ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದಿಂದ ಪತ್ರಿಕಾ ದಿನಾಚರಣೆ ಸ್ವಸ್ಥ ಸಮಾಜ ನಿರ್ಮಾಣ ಸಂಕಲ್ಪ: ಹರೀಶ್ ಪೂಂಜ

ಬೆಳ್ತಂಗಡಿ: ಕರೊನಾ ಮುಕ್ತವಾಗಿ ಸ್ವಸ್ಥ ಬೆಳ್ತಂಗಡಿ ತಾಲೂಕು ನಿರ್ಮಾಣ ಮಾಡಬೇಕೆಂಬ ಸಂಕಲ್ಪವನ್ನು ನಾವಿಂದು ಮಾಡೋಣ ಎಂದು ಶಾಸಕ ಹರೀಶ ಪೂಂಜ ಹೇಳಿದರು.

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ತಾ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಎರಡು ವರ್ಷದ ನನ್ನ ಶಾಸಕತ್ವದ ಅವಧಿಯಲ್ಲಿ ತಾಲೂಕಿನ ಸಮಸ್ಯೆಗಳನ್ನು ಪತ್ರಿಕೆಗಳ ಮೂಲಕ ಬಿಂಬಿಸಿ ಎಚ್ಚರಿಸಿದ್ದಾರೆ. ಅದೇ ರೀತಿ ಸಮಸ್ಯೆಗಳು ಪರಿಹಾರವಾದಾಗಲೂ ತಾಲೂಕಿನ ಪತ್ರಕರ್ತರು ಅಪಾರ ಬೆಂಬಲ ವ್ಯಕ್ತಪಡಿಸಿದ್ದಾರೆ. ಕ್ಲಿಷ್ಟಕರ ಸನ್ನಿವೇಶಗಳಲ್ಲಿ ನನ್ನನ್ನು ತಿದ್ದಿ ತೀಡಿ ಬೆಂಬಲ ನೀಡಿದ್ದೀರಿ ಎಂದರು.

ಪ್ರಧಾನಿ ನರೇಂದ್ರ ಮೋದಿ ಹಾಗು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಮಾಜವನ್ನು ಕೊರೊನಾ ಮುಕ್ತವಾಗಿಸಲು ಪಣ ತೊಟ್ಟಿದ್ದಾರೆ. ಅದೇ ರೀತಿ ನಾವೆಲ್ಲಾ ಸೇರಿ ತಾಲೂಕಿನಲ್ಲಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಲು ಪತ್ರಿಕಾ ದಿನಾಚರಣೆಯಂದೇ ಸಂಕಲ್ಪ ಮಾಡೋಣ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮಾತನಾಡಿ, ನಾನು ತಾಲೂಕಿನ ಪತ್ರಕರ್ತರೊಂದಿಗೆ ಹಲವು ವರ್ಷಗಳಿಂದ ಅವಿನಾಭಾವ ಸಂಬಂಧ ಹೊಂದಿದ್ದೇನೆ. ನನ್ನ ಸಾರ್ವಜನಿಕ ಜೀವನದ ಪ್ರಭಾವಲಯಕ್ಕೆ ಪತ್ರಕರ್ತರ ಕೊಡುಗೆ ಅಪಾರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ‌ ಮೂಲಭೂತ ಹಕ್ಕುಗಳನ್ನು ರಕ್ಷಿಸುವಲ್ಲಿ,‌ ಉಳಿಸುವಲ್ಲಿ ಮತ್ತು ಜನರನ್ನು ಎಚ್ಚರಿಸುವಲ್ಲಿ ಪತ್ರಿಕೆಗಳ ಮಹತ್ವ ಹೆಚ್ಚಿನದು ಎಂದರು.

ಎಂ.ಎಲ್.ಸಿ. ಹರೀಶ ಕುಮಾರ್ ಅವರು, ಜನರಿಗೆ‌ ಯಾವುದೇ ಸಂಶಯ ಬರದ ರೀತಿಯಲ್ಲಿ ಲೇಖನಗಳನ್ನು ಪ್ರಕಟಿಸಿದರೆ ಜನರಿಗೆ ಉಪಯೋಗವಾಗುತ್ತದೆ. ಸರಕಾರದ ವೈಫಲ್ಯಗಳನ್ನು ಎತ್ತಿ ಹಿಡಿಯುವಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದು ಎಂದರು.

ಈ ಸಂದರ್ಭ ಪತ್ರಕರ್ತ ಮನೋಹರ ಬಳಂಜ ಅವರು ಪುತ್ರಿಯ ಸ್ಮರಣಾರ್ಥ ಮೂವರು ಅನಾರೋಗ್ಯಕ್ಕೊಳಗಾದ ಮಕ್ಕಳಿಗೆ ಕೊಡಮಾಡಿದ ದಿತಿ ನಿಧಿಯನ್ನು‌ ಅತಿಥಿಗಳು ಫಲಾನುಭವಿಗಳಿಗೆ ಹಸ್ತಾಂತರಿಸಿದರು.

ದ.ಕ.ಜಿ.ಕಾರ್ಯನಿರತ ಪತ್ರಕರ್ತರ ಸಂಘದ ಗ್ರಾಮೀಣ ಕಾರ್ಯದರ್ಶಿ ಭುವನೇಶ್ ಜಿ.ಗೇರುಕಟ್ಟೆ ವೇದಿಕೆಯಲ್ಲಿದ್ದರು. ಸಂಘದ ಅಧ್ಯಕ್ಷ ಅಶ್ರಫ್ ಆಲಿ ಕುಂಞ ಅಧ್ಯಕ್ಷತೆ ವಹಿಸಿ ಸಂಘಕ್ಕೆ ನಿವೇಶನದ ಬೇಡಿಕೆಯನ್ನಿಟ್ಟರು.

ಸಂಘದ ಕಾರ್ಯದರ್ಶಿ ಮನೋಹರ ಬಳಂಜ ಸ್ವಾಗತಿಸಿದರು. ಸಂಘದ ಕೋಶಾಧಿಕಾರಿ ಚೈತ್ರೇಶ್ ಇಳಂತಿಲ, ಗಣೇಶ ಶಿರ್ಲಾಲು ಕಾರ್ಯಕ್ರಮ ನಿರ್ವಹಿಸಿದರು.

https://chat.whatsapp.com/CTDH16qVW5RL023JwWgknA

Spread the love
  • Related Posts

    ಬೆಳ್ತಂಗಡಿ : ಅತಿ ಹಿಂದುಳಿದ ಮಠಾಧೀಶರ ಮಹಾಸಭಾವತಿಯಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

    ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ,…

    Spread the love

    ಬೆಳ್ತಂಗಡಿ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅಧಿಕಾರ ಸ್ವೀಕಾರ

    ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.‌ ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 4 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 5 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 9 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 8 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 14 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 15 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ