ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್ ಕೊಟ್ಟ ಕೊರೋನಾ! ಕನ್ನಡದ ಪ್ರತಿಭಾವಂತ ನಿರ್ದೇಶಕ ಭರತ್ ಕೊರೋನಾಗೆ ಬಲಿ!

ಬೆಂಗಳೂರು: ಕಂಠಿ, ಸಾಹೇಬ ಚಿತ್ರಗಳನ್ನು ನಿರ್ದೇಶಿಸಿದ ಪ್ರತಿಭಾವಂತ ನಿರ್ದೇಶಕ ಭರತ್ ಹಠಾತ್ ಅಸುನೀಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನ ಪೀಡಿತರಾಗಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಭರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2004 ರಲ್ಲಿ ಕಂಠಿ ಚಿತ್ರದ ಮೂಲಕ ಭರತ್ ಚಿತ್ರರಂಗ ಪ್ರವೇಶಿಸಿದರು. ಶ್ರೀ ಮುರಳಿ ಮತ್ತು ರಮ್ಯ ಅಭಿನಯದ ಈ ಚಿತ್ರ ಹಿಟ್ ಆಗಿತ್ತು. ಇದಾದ ಮೇಲೆ ಹಲವು ವರ್ಷಗಳ ಕಾಲ ಭರತ್ ಯಾವುದೇ ಚಿತ್ರವನ್ನು ನಿರ್ದೇಶನ ಮಾಡಿರಲಿಲ್ಲ. ಮತ್ತೆ 2017 ರಲ್ಲಿ ಮನೋರಂಜನ್ ರವಿಚಂದ್ರನ್ ಹಾಗು ಶಾನ್ವಿ ಶ್ರೀವತ್ಸ ಅಭಿನಯದ ಸಾಹೇಬ ಚಿತ್ರದ ಮೂಲಕ ಭರತ್ ಮತ್ತೆ ನಿರ್ದೇಶನಕ್ಕೆ ಮರಳಿದ್ದರು. ಸಾಹೇಬ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಜೀವನಾಧಾರಕ್ಕೆ ಸಿನಿಮಾವನ್ನೇ ಭರತ್ ವೃತ್ತಿಯಾಗಿ ಪರಿಗಣಿಸಿದ್ದರು.

ಮೂಲತಃ ರಾಮನಗರದ ಚಿಕ್ಕಮುಳವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಅವರು ತಮ್ಮ ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಇಹಲೋಕ ತ್ಯಜಿಸಿರುವುದು ಖೇದಕರ ಸಂಗತಿಯಾಗಿದೆ.

ಗೀತರಚನೆಕಾರ ಕವಿರಾಜ್ ಗೆಳೆಯ ಹಾಗು ನಿರ್ದೇಶಕ ಭರತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಕವಿರಾಜ್ ಕಂಠಿ ಚಿತ್ರದ ಜಿನು ಜಿನುಗೋ ಹಾಗು ಬಾನಿಂದ ಬಾ ಚಂದಿರ ಹಾಡುಗಳು ತಮಗೆ ಆರಂಭದ ದಿನಗಳಲ್ಲಿ ಒಂದು ಹೆಸರು ತಂದು ಕೊಟ್ಟಿದ್ದವು. ಅಂಥ ಒಳ್ಳೆಯ ಚಿತ್ರವನ್ನು ಕೊಟ್ಟ ನಿರ್ದೇಶಕ ಇಂದು ತಮ್ಮನ್ನು ಅಗಲಿರುವುದು ದುಃಖಕರ ವಿಷಯ ಎಂದು ಕವಿರಾಜ್ ತಿಳಿಸಿದ್ದಾರೆ.

Spread the love
  • Related Posts

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ಸಿ ಸಹಿತ 17ಜಿಲ್ಲಾಧಿಕಾರಿಯವರನ್ನು ವರ್ಗಾಯಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಿ ಮಕ್ಕಳ ಅಚ್ಚುಮೆಚ್ಚಿನ ಜಿಲ್ಲಾಧಿಕಾರಿಯಾಗಿದ್ದ ಮುಲ್ಲೈಮುಹಿಲನ್ ರವರಿಗೆ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಸದ್ರಿಯವರ ತೆರವಾದ ಜಾಗಕ್ಕೆ ದರ್ಶನ HV ಯವರನ್ನು ವರ್ಗಾಯಿಸಿ…

    Spread the love

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ಬೆಳ್ತಂಗಡಿ: ಕಾಜೂರಿನಿಂದ ದಿಡುಪೆಗೆ ಹೋಗುವ ರಸ್ತೆಗೆ ಭಾರೀ ಮಳೆಗೆ ಹೆಮ್ಮರವೊಂದು ಉರುಳಿ ಬಿದ್ದು ಕೆಲ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.ಬಳಿಕ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು. ಪ್ರತಿದಿನ ಹತ್ತಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಮರ…

    Spread the love

    You Missed

    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ ವರ್ಗಾವಣೆ

    • By admin
    • June 17, 2025
    • 157 views
    ದ.ಕ ಜಿಲ್ಲಾಧಿಕಾರಿ ಸಹಿತ 17ಜಿಲ್ಲಾಧಿಕಾರಿಯವರ  ವರ್ಗಾವಣೆ

    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    • By admin
    • June 16, 2025
    • 75 views
    ಕಾಜೂರು-ದಿಡುಪೆ ರಸ್ತೆಯಲ್ಲಿ ಬಿದ್ದ ಮರ ಕೆಲಕಾಲ ಸಂಚಾರ ಅಸ್ತವ್ಯಸ್ತ

    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    • By admin
    • June 16, 2025
    • 266 views
    ದ.ಕ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಎಲ್ಲಾ  ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    • By admin
    • June 15, 2025
    • 184 views
    ಪೂರ್ಣಗೊಳ್ಳದ ಚರಂಡಿ ಕಾಮಗಾರಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಮಹಿಳೆಯರು ಚರಂಡಿಗೆ ಬಿದ್ದು ಗಾಯ

    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    • By admin
    • June 12, 2025
    • 107 views
    ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ವ್ಯಕ್ತಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು

    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ

    • By admin
    • June 12, 2025
    • 65 views
    ಕರಾವಳಿಯಾದ್ಯಂತ ಚುರುಕುಗೊಂಡ ಮುಂಗಾರು, ವಿಪರೀತ ಮಳೆ ಸಾಧ್ಯತೆ ಶಾಲೆಗೆ ರಜೆ ಘೋಷಣೆ