ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್ ಕೊಟ್ಟ ಕೊರೋನಾ! ಕನ್ನಡದ ಪ್ರತಿಭಾವಂತ ನಿರ್ದೇಶಕ ಭರತ್ ಕೊರೋನಾಗೆ ಬಲಿ!

ಬೆಂಗಳೂರು: ಕಂಠಿ, ಸಾಹೇಬ ಚಿತ್ರಗಳನ್ನು ನಿರ್ದೇಶಿಸಿದ ಪ್ರತಿಭಾವಂತ ನಿರ್ದೇಶಕ ಭರತ್ ಹಠಾತ್ ಅಸುನೀಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನ ಪೀಡಿತರಾಗಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಭರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2004 ರಲ್ಲಿ ಕಂಠಿ ಚಿತ್ರದ ಮೂಲಕ ಭರತ್ ಚಿತ್ರರಂಗ ಪ್ರವೇಶಿಸಿದರು. ಶ್ರೀ ಮುರಳಿ ಮತ್ತು ರಮ್ಯ ಅಭಿನಯದ ಈ ಚಿತ್ರ ಹಿಟ್ ಆಗಿತ್ತು. ಇದಾದ ಮೇಲೆ ಹಲವು ವರ್ಷಗಳ ಕಾಲ ಭರತ್ ಯಾವುದೇ ಚಿತ್ರವನ್ನು ನಿರ್ದೇಶನ ಮಾಡಿರಲಿಲ್ಲ. ಮತ್ತೆ 2017 ರಲ್ಲಿ ಮನೋರಂಜನ್ ರವಿಚಂದ್ರನ್ ಹಾಗು ಶಾನ್ವಿ ಶ್ರೀವತ್ಸ ಅಭಿನಯದ ಸಾಹೇಬ ಚಿತ್ರದ ಮೂಲಕ ಭರತ್ ಮತ್ತೆ ನಿರ್ದೇಶನಕ್ಕೆ ಮರಳಿದ್ದರು. ಸಾಹೇಬ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಜೀವನಾಧಾರಕ್ಕೆ ಸಿನಿಮಾವನ್ನೇ ಭರತ್ ವೃತ್ತಿಯಾಗಿ ಪರಿಗಣಿಸಿದ್ದರು.

ಮೂಲತಃ ರಾಮನಗರದ ಚಿಕ್ಕಮುಳವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಅವರು ತಮ್ಮ ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಇಹಲೋಕ ತ್ಯಜಿಸಿರುವುದು ಖೇದಕರ ಸಂಗತಿಯಾಗಿದೆ.

ಗೀತರಚನೆಕಾರ ಕವಿರಾಜ್ ಗೆಳೆಯ ಹಾಗು ನಿರ್ದೇಶಕ ಭರತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಕವಿರಾಜ್ ಕಂಠಿ ಚಿತ್ರದ ಜಿನು ಜಿನುಗೋ ಹಾಗು ಬಾನಿಂದ ಬಾ ಚಂದಿರ ಹಾಡುಗಳು ತಮಗೆ ಆರಂಭದ ದಿನಗಳಲ್ಲಿ ಒಂದು ಹೆಸರು ತಂದು ಕೊಟ್ಟಿದ್ದವು. ಅಂಥ ಒಳ್ಳೆಯ ಚಿತ್ರವನ್ನು ಕೊಟ್ಟ ನಿರ್ದೇಶಕ ಇಂದು ತಮ್ಮನ್ನು ಅಗಲಿರುವುದು ದುಃಖಕರ ವಿಷಯ ಎಂದು ಕವಿರಾಜ್ ತಿಳಿಸಿದ್ದಾರೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 53 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 42 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ