ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್ ಕೊಟ್ಟ ಕೊರೋನಾ! ಕನ್ನಡದ ಪ್ರತಿಭಾವಂತ ನಿರ್ದೇಶಕ ಭರತ್ ಕೊರೋನಾಗೆ ಬಲಿ!

ಬೆಂಗಳೂರು: ಕಂಠಿ, ಸಾಹೇಬ ಚಿತ್ರಗಳನ್ನು ನಿರ್ದೇಶಿಸಿದ ಪ್ರತಿಭಾವಂತ ನಿರ್ದೇಶಕ ಭರತ್ ಹಠಾತ್ ಅಸುನೀಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನ ಪೀಡಿತರಾಗಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಭರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2004 ರಲ್ಲಿ ಕಂಠಿ ಚಿತ್ರದ ಮೂಲಕ ಭರತ್ ಚಿತ್ರರಂಗ ಪ್ರವೇಶಿಸಿದರು. ಶ್ರೀ ಮುರಳಿ ಮತ್ತು ರಮ್ಯ ಅಭಿನಯದ ಈ ಚಿತ್ರ ಹಿಟ್ ಆಗಿತ್ತು. ಇದಾದ ಮೇಲೆ ಹಲವು ವರ್ಷಗಳ ಕಾಲ ಭರತ್ ಯಾವುದೇ ಚಿತ್ರವನ್ನು ನಿರ್ದೇಶನ ಮಾಡಿರಲಿಲ್ಲ. ಮತ್ತೆ 2017 ರಲ್ಲಿ ಮನೋರಂಜನ್ ರವಿಚಂದ್ರನ್ ಹಾಗು ಶಾನ್ವಿ ಶ್ರೀವತ್ಸ ಅಭಿನಯದ ಸಾಹೇಬ ಚಿತ್ರದ ಮೂಲಕ ಭರತ್ ಮತ್ತೆ ನಿರ್ದೇಶನಕ್ಕೆ ಮರಳಿದ್ದರು. ಸಾಹೇಬ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಜೀವನಾಧಾರಕ್ಕೆ ಸಿನಿಮಾವನ್ನೇ ಭರತ್ ವೃತ್ತಿಯಾಗಿ ಪರಿಗಣಿಸಿದ್ದರು.

ಮೂಲತಃ ರಾಮನಗರದ ಚಿಕ್ಕಮುಳವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಅವರು ತಮ್ಮ ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಇಹಲೋಕ ತ್ಯಜಿಸಿರುವುದು ಖೇದಕರ ಸಂಗತಿಯಾಗಿದೆ.

ಗೀತರಚನೆಕಾರ ಕವಿರಾಜ್ ಗೆಳೆಯ ಹಾಗು ನಿರ್ದೇಶಕ ಭರತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಕವಿರಾಜ್ ಕಂಠಿ ಚಿತ್ರದ ಜಿನು ಜಿನುಗೋ ಹಾಗು ಬಾನಿಂದ ಬಾ ಚಂದಿರ ಹಾಡುಗಳು ತಮಗೆ ಆರಂಭದ ದಿನಗಳಲ್ಲಿ ಒಂದು ಹೆಸರು ತಂದು ಕೊಟ್ಟಿದ್ದವು. ಅಂಥ ಒಳ್ಳೆಯ ಚಿತ್ರವನ್ನು ಕೊಟ್ಟ ನಿರ್ದೇಶಕ ಇಂದು ತಮ್ಮನ್ನು ಅಗಲಿರುವುದು ದುಃಖಕರ ವಿಷಯ ಎಂದು ಕವಿರಾಜ್ ತಿಳಿಸಿದ್ದಾರೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 59 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 99 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 42 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 609 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ