ಬೆನಕ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆ ಅನನ್ಯ – ಶ್ರೀ ವಿದ್ಯಾ ಪ್ರಸನ್ನ ತೀರ್ಥ ಸ್ವಾಮೀಜಿ

ಬೆಳ್ತಂಗಡಿ: ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕುಕ್ಕೆ ಸುಬ್ರಮಣ್ಯ ಮಠದ  ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರು ಆಸ್ಪತ್ರೆಯ ವಿಸ್ಕೃತ ಕಟ್ಟಡದ ಧಾರ್ಮಿಕ ಕಾರ್ಯಕ್ರಮಗಳಿಗೆ ದೀಪ ಬೆಳಗಿಸಿ ಚಾಲನೆ ನೀಡಿದರು.

ಬಳಿಕ ಆಶೀರ್ವಚನ ನೀಡುತ್ತಾ ಉಜಿರೆಯಂಥ ಸಣ್ಣ ಪ್ರದೇಶದಲ್ಲಿ ಕಳೆದ 25 ವರ್ಷಗಳಿಂದ ಅವಿರತ ಪರಿಶ್ರಮದಿಂದ ಸಕಲ ಸೌಲಭ್ಯಗಳನ್ನು ಒಳಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತಿಸಿರುವುದು ಅವರ ನಿರಂತರ ಸೇವೆಯ ದ್ಯೋತಕವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಮುಂದೆಯೂ ಇದೆ ರೀತಿ ಮುನ್ನಡೆಸಿಕೊಂಡು ಪರಿಸರದ ಜನರಿಗೆ ಉತ್ತಮ ಆರೋಗ್ಯ ನೀಡಲು ಶ್ರೀ ಸುಬ್ರಮಣ್ಯನ ಅನುಗ್ರಹ ಸದಾ ಇರಲೆಂದು ಶುಭ ಹಾರೈಸಿದರು. ಆಸ್ಪತ್ರೆಯ ಪ್ರತಿ ವಿಭಾಗಕ್ಕೂ ಭೇಟಿ ನೀಡಿ ಆಸ್ಪತ್ರೆಯ ಸೌಲಭ್ಯಗಳನ್ನು ವೀಕ್ಷಿಸಿ ಪ್ರಶಂಸಿಸಿದರು.
ಶ್ರೀಗಳನ್ನು ಡಾ. ಗೋಪಾಲಕೃಷ್ಣ ಮತ್ತು ಭಾರತಿ ದಂಪತಿಗಳು ಪೂರ್ಣ ಕುಂಭ ಸ್ವಾಗತ ನೀಡಿ ಪಾದಪೂಜೆ ನೆರೆವೇರಿಸಿದರು. ಈ ಸಂದರ್ಭದಲ್ಲಿ ಶ್ರೀ ಸೀತಾರಾಮ್ ಭಟ್, ಡಾ. ಆದಿತ್ಯರಾವ್, ಡಾ. ಅಂಕಿತ ಜಿ ಭಟ್, ಡಾ. ರೋಹಿತ್ ಜಿ ಭಟ್ ಮತ್ತು ಕುಟುಂಬಸ್ಥರು ಹಾಗೂ ಆಸ್ಪತ್ರೆಯ ಸಿಬ್ಬಂಧಿಗಳು ಪಾಲ್ಗೊಂಡು ಶ್ರೀಗಳಿಂದ ಆಶೀರ್ವಾದ ಪಡೆದುಕೊಂಡರು.

Spread the love
  • Related Posts

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಬಿಟ್‌ಕಾಯಿ ಬಹುಕೋಟಿ ಹಗರಣ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ED ಮೂವರು ಪ್ರಮುಖ ಆರೋಪಿಗಳನ್ನು ಬಂಧನ ಮಾಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ, ರಾಬಿನ್‌ ಖಂಡೇವಾಲ ಹಾಗೂ ಸುನೀಶ್‌ ಹೆಗ್ಡೆಯನ್ನು ಬಂಧನ ಮಾಡಲಾಗಿದ್ದು,…

    Spread the love

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಬೆಳ್ತಂಗಡಿ: ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ 26 ನಾಗರಹಾವಿನ ಮರಿ ಹಾಗೂ ತಾಯಿ ಹಾವನ್ನು ರಕ್ಷಿಸಿ ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮನೆಯ ಗೋಡೆಯಲ್ಲಿ ಕಳೆದ ಕೆಲವು ದಿನಗಳಿಂದ ನಾಗರಹಾವು ಸುಳಿದಾಡುವುದನ್ನು ಕಂಡ ಶ್ರೀನಿವಾಸಗೌಡ ಎಂಬವರು ಕಕ್ಕಿಂಜೆಯ ಉರಗಮಿತ್ರ,…

    Spread the love

    You Missed

    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    • By admin
    • May 9, 2026
    • 25 views
    ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಶ್ರೀಕಿ ಸಹಿತ ಮೂವರನ್ನು ಬಂಧಿಸಿದ ಇಡಿ ಅಧಿಕಾರಿಗಳು

    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    • By admin
    • May 8, 2026
    • 110 views
    ನೆರಿಯ ಗ್ರಾಮದ ಕುಡುಮಡ್ಕದ ಮನೆಯೊಂದರ ಗೋಡೆಯಲ್ಲಿ ಪತ್ತೆಯಾದ ನಾಗರ ಹಾವುಗಳು

    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    • By admin
    • May 7, 2026
    • 114 views
    ಮೌಲ್ಯ ಕಳೆದುಕೊಂಡ ಮೌಲ್ಯಮಾಪನ! ವಿದ್ಯಾರ್ಥಿಗಳ ಖಿನ್ನತೆಗೆ ಇದೇ ಕಾರಣ, ಶಿಕ್ಷಣ ಸಚಿವರೇ ಈ ವ್ಯವಸ್ಥೆ ಯಾರಿಗಾಗಿ, ಯಾತಕ್ಕಾಗಿ?

    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    • By admin
    • May 7, 2026
    • 45 views
    ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್, ಹಳೇಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ ತಂಡ!!!

    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    • By admin
    • May 7, 2026
    • 40 views
    ಕೊರೊನಾ ನೆನಪು ಮಾಸುವ ಮುನ್ನವೇ ‘ಹಂಟಾವೈರಸ್’ ಆತಂಕ: ಸ್ವಿಜರ್ಲೆಂಡ್‌ನಲ್ಲಿ ಮೊದಲ ಪ್ರಕರಣ ಪತ್ತೆ!!

    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ

    • By admin
    • May 7, 2026
    • 101 views
    ಮುಂಡಾಜೆ ಹೆದ್ದಾರಿ ಬದಿ ಕಳಪೆ ತಗಡು ಶೀಟಿನ ತಂಗುದಾಣ: ಸಾರ್ವಜನಿಕರ ಆಕ್ರೋಶ