ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್ ಕೊಟ್ಟ ಕೊರೋನಾ! ಕನ್ನಡದ ಪ್ರತಿಭಾವಂತ ನಿರ್ದೇಶಕ ಭರತ್ ಕೊರೋನಾಗೆ ಬಲಿ!

ಬೆಂಗಳೂರು: ಕಂಠಿ, ಸಾಹೇಬ ಚಿತ್ರಗಳನ್ನು ನಿರ್ದೇಶಿಸಿದ ಪ್ರತಿಭಾವಂತ ನಿರ್ದೇಶಕ ಭರತ್ ಹಠಾತ್ ಅಸುನೀಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನ ಪೀಡಿತರಾಗಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಭರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2004 ರಲ್ಲಿ ಕಂಠಿ ಚಿತ್ರದ ಮೂಲಕ ಭರತ್ ಚಿತ್ರರಂಗ ಪ್ರವೇಶಿಸಿದರು. ಶ್ರೀ ಮುರಳಿ ಮತ್ತು ರಮ್ಯ ಅಭಿನಯದ ಈ ಚಿತ್ರ ಹಿಟ್ ಆಗಿತ್ತು. ಇದಾದ ಮೇಲೆ ಹಲವು ವರ್ಷಗಳ ಕಾಲ ಭರತ್ ಯಾವುದೇ ಚಿತ್ರವನ್ನು ನಿರ್ದೇಶನ ಮಾಡಿರಲಿಲ್ಲ. ಮತ್ತೆ 2017 ರಲ್ಲಿ ಮನೋರಂಜನ್ ರವಿಚಂದ್ರನ್ ಹಾಗು ಶಾನ್ವಿ ಶ್ರೀವತ್ಸ ಅಭಿನಯದ ಸಾಹೇಬ ಚಿತ್ರದ ಮೂಲಕ ಭರತ್ ಮತ್ತೆ ನಿರ್ದೇಶನಕ್ಕೆ ಮರಳಿದ್ದರು. ಸಾಹೇಬ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಜೀವನಾಧಾರಕ್ಕೆ ಸಿನಿಮಾವನ್ನೇ ಭರತ್ ವೃತ್ತಿಯಾಗಿ ಪರಿಗಣಿಸಿದ್ದರು.

ಮೂಲತಃ ರಾಮನಗರದ ಚಿಕ್ಕಮುಳವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಅವರು ತಮ್ಮ ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಇಹಲೋಕ ತ್ಯಜಿಸಿರುವುದು ಖೇದಕರ ಸಂಗತಿಯಾಗಿದೆ.

ಗೀತರಚನೆಕಾರ ಕವಿರಾಜ್ ಗೆಳೆಯ ಹಾಗು ನಿರ್ದೇಶಕ ಭರತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಕವಿರಾಜ್ ಕಂಠಿ ಚಿತ್ರದ ಜಿನು ಜಿನುಗೋ ಹಾಗು ಬಾನಿಂದ ಬಾ ಚಂದಿರ ಹಾಡುಗಳು ತಮಗೆ ಆರಂಭದ ದಿನಗಳಲ್ಲಿ ಒಂದು ಹೆಸರು ತಂದು ಕೊಟ್ಟಿದ್ದವು. ಅಂಥ ಒಳ್ಳೆಯ ಚಿತ್ರವನ್ನು ಕೊಟ್ಟ ನಿರ್ದೇಶಕ ಇಂದು ತಮ್ಮನ್ನು ಅಗಲಿರುವುದು ದುಃಖಕರ ವಿಷಯ ಎಂದು ಕವಿರಾಜ್ ತಿಳಿಸಿದ್ದಾರೆ.

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ