ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್ ಕೊಟ್ಟ ಕೊರೋನಾ! ಕನ್ನಡದ ಪ್ರತಿಭಾವಂತ ನಿರ್ದೇಶಕ ಭರತ್ ಕೊರೋನಾಗೆ ಬಲಿ!

ಬೆಂಗಳೂರು: ಕಂಠಿ, ಸಾಹೇಬ ಚಿತ್ರಗಳನ್ನು ನಿರ್ದೇಶಿಸಿದ ಪ್ರತಿಭಾವಂತ ನಿರ್ದೇಶಕ ಭರತ್ ಹಠಾತ್ ಅಸುನೀಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನ ಪೀಡಿತರಾಗಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಭರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2004 ರಲ್ಲಿ ಕಂಠಿ ಚಿತ್ರದ ಮೂಲಕ ಭರತ್ ಚಿತ್ರರಂಗ ಪ್ರವೇಶಿಸಿದರು. ಶ್ರೀ ಮುರಳಿ ಮತ್ತು ರಮ್ಯ ಅಭಿನಯದ ಈ ಚಿತ್ರ ಹಿಟ್ ಆಗಿತ್ತು. ಇದಾದ ಮೇಲೆ ಹಲವು ವರ್ಷಗಳ ಕಾಲ ಭರತ್ ಯಾವುದೇ ಚಿತ್ರವನ್ನು ನಿರ್ದೇಶನ ಮಾಡಿರಲಿಲ್ಲ. ಮತ್ತೆ 2017 ರಲ್ಲಿ ಮನೋರಂಜನ್ ರವಿಚಂದ್ರನ್ ಹಾಗು ಶಾನ್ವಿ ಶ್ರೀವತ್ಸ ಅಭಿನಯದ ಸಾಹೇಬ ಚಿತ್ರದ ಮೂಲಕ ಭರತ್ ಮತ್ತೆ ನಿರ್ದೇಶನಕ್ಕೆ ಮರಳಿದ್ದರು. ಸಾಹೇಬ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಜೀವನಾಧಾರಕ್ಕೆ ಸಿನಿಮಾವನ್ನೇ ಭರತ್ ವೃತ್ತಿಯಾಗಿ ಪರಿಗಣಿಸಿದ್ದರು.

ಮೂಲತಃ ರಾಮನಗರದ ಚಿಕ್ಕಮುಳವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಅವರು ತಮ್ಮ ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಇಹಲೋಕ ತ್ಯಜಿಸಿರುವುದು ಖೇದಕರ ಸಂಗತಿಯಾಗಿದೆ.

ಗೀತರಚನೆಕಾರ ಕವಿರಾಜ್ ಗೆಳೆಯ ಹಾಗು ನಿರ್ದೇಶಕ ಭರತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಕವಿರಾಜ್ ಕಂಠಿ ಚಿತ್ರದ ಜಿನು ಜಿನುಗೋ ಹಾಗು ಬಾನಿಂದ ಬಾ ಚಂದಿರ ಹಾಡುಗಳು ತಮಗೆ ಆರಂಭದ ದಿನಗಳಲ್ಲಿ ಒಂದು ಹೆಸರು ತಂದು ಕೊಟ್ಟಿದ್ದವು. ಅಂಥ ಒಳ್ಳೆಯ ಚಿತ್ರವನ್ನು ಕೊಟ್ಟ ನಿರ್ದೇಶಕ ಇಂದು ತಮ್ಮನ್ನು ಅಗಲಿರುವುದು ದುಃಖಕರ ವಿಷಯ ಎಂದು ಕವಿರಾಜ್ ತಿಳಿಸಿದ್ದಾರೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ