ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ ಸ್ವಸ್ಥ ಸಮಾಜ ನಿರ್ಮಾಣ ಸಂಕಲ್ಪ: ಹರೀಶ್ ಪೂಂಜ

ಬೆಳ್ತಂಗಡಿ: ಕರೊನಾ ಮುಕ್ತವಾಗಿ ಸ್ವಸ್ಥ ಬೆಳ್ತಂಗಡಿ ತಾಲೂಕು ನಿರ್ಮಾಣ ಮಾಡಬೇಕೆಂಬ ಸಂಕಲ್ಪವನ್ನು ನಾವಿಂದು ಮಾಡೋಣ ಎಂದು ಶಾಸಕ ಹರೀಶ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಎರಡು ವರ್ಷದ ನನ್ನ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಬಿಂಬಿಸಿ ಎಚ್ಚರಿಸಿದ್ದಾರೆ. ಅದೇ ರೀತಿ ಸಮಸ್ಯೆಗಳು ಪರಿಹಾರವಾದಾಗಲೂ ತಾಲೂಕಿನ ಪತ್ರಕರ್ತರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಕ್ಲಿಷ್ಟಕರ ಸನ್ನಿವೇಶಗಳಲ್ಲಿ ನನ್ನನ್ನು ತಿದ್ದಿ ತೀಡಿ ಬೆಂಬಲ ನೀಡಿದ್ದೀರಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಾಜವನ್ನು ಕೊರೊನಾ ಮುಕ್ತವಾಗಿಸಲು ಪಣ ತೊಟ್ಟಿದ್ದಾರೆ. ಅದೇ ರೀತಿ ನಾವೆಲ್ಲಾ ಸೇರಿ ತಾಲೂಕಿನಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪತ್ರಿಕಾ ದಿನಾಚರಣೆಯಂದೇ ಸಂಕಲ್ಪ ಮಾಡೋಣ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ, ನಾನು ತಾಲೂಕಿನ ಪತ್ರಕರ್ತರೊಂದಿಗೆ ಹಲವು ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿದ್ದೇನೆ. ನನ್ನ ಸಾರ್ವಜನಿಕ ಜೀವನದ ಪ್ರಭಾವಲಯಕ್ಕೆ ಪತ್ರಕರ್ತರ ಕೊಡುಗೆ ಅಪಾರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ,‌ ಉಳಿಸುವಲ್ಲಿ ಮತ್ತು ಜನರನ್ನು ಎಚ್ಚರಿಸುವಲ್ಲಿ ಪತ್ರಿಕೆಗಳ ಮಹತ್ವ ಹೆಚ್ಚಿನದು ಎಂದರು.

ಎಂ.ಎಲ್.ಸಿ. ಹರೀಶ ಕುಮಾರ್ ಅವರು, ಜನರಿಗೆ‌ ಯಾವುದೇ ಸಂಶಯ ಬರದ ರೀತಿಯಲ್ಲಿ ಲೇಖನಗಳನ್ನು ಪ್ರಕಟಿಸಿದರೆ ಜನರಿಗೆ ಉಪಯೋಗವಾಗುತ್ತದೆ. ಸರಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು ಎಂದರು.

ಈ ಸಂದರ್ಭ ಪತ್ರಕರ್ತ ಮನೋಹರ ಬಳಂಜ ಅವರು ಪುತ್ರಿಯ ಸ್ಮರಣಾರ್ಥ ಮೂವರು ಅನಾರೋಗ್ಯಕ್ಕೊಳಗಾದ ಮಕ್ಕಳಿಗೆ ಕೊಡಮಾಡಿದ ದಿತಿ ನಿಧಿಯನ್ನು‌ ಅತಿಥಿಗಳು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ದ.ಕ.ಜಿ.ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಜಿ.ಗೇರುಕಟ್ಟೆ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಅಶ್ರಫ್ ಆಲಿ ಕುಂಞ ಅಧ್ಯಕ್ಷತೆ ವಹಿಸಿ ಸಂಘಕ್ಕೆ ನಿವೇಶನದ ಬೇಡಿಕೆಯನ್ನಿಟ್ಟರು.

ಸಂಘದ ಕಾರ್ಯದರ್ಶಿ ಮನೋಹರ ಬಳಂಜ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಚೈತ್ರೇಶ್ ಇಳಂತಿಲ, ಗಣೇಶ ಶಿರ್ಲಾಲು ಕಾರ್ಯಕ್ರಮ ನಿರ್ವಹಿಸಿದರು.

https://chat.whatsapp.com/CTDH16qVW5RL023JwWgknA

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಂದು ಸಂಜೆ ಆರ್ಭಟಿಸಿದ ವರುಣನ ಅಬ್ಬರಕ್ಕೆ ಭೀಕರ ದುರಂತವೊಂದು ಸಂಭವಿಸಿದೆ. ಶಿವಾಜಿನಗರದಲ್ಲಿರುವ ಬೌರಿಂಗ್ ಆಸ್ಪತ್ರೆಯ ಎಮರ್ಜೆನ್ಸಿ ವಿಭಾಗದ ಬಳಿಯ ಕಾಂಪೌಂಡ್ ಗೋಡೆ ಕುಸಿದು ಬಿದ್ದ ಪರಿಣಾಮ, ಮೂವರು ಮಕ್ಕಳು ಸೇರಿದಂತೆ ಒಟ್ಟು 8 ಜನರು ಮೃತಪಟ್ಟಿದ್ದಾರೆ. ಬುಧವಾರ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 7 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 44 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 88 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 44 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ

    • By admin
    • April 28, 2026
    • 80 views
    SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ 6ಸ್ಥಾನ ಪಡೆದ ಪ್ರಾಪ್ತಿ.ಎಂ ಗೌಡ, ಪ್ರಗತಿ ಸಂಘದಿಂದ ವಿದ್ಯಾರ್ಥಿನಿಗೆ ಸನ್ಮಾನ