ರಜತ ಮಹೋತ್ಸವದ ಹೊಸ್ತಿಲಲ್ಲಿ ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ನಾಳೆ ವಿಸ್ತ್ರತ ನೂತನ ಕಟ್ಟಡದ ಉದ್ಘಾಟನೆ

ಬೆಳ್ತಂಗಡಿ: ಕಳೆದ 25ವರ್ಷಗಳಿಂದ ಗ್ರಾಮೀಣ ಪ್ರದೇಶವಾಗಿರುವ ಉಜಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೆನಕ ಆಸ್ಪತ್ರೆ ಅತ್ಯತ್ತಮ
ದರ್ಜೆಯ ಆರೋಗ್ಯ ಶುಶೂಷೆಯನ್ನು ಎಲ್ಲರಿಗೂ ಕೈಗೆಟಕುವ ದರದಲ್ಲಿ ಹಾಗೂ ಸಮುದಾಯದ ಆಶಯಗಳಿಗೆ ಅನುಗುಣವಾಗಿ ಒದಗಿಸುವ ಕಾರ್ಯವನ್ನು ಮಾಡುತ್ತಾ ಬಂದಿದೆ. ಈ ಸಂಸ್ಥೆ ಜನರ ಆಶಯಗಳಿಗೆ ಅನುಗುಣವಾಗಿರುವ ಆಸ್ಪತ್ರೆಯಾಗಿ
ಬೆಳೆಯಬೇಕು ಎಂಬುದು ನಮ್ಮ ಸಂಕಲ್ಪ” ಎಂದು ಬೆನಕ ಆಸ್ಪತ್ರೆಯ ಡಾ ಗೋಪಾಲಕೃಷ್ಣ ಕೆ ಹೇಳಿದರು.

ಬೆನಕ ಆಸ್ಪತ್ರೆಯು ರಜತ ಮಹೋತ್ಸವದ ಸಂಭ್ರಮದಲ್ಲಿದೆ ವಿಸ್ತ್ರತ ನೂತನ ಕಟ್ಟಡ ಕಾಮಗಾರಿ ಕೂಡ ಮುಗಿದಿದ್ದು, ಕಟ್ಟಡದ ಉದ್ಘಾಟನೆ ಜ. 18 ರಂದು ನಡೆಯಲಿದೆ. ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಡಾ. ಗೋಪಾಲಕೃಷ್ಣ ಕೆ. ಅವರು “ಕೇವಲ 7 ಹಾಸಿಗೆಗಳ 2 ವೈದ್ಯರು ಹಾಗೂ 2 ದಾದಿಯರಿಂದ 2000 ರಲ್ಲಿ ಆರಂಭವಾದ ಬೆನಕ ಆಸ್ಪತ್ರೆ ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ತನ್ನ ಸೇವೆಯನ್ನು ಹಂತ ಹಂತವಾಗಿ ವಿಸ್ತರಿಸುತ್ತಾ ಬಂದಿದೆ. ಸ್ಥಳೀಯ ಅಗತ್ಯಗಳನ್ನು ಮನಗಂಡು ಸಣ್ಣಮಟ್ಟದಲ್ಲಿ ಆರಂಭವಾದ ಆಸ್ಪತ್ರೆ ಇದೀಗ 130 ಹಾಸಿಗೆಗಳ ಮಲ್ಟಿ – ಸ್ಪೆಷಾಲಿಟಿ ಆಸ್ಪತ್ರೆಯಾಗಿ ಬೆಳೆದು ನಿಂತಿದೆ. ಗುಣಮಟ್ಟದ ಸಮಕಾಲೀನ ಆರೋಗ್ಯ ಸೇವೆಯನ್ನು ನೀಡುವ ಹಾಗೂ ಜನರ ಆಯ್ಕೆಯ ಆಸ್ಪತ್ರೆಯಾಗಿ ಹಂತ ಹಂತವಾಗಿ ಬೆಳೆಯುತ್ತಾ ಬಂದಿದ್ದೇವೆ. ಪ್ರತಿ ವರ್ಷ ಕೂಡ ಯಾವುದಾದರೊಂದು ಹೊಸ ಸೇವೆಯನ್ನು ಆರಂಭಿಸುತ್ತಾ ಬಂದಿದ್ದೇವೆ” ಎಂದು ವಿವರಿಸಿದರು. ಇದೀಗ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಆಧುನಿಕ ಚಿಕಿತ್ಸಾ ಸೌಲಭ್ಯಗಳು ಲಭ್ಯವಿದ್ದು 40ಮಂದಿ ವೈದ್ಯರ ಸೇವೆಯೂ ಲಭ್ಯವಿದೆ ಎಂದು ವಿವರಿಸಿದರು.


ಬೆನಕ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮವನ್ನು ವಿಧಾನ ಸಭೆಯ ಸಭಾ ಪತಿ ಯು. ಟಿ. ಖಾದರ್ ಉದ್ಘಾಟಿಸಲಿದ್ದು, ನೂತನ. ಕಟ್ಟಡದ ಉದ್ಘಾಟನೆಯನ್ನು ರಾಜ್ಯ ಸರಕಾರದ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ನೆರವೇರಿಸಲಿದ್ದಾರೆ. ಇದೇ ರೀತಿ ಬೇರೆ ಬೇರೆ. ವಿಭಾಗಗಳು ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜಾ, ಡಾ. ಯು. ಟಿ ಇಫಿಕರ್ ಅಲಿ ಉದ್ಘಾಟಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಗ್ರಾ.ಪಂ ಅಧ್ಯಕ್ಷೆ ಉಷಾಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು ಹಾಗೂ ಇತರ ಗಣ್ಯರು ಭಾಗಿಗಳಾಗಲಿದ್ದಾರೆ. ಎಂದು ಅವರು ತಿಳಿಸಿದರು.


ಈ ಪತ್ರಿಕಾ ಗೋಷ್ಠಿಯಲ್ಲಿ ಡಾ. ಭಾರತಿ ಜಿ. ಕೆ., ಡಾ. ಆದಿತ್ಯ ರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ. ಭಟ್ , ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್‌ಜಿ ಭಟ್ ಉಪಸ್ಥಿತರಿದ್ದರು.

Spread the love
  • Related Posts

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    ಗುರುವಾಯನಕೆರೆಯಲ್ಲಿ ನೀಟ್ ತರಬೇತಿಗೆ ಹೊಸ ಅಧ್ಯಾಯ – ಗುಣಮಟ್ಟದ ಶಿಕ್ಷಣ, ಅನುಭವಿ ಶಿಕ್ಷಕರ ಮಾರ್ಗದರ್ಶನ ಹಾಗೂ ಅತ್ಯುತ್ತಮ ಫಲಿತಾಂಶಗಳಿಂದ ವಿದ್ಯಾರ್ಥಿಗಳ ವಿಶ್ವಾಸದ ಕೇಂದ್ರ ಎಕ್ಸೆಲ್ ಗುರುವಾಯನಕೆರೆ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಕನಸು ಹೊಂದಿರುವ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ನೀಟ್ ತರಬೇತಿ…

    Spread the love

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಪುತ್ತೂರು : ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಸ್ಲೀಪ‌ರ್ ಬಸ್‌ ರಸ್ತೆ ಬದಿಯ ಮಣ್ಣಿನಲ್ಲಿ ಹೂತು ಹೋಗಿರುವ ಘಟನೆ ಆ.11ರ ರಾತ್ರಿ ಪುತ್ತೂರು-ಉಪ್ಪಿನಂಗಡಿ ರಸ್ತೆಯ ಸೇಡಿಯಾಪು ಬಳಿ ನಡೆದಿದೆ. ಪುತ್ತೂರು ಬಸ್ ನಿಲ್ದಾಣದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಸರಕಾರಿ ಬಸ್, ಸೇಡಿಯಾಪು ಬಳಿ…

    Spread the love

    You Missed

    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್ ಗುರುವಾಯನಕೆರೆ

    • By admin
    • August 11, 2026
    • 9 views
    ವೈದ್ಯಕೀಯ ವಿದ್ಯಾರ್ಥಿಗಳ ಕನಸು ನನಸಾಗಿಸುವ ‘ಎಕ್ಸೆಲ್ ನೀಟ್ ಅಕಾಡೆಮಿ’ ವೈದ್ಯರಾಗಲು ವಿಶ್ವಾಸದ ಆಯ್ಕೆ – ಎಕ್ಸೆಲ್  ಗುರುವಾಯನಕೆರೆ

    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    • By admin
    • August 11, 2026
    • 8 views
    ಪುತ್ತೂರು: ರಸ್ತೆ ಕಾಮಗಾರಿ ನಡುವೆ ಮಣ್ಣಿನಲ್ಲಿ ಹೂತು ಹೋದ ಕೆ.ಎಸ್‌.ಆರ್‌.ಟಿ.ಸಿ ಸ್ಲೀಪರ್ ಕೋಚ್ ಬಸ್; ರಸ್ತೆ ಸುರಕ್ಷತಾ ಕ್ರಮಗಳ ಕೊರತೆಗೆ ಸ್ಥಳೀಯರ ಆಕ್ರೋಶ!

    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    • By admin
    • August 10, 2026
    • 5 views
    ಬೆಳ್ತಂಗಡಿ: ‘ಡ್ರಗ್ಸ್ ಮುಕ್ತ ಬೆಳ್ತಂಗಡಿ’ ಜಾಗೃತಿ ಅಭಿಯಾನಕ್ಕೆ ಯುವ ಕಾಂಗ್ರೆಸ್ ಚಾಲನೆ

    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    • By admin
    • August 10, 2026
    • 8 views
    ಚಾರ್ಮಾಡಿ ಘಾಟಿಯಲ್ಲಿ ನಿರಂತರವಾಗಿ ಕಾಣಿಸಿಕೊಳ್ಳುತ್ತಿರುವ ಏಕದಂತ

    ಪಶ್ಚಿಮ ಘಟ್ಟದ ಪ್ರಕೃತಿ ಮಡಿಲಿನ ‘ನೇತ್ರಾವತಿ ಹೋಂ ಸ್ಟೇ’ – ಪ್ರವಾಸಿಗರಿಗಾಗಿ ಪರಿಪೂರ್ಣ ತಾಣ

    • By admin
    • August 9, 2026
    • 9 views

    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ

    • By admin
    • August 8, 2026
    • 14 views
    ಬೆಳ್ತಂಗಡಿ: ಅನಾರೋಗ್ಯದಿಂದ ಬಳಲುತ್ತಿರುವ 2 ತಿಂಗಳ ಮಗುವಿನ ಚಿಕಿತ್ಸೆಗೆ ಸಹೃದಯಿಗಳ ತುರ್ತು ನೆರವಿನ ಹಸ್ತ ಅಗತ್ಯ