ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮ
ದರ್ಜೆಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಸಂಸ್ಥೆ ಜನರ ಆಶಯಗಳಿಗೆ ಅನುಗುಣವಾಗಿರುವ ಆಸ್ಪತ್ರೆಯಾಗಿ
ಬೆಳೆಯಬೇಕು ಎಂಬುದು ನಮ್ಮ ಸಂಕಲ್ಪ” ಎಂದು ಬೆನಕ ಆಸ್ಪತ್ರೆಯ ಡಾ ಗೋಪಾಲಕೃಷ್ಣ ಕೆ ಹೇಳಿದರು.

ಬೆನಕ ಆಸ್ಪತ್ರೆಯು ರಜತ ಮಹೋತ್ಸವದ ಸಂಭ್ರಮದಲ್ಲಿದೆ ವಿಸ್ತ್ರತ ನೂತನ ಕಟ್ಟಡ ಕಾಮಗಾರಿ ಕೂಡ ಮುಗಿದಿದ್ದು, ಕಟ್ಟಡದ ಉದ್ಘಾಟನೆ ಜ. 18 ರಂದು ನಡೆಯಲಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ. ಗೋಪಾಲಕೃಷ್ಣ ಕೆ. ಅವರು “ಕೇವಲ 7 ಹಾಸಿಗೆಗಳ 2 ವೈದ್ಯರು ಹಾಗೂ 2 ದಾದಿಯರಿಂದ 2000 ರಲ್ಲಿ ಆರಂಭವಾದ ಬೆನಕ ಆಸ್ಪತ್ರೆ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ತನ್ನ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಬಂದಿದೆ. ಸ್ಥಳೀಯ ಅಗತ್ಯಗಳನ್ನು ಮನಗಂಡು ಸಣ್ಣಮಟ್ಟದಲ್ಲಿ ಆರಂಭವಾದ ಆಸ್ಪತ್ರೆ ಇದೀಗ 130 ಹಾಸಿಗೆಗಳ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಗುಣಮಟ್ಟದ ಸಮಕಾಲೀನ ಆರೋಗ್ಯ ಸೇವೆಯನ್ನು ನೀಡುವ ಹಾಗೂ ಜನರ ಆಯ್ಕೆಯ ಆಸ್ಪತ್ರೆಯಾಗಿ ಹಂತ ಹಂತವಾಗಿ ಬೆಳೆಯುತ್ತಾ ಬಂದಿದ್ದೇವೆ. ಪ್ರತಿ ವರ್ಷ ಕೂಡ ಯಾವುದಾದರೊಂದು ಹೊಸ ಸೇವೆಯನ್ನು ಆರಂಭಿಸುತ್ತಾ ಬಂದಿದ್ದೇವೆ” ಎಂದು ವಿವರಿಸಿದರು. ಇದೀಗ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದ್ದು 40ಮಂದಿ ವೈದ್ಯರ ಸೇವೆಯೂ ಲಭ್ಯವಿದೆ ಎಂದು ವಿವರಿಸಿದರು.


ಬೆನಕ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮವನ್ನು ವಿಧಾನ ಸಭೆಯ ಸಭಾ ಪತಿ ಯು. ಟಿ. ಖಾದರ್ ಉದ್ಘಾಟಿಸಲಿದ್ದು, ನೂತನ. ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಸರಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. ಇದೇ ರೀತಿ ಬೇರೆ ಬೇರೆ. ವಿಭಾಗಗಳು ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಡಾ. ಯು. ಟಿ ಇಫಿಕರ್ ಅಲಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಗ್ರಾ.ಪಂ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು ಹಾಗೂ ಇತರ ಗಣ್ಯರು ಭಾಗಿಗಳಾಗಲಿದ್ದಾರೆ. ಎಂದು ಅವರು ತಿಳಿಸಿದರು.


ಈ ಪತ್ರಿಕಾ ಗೋಷ್ಠಿಯಲ್ಲಿ ಡಾ. ಭಾರತಿ ಜಿ. ಕೆ., ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ. ಭಟ್ , ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್‌ಜಿ ಭಟ್ ಉಪಸ್ಥಿತರಿದ್ದರು.

Spread the love
  • Related Posts

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಕಡಿರುದ್ಯಾವರ: ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಮತ್ತು 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ಇದರ ವತಿಯಿಂದ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಾಗೂ ವಿವಿಧ ಗ್ರಾಮೀಣ ಕ್ರೀಡಾಕೂಟಗಳು…

    Spread the love

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    You Missed

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 5 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 8 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 6 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 9 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 14 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 9 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ