ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮ
ದರ್ಜೆಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಸಂಸ್ಥೆ ಜನರ ಆಶಯಗಳಿಗೆ ಅನುಗುಣವಾಗಿರುವ ಆಸ್ಪತ್ರೆಯಾಗಿ
ಬೆಳೆಯಬೇಕು ಎಂಬುದು ನಮ್ಮ ಸಂಕಲ್ಪ” ಎಂದು ಬೆನಕ ಆಸ್ಪತ್ರೆಯ ಡಾ ಗೋಪಾಲಕೃಷ್ಣ ಕೆ ಹೇಳಿದರು.

ಬೆನಕ ಆಸ್ಪತ್ರೆಯು ರಜತ ಮಹೋತ್ಸವದ ಸಂಭ್ರಮದಲ್ಲಿದೆ ವಿಸ್ತ್ರತ ನೂತನ ಕಟ್ಟಡ ಕಾಮಗಾರಿ ಕೂಡ ಮುಗಿದಿದ್ದು, ಕಟ್ಟಡದ ಉದ್ಘಾಟನೆ ಜ. 18 ರಂದು ನಡೆಯಲಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ. ಗೋಪಾಲಕೃಷ್ಣ ಕೆ. ಅವರು “ಕೇವಲ 7 ಹಾಸಿಗೆಗಳ 2 ವೈದ್ಯರು ಹಾಗೂ 2 ದಾದಿಯರಿಂದ 2000 ರಲ್ಲಿ ಆರಂಭವಾದ ಬೆನಕ ಆಸ್ಪತ್ರೆ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ತನ್ನ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಬಂದಿದೆ. ಸ್ಥಳೀಯ ಅಗತ್ಯಗಳನ್ನು ಮನಗಂಡು ಸಣ್ಣಮಟ್ಟದಲ್ಲಿ ಆರಂಭವಾದ ಆಸ್ಪತ್ರೆ ಇದೀಗ 130 ಹಾಸಿಗೆಗಳ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಗುಣಮಟ್ಟದ ಸಮಕಾಲೀನ ಆರೋಗ್ಯ ಸೇವೆಯನ್ನು ನೀಡುವ ಹಾಗೂ ಜನರ ಆಯ್ಕೆಯ ಆಸ್ಪತ್ರೆಯಾಗಿ ಹಂತ ಹಂತವಾಗಿ ಬೆಳೆಯುತ್ತಾ ಬಂದಿದ್ದೇವೆ. ಪ್ರತಿ ವರ್ಷ ಕೂಡ ಯಾವುದಾದರೊಂದು ಹೊಸ ಸೇವೆಯನ್ನು ಆರಂಭಿಸುತ್ತಾ ಬಂದಿದ್ದೇವೆ” ಎಂದು ವಿವರಿಸಿದರು. ಇದೀಗ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದ್ದು 40ಮಂದಿ ವೈದ್ಯರ ಸೇವೆಯೂ ಲಭ್ಯವಿದೆ ಎಂದು ವಿವರಿಸಿದರು.


ಬೆನಕ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮವನ್ನು ವಿಧಾನ ಸಭೆಯ ಸಭಾ ಪತಿ ಯು. ಟಿ. ಖಾದರ್ ಉದ್ಘಾಟಿಸಲಿದ್ದು, ನೂತನ. ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಸರಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. ಇದೇ ರೀತಿ ಬೇರೆ ಬೇರೆ. ವಿಭಾಗಗಳು ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಡಾ. ಯು. ಟಿ ಇಫಿಕರ್ ಅಲಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಗ್ರಾ.ಪಂ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು ಹಾಗೂ ಇತರ ಗಣ್ಯರು ಭಾಗಿಗಳಾಗಲಿದ್ದಾರೆ. ಎಂದು ಅವರು ತಿಳಿಸಿದರು.


ಈ ಪತ್ರಿಕಾ ಗೋಷ್ಠಿಯಲ್ಲಿ ಡಾ. ಭಾರತಿ ಜಿ. ಕೆ., ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ. ಭಟ್ , ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್‌ಜಿ ಭಟ್ ಉಪಸ್ಥಿತರಿದ್ದರು.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 70 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 74 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 38 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 34 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 103 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 179 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ