ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ

ಉಜಿರೆ : ಉಜಿರೆಯ ಬೆನಕ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ ಮತ್ತು ರಜತ ಸಂಭ್ರಮ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಈ ಭಾಗದ ಜನರ ಆಯುಷ್ಯ ಹೆಚ್ಚು ಮಾಡುವಲ್ಲಿ ಬೆನಕ ಆಸ್ಪತ್ರೆಯ ಮುಖ್ಯಸ್ಥರು ಹಾಗೂ ವೈದ್ಯರು ಮತ್ತು ಬಳಗದೊಂದಿಗೆ ಕೆಲಸ ಮಾಡುತ್ತಿದ್ದಾರೆ ಅವರ ಈ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು. ಗ್ರಾಮೀಣ ಭಾಗದ ಜನರು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಹೋಗಬೇಕಾಗುತ್ತೆ. ಅಂಥಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಎಲ್ಲಾ ಆರೋಗ್ಯ ಸೇವೆಯನ್ನು ಈ ದಂಪತಿ ವೈದ್ಯರು ನೀಡುತ್ತಿದ್ದಾರೆ. ಅದ್ಭುತವಾದ ತುರ್ತು ನಿಗಾ ಘಟಕ ಇದೆ, ಎಲ್ಲವೂ ವ್ಯವಸ್ಥಿತವಾಗಿದೆ ಪ್ರಸ್ತುತ 130 ಅಲ್ಲ 500 ಹಾಸಿಗೆಯ ಆಸ್ಪತ್ರೆ ಆಗಲಿ ಎಂದು ಇದೇ ವೇಳೆ ಹಾರೈಸಿದರು. ಗ್ರಾಮೀಣ ಭಾಗದಲ್ಲಿ ಆಸ್ಪತ್ರೆ ಕಟ್ಟಿದ್ದೀರಾ ಅಂದ್ರೆ ಬಡವರಿಗಾಗಿ ಮಾಡಿದ್ದೀರಾ ಅನ್ನೋದು ಗೊತ್ತಾಗುತ್ತೆ , ಬಡ ಜನರ ಬಗ್ಗೆ ಗಮನ ಇಟ್ಟುಕೊಂಡು ನಿಮ್ಮ ಆಸ್ಪತ್ರೆ ಮುಂದುವರೆಯಲಿ ಎಂದು ಮನವಿ ಮಾಡಿದರು.

ಬಳಿಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾತನಾಡಿದ ಕುಟುಂಬದ ಸದಸ್ಯರೆಲ್ಲ ಸೇರಿ ಈ ತಾಲೂಕಿನ ಜನರ ಆರೋಗ್ಯ ಸೇವೆಯನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದ್ದಾರೆ, ಇದು ನಿಜಕ್ಕೂ ದೊಡ್ಡ ಶ್ಲಾಘಿಸಿಬೇಕಾದ ಸಾಧನೆ ಎಂದರು. ಗ್ರಾಮೀಣ ಪ್ರದೇಶವಾದಂತಹ ಉಜಿರೆಯಲ್ಲಿ ಒಂದು ದೊಡ್ಡ ಆಸ್ಪತ್ರೆ ಕಟ್ಟಿ ಕೆಲಸ ಮಾಡುತ್ತಿದ್ದೀರಾ ನಿಮಗೆ ನನ್ನ ಮೊದಲ ಅಭಿನಂದನೆ ಎಂದರು. ಬೆನಕ ಆಸ್ಪತ್ರೆಯ ಸಿಬ್ಬಂದಿಗಳು ರೋಗಿಗಳನ್ನು ಅತ್ಯಂತ ಪ್ರೀತಿ ಇಂದ ನಗು ಮುಖದಿಂದ ನೋಡುತ್ತಾರೆ ಸಿಬ್ಬಂದಿಗಳಿಗೂ ನನ್ನ ಅಭಿನಂದನೆ ಎಂದರು.

ವಿಸ್ತೃತ ಕಟ್ಟಡ ಉದ್ಘಾಟನೆ

ನೂತನ ವಿಸ್ತರಣಾ ಕಟ್ಟಡದ ಉದ್ಘಾಟನೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ನಡೆಸಿದರು. ನೂತನ ಕಟ್ಟಡದ ಕ್ಯಾಶುವಲ್ಟಿ ವಿಭಾಗ, ಡೇ ಕೇರ್ ವಿಭಾಗ, ಮಕ್ಕಳ ವಿಭಾಗ ಉದ್ಘಾಟನೆಗೊಂಡಿತು.

ಕಾರ್ಯಕ್ರಮದಲ್ಲಿ ಅತಿಥಿಗಳನ್ನು ಬೆನಕ ಆಸ್ಪತ್ರೆಯ ಎಂ.ಡಿ. ಡಾ. ಗೋಪಾಲಕೃಷ್ಣ ಸ್ವಾಗತಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ , ಬೆಸ್ಟ್ ಫೌಂಡೇಶನ್ ನಿರ್ದೇಶಕ ರಕ್ಷಿತ್ ಶಿವರಾಮ್ , ಐಎಎಸ್ ಅಧಿಕಾರಿ ನವೀನ್ ಭಟ್ , ಡಾ. ಭಾರತಿ , ಡಾ. ಅಂಕಿತಾ ಭಟ್ , ಡಾ. ರೋಹಿತ್ ಭಟ್ , ಡಾ.ಆದಿತ್ಯ ರಾವ್ , ಉಜಿರೆ ಪಂಚಾಯತ್ ಅಧಕ್ಷೆ ಉಷಾ ಕಾರಂತ್ , ರವಿ ಬರಮೇಲು ಮತ್ತಿತರು ಉಪಸ್ಥಿತರಿದ್ದರು.

Spread the love
  • Related Posts

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಮಂಗಳೂರು, ಆಗಸ್ಟ್ 7: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಹವಾಮಾನ ಮುನ್ಸೂಚನೆಯಂತೆ ಪುತ್ತೂರು ಉಪವಿಭಾಗ ವ್ಯಾಪ್ತಿಯಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ…

    Spread the love

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    ಬಂಗಾಡಿ, ಆ.7: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಬಂಗಾಡಿಯ 2025–26ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 29, 2026ರ ಶನಿವಾರ ಬೆಳಿಗ್ಗೆ 9.30 ಗಂಟೆಗೆ ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರು ಹಾಗೂ ಆಡಳಿತ ಮಂಡಳಿಯವರು…

    Spread the love

    You Missed

    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    • By admin
    • August 7, 2026
    • 4 views
    ಭಾರಿ ಮಳೆ ಹಿನ್ನೆಲೆ: ಪುತ್ತೂರು ಉಪವಿಭಾಗದ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    • By admin
    • August 7, 2026
    • 5 views
    ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ ಆ.29ರಂದು ನಡೆಯಲಿದೆ. ಶೇ.70ಕ್ಕಿಂತ ಹೆಚ್ಚು ಅಂಕ ಪಡೆದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ

    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    • By admin
    • August 6, 2026
    • 11 views
    “ಶಿಕ್ಷಣದ ಹೆಮ್ಮೆಗೆ ಡ್ರಗ್ಸ್ ಕರಿನೆರಳು: ಎಚ್ಚೆತ್ತುಕೊಳ್ಳಬೇಕಿದೆ ಬೆಳ್ತಂಗಡಿಯ ಜನತೆ!!!”

    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • August 6, 2026
    • 6 views
    ಸಕಲೇಶಪುರ: ಬಾಳುಪೇಟೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    • By admin
    • August 6, 2026
    • 8 views
    ಬೆಸ್ಟ್ ಎಂಎಲ್ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಬಿಜೆಪಿ ಮೋರ್ಚಾಗಳಿಂದ ಅಭಿನಂದನೆ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ

    • By admin
    • August 6, 2026
    • 6 views
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಿ: ಶಾಸಕ ಹರೀಶ್ ಪೂಂಜ ಕರೆ