ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್ ಕೊಟ್ಟ ಕೊರೋನಾ! ಕನ್ನಡದ ಪ್ರತಿಭಾವಂತ ನಿರ್ದೇಶಕ ಭರತ್ ಕೊರೋನಾಗೆ ಬಲಿ!

ಬೆಂಗಳೂರು: ಕಂಠಿ, ಸಾಹೇಬ ಚಿತ್ರಗಳನ್ನು ನಿರ್ದೇಶಿಸಿದ ಪ್ರತಿಭಾವಂತ ನಿರ್ದೇಶಕ ಭರತ್ ಹಠಾತ್ ಅಸುನೀಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಕೊರೊನ ಪೀಡಿತರಾಗಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಭರತ್ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

2004 ರಲ್ಲಿ ಕಂಠಿ ಚಿತ್ರದ ಮೂಲಕ ಭರತ್ ಚಿತ್ರರಂಗ ಪ್ರವೇಶಿಸಿದರು. ಶ್ರೀ ಮುರಳಿ ಮತ್ತು ರಮ್ಯ ಅಭಿನಯದ ಈ ಚಿತ್ರ ಹಿಟ್ ಆಗಿತ್ತು. ಇದಾದ ಮೇಲೆ ಹಲವು ವರ್ಷಗಳ ಕಾಲ ಭರತ್ ಯಾವುದೇ ಚಿತ್ರವನ್ನು ನಿರ್ದೇಶನ ಮಾಡಿರಲಿಲ್ಲ. ಮತ್ತೆ 2017 ರಲ್ಲಿ ಮನೋರಂಜನ್ ರವಿಚಂದ್ರನ್ ಹಾಗು ಶಾನ್ವಿ ಶ್ರೀವತ್ಸ ಅಭಿನಯದ ಸಾಹೇಬ ಚಿತ್ರದ ಮೂಲಕ ಭರತ್ ಮತ್ತೆ ನಿರ್ದೇಶನಕ್ಕೆ ಮರಳಿದ್ದರು. ಸಾಹೇಬ ಚಿತ್ರ ಸಾಧಾರಣ ಯಶಸ್ಸು ಕಂಡಿತು. ಜೀವನಾಧಾರಕ್ಕೆ ಸಿನಿಮಾವನ್ನೇ ಭರತ್ ವೃತ್ತಿಯಾಗಿ ಪರಿಗಣಿಸಿದ್ದರು.

ಮೂಲತಃ ರಾಮನಗರದ ಚಿಕ್ಕಮುಳವಾಡಿ ಗ್ರಾಮದವರಾಗಿದ್ದ ಭರತ್ ಹಲವು ವರ್ಷಗಳಿಂದ ಬೆಂಗಳೂರಿನ ವಿಜಯನಗರದ ಅತ್ತಿಗುಪ್ಪೆಯಲ್ಲಿ ವಾಸವಿದ್ದರು. ಅವರು ತಮ್ಮ ಮುಂದಿನ ಚಿತ್ರದ ತಯಾರಿಯಲ್ಲಿರುವಾಗಲೇ ಇಹಲೋಕ ತ್ಯಜಿಸಿರುವುದು ಖೇದಕರ ಸಂಗತಿಯಾಗಿದೆ.

ಗೀತರಚನೆಕಾರ ಕವಿರಾಜ್ ಗೆಳೆಯ ಹಾಗು ನಿರ್ದೇಶಕ ಭರತ್ ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ. ಕವಿರಾಜ್ ಕಂಠಿ ಚಿತ್ರದ ಜಿನು ಜಿನುಗೋ ಹಾಗು ಬಾನಿಂದ ಬಾ ಚಂದಿರ ಹಾಡುಗಳು ತಮಗೆ ಆರಂಭದ ದಿನಗಳಲ್ಲಿ ಒಂದು ಹೆಸರು ತಂದು ಕೊಟ್ಟಿದ್ದವು. ಅಂಥ ಒಳ್ಳೆಯ ಚಿತ್ರವನ್ನು ಕೊಟ್ಟ ನಿರ್ದೇಶಕ ಇಂದು ತಮ್ಮನ್ನು ಅಗಲಿರುವುದು ದುಃಖಕರ ವಿಷಯ ಎಂದು ಕವಿರಾಜ್ ತಿಳಿಸಿದ್ದಾರೆ.

Spread the love
  • Related Posts

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶಗಳಲ್ಲಿ ಸೇತುವೆ ನಿರ್ಮಾಣ ಕಾಮಗಾರಿಗೆ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಬಂಡವಾಳ ವೆಚ್ಚ ಅನುದಾನದಡಿ ರೂ.5 ಕೋಟಿ ಅನುದಾನ ಮಂಜೂರಾಗಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.…

    Spread the love

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ಚಿಕ್ಕಮಗಳೂರು: ಅಪರೂಪದ ಎರಡು ತಲೆ ಹಾವನ್ನು (ಮಣ್ಣುಮುಕ್ಕ) ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಲು ಯತ್ನಿಸುತ್ತಿದ್ದ ಐವರನ್ನು ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು ಬಂಧಿಸಿದ್ದಾರೆ. ಚಿಕ್ಕಮಗಳೂರು ನಗರದ ವಾಜಪೇಯಿ ಲೇಔಟ್ ಬಳಿ ಖಚಿತ ಮಾಹಿತಿ ಮೇರೆಗೆ ಮೇ.12 ರಂದು ದಾಳಿ ನಡೆಸಿದ…

    Spread the love

    You Missed

    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    • By admin
    • May 12, 2026
    • 27 views
    ಬೆಳಾಲು ಗ್ರಾಮದ ಮೂಕುತ್ತಿ ಮಜಲು ಹಾಗೂ ನಾಗಕಲ್ಲು ಪ್ರದೇಶದಲ್ಲಿ ಸೇತುವೆ ನಿರ್ಮಾಣಕ್ಕೆ ರೂ.5 ಕೋಟಿ ಅನುದಾನ: ಶಾಸಕ ಹರೀಶ್ ಪೂಂಜ

    ರಡ್ಡ್ ಮಂಡೆಯ ಹಾವಿಗೆ ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    • By admin
    • May 12, 2026
    • 52 views
    ರಡ್ಡ್ ಮಂಡೆಯ ಹಾವಿಗೆ  ಲಕ್ಷಲಕ್ಷ ಬೆಲೆ ಕಟ್ಟಿ ಮಾರಾಟಕ್ಕೆ ಯತ್ನ, ಐವರನ್ನು ಬಂಧಿಸಿದ ಸಿಐಡಿ ಅರಣ್ಯ ಸಂಚಾರಿ ದಳದ ಅಧಿಕಾರಿಗಳು!!!!

    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    • By admin
    • May 12, 2026
    • 28 views
    ನೀಟಾಗಿ ನಡೆಯದ ನೀಟ್ ಪರೀಕ್ಷೆ!!! ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನಲೆಯಲ್ಲಿ ಪರೀಕ್ಷೆ ರದ್ದು, ಸಿಬಿಐ ತನಿಖೆಗೆ ಆದೇಶ

    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    • By admin
    • May 11, 2026
    • 37 views
    ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ ಬಸ್”

    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ ಮುಂದುವರಿಯಲು ಸುಪ್ರೀಂ ಸೂಚನೆ

    • By admin
    • May 11, 2026
    • 55 views
    ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕತ್ವದಲ್ಲಿ ಬಿಗ್ ಟ್ವಿಸ್ಟ್, ಟಿ.ಡಿ. ರಾಜೇಗೌಡ ಶಾಸಕರಾಗಿ  ಮುಂದುವರಿಯಲು ಸುಪ್ರೀಂ ಸೂಚನೆ

    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ

    • By admin
    • May 9, 2026
    • 32 views
    ಶೃಂಗೇರಿ ಮರುಮತ ಏಣಿಯ ಬಳಿಕ ಸುಪ್ರೀಂ ಮೊರೆ ಹೋದ ಮಾಜಿ ಶಾಸಕ ಟಿ.ಡಿ.ರಾಜೇಗೌಡ