಕರ್ತರೊಂದಿಗೆ ಹಲವು ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿದ್ದೇನೆ. ನನ್ನ ಸಾರ್ವಜನಿಕ ಜೀವನದ ಪ್ರಭಾವಲಯಕ್ಕೆ ಪತ್ರಕರ್ತರ ಕೊಡುಗೆ ಅಪಾರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ,‌ ಉಳಿಸುವಲ್ಲಿ ಮತ್ತು ಜನರನ್ನು ಎಚ್ಚರಿಸುವಲ್ಲಿ ಪತ್ರಿಕೆಗಳ ಮಹತ್ವ ಹೆಚ್ಚಿನದು ಎಂದರು.

ಎಂ.ಎಲ್.ಸಿ. ಹರೀಶ ಕುಮಾರ್ ಅವರು, ಜನರಿಗೆ‌ ಯಾವುದೇ ಸಂಶಯ ಬರದ ರೀತಿಯಲ್ಲಿ ಲೇಖನಗಳನ್ನು ಪ್ರಕಟಿಸಿದರೆ ಜನರಿಗೆ ಉಪಯೋಗವಾಗುತ್ತದೆ. ಸರಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು ಎಂದರು.

ಈ ಸಂದರ್ಭ ಪತ್ರಕರ್ತ ಮನೋಹರ ಬಳಂಜ ಅವರು ಪುತ್ರಿಯ ಸ್ಮರಣಾರ್ಥ ಮೂವರು ಅನಾರೋಗ್ಯಕ್ಕೊಳಗಾದ ಮಕ್ಕಳಿಗೆ ಕೊಡಮಾಡಿದ ದಿತಿ ನಿಧಿಯನ್ನು‌ ಅತಿಥಿಗಳು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ದ.ಕ.ಜಿ.ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಜಿ.ಗೇರುಕಟ್ಟೆ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಅಶ್ರಫ್ ಆಲಿ ಕುಂಞ ಅಧ್ಯಕ್ಷತೆ ವಹಿಸಿ ಸಂಘಕ್ಕೆ ನಿವೇಶನದ ಬೇಡಿಕೆಯನ್ನಿಟ್ಟರು.

ಸಂಘದ ಕಾರ್ಯದರ್ಶಿ ಮನೋಹರ ಬಳಂಜ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಚೈತ್ರೇಶ್ ಇಳಂತಿಲ, ಗಣೇಶ ಶಿರ್ಲಾಲು ಕಾರ್ಯಕ್ರಮ ನಿರ್ವಹಿಸಿದರು.

https://chat.whatsapp.com/CTDH16qVW5RL023JwWgknA

Spread the love
  • Related Posts

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 17 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಪ್ರೌಢಶಾಲೆಯ ಕುಮಾರಿ ಕು.ಯಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್ 7…

    Spread the love

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ಚಿಕ್ಕಮಗಳೂರಿನ ತರೀಕೆರೆಯಲ್ಲಿ ನಡೆದ ಶಾಲಾ ಶಿಕ್ಷಣ ಇಲಾಖೆಯ 14 ರ ವಯೋಮಾನದ ಬಾಲಕಿಯರ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮೈಸೂರು ವಿಭಾಗವನ್ನು ಪ್ರತಿನಿಧಿಸಿದ ಬೆಳ್ತಂಗಡಿ ತಾಲೂಕಿನ ಬಂದಾರು ಸ.ಹಿ.ಉ.ಪ್ರಾ ಶಾಲೆಯ ಕುಮಾರಿ ರಕ್ಷಿತಾ.ಜೆ ಇವಳು ಚಿನ್ನದ ಪದಕ ಪಡೆದು ನವೆಂಬರ್…

    Spread the love

    You Missed

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 55 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 53 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 28 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 23 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 50 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 43 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ