ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ

ಬೆಳ್ತಂಗಡಿ: ಬೆಳ್ತಂಗಡಿ ಸುದ್ದಿ ಬಿಡುಗಡೆ ವಾರಪತ್ರಿಕೆಯ ಮುಖ್ಯ ವರದಿಗಾರ ಭುವನೇಂದ್ರ ಪುದುವೆಟ್ಟು (42ವ)ರವರು ನ.19ರಂದು ನಿಧನರಾಗಿದ್ದಾರೆ.

ಧರ್ಮಸ್ಥಳ ಗ್ರಾಮದ ಪುದುವೆಟ್ಟು ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರಿಗೆ ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ರಾಂಕಿಯಾಸಿಸ್ ಇರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರು ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನ.19ರಂದು ಕೊನೆಯುಸಿರೆಳೆದಿದ್ದಾರೆ.

ಕರಾವಳಿ ಅಲೆ, ವೆಬ್‌ದುನಿಯಾ, ಕಸ್ತೂರಿ ಚಾನೆಲ್, ವಿಜಯವಾಣಿ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸಿದ್ದ ಭುವನೇಂದ್ರ ಪುದುವೆಟ್ಟು ಅವರು ಕೆಲವು ಸಮಯಗಳಿಂದ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿದ್ದರು. 2024ರ ಸುದ್ದಿ ಬಿಡುಗಡೆ ದೀಪಾವಳಿ ವಿಶೇಷಾಂಕದ ಕಾರ್ಯ ನಿರ್ವಾಹಕ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಇಬ್ಬರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಅವರನ್ನು ಅಗಲಿದ್ದಾರೆ.

Spread the love
  • Related Posts

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಬೆಂಗಳೂರು: ಜ್ವರ, ಕೆಮ್ಮು, ನೆಗಡಿ ಹಾಗೂ ಇತರ ಅನಾರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ ಮಕ್ಕಳನ್ನು ಶಾಲೆಗಳಿಗೆ ಕಳುಹಿಸಬೇಡಿ ಎಂದು ಆರೋಗ್ಯ ಇಲಾಖೆ ಸೂಚಿಸಿದೆ. ಈ ಬಗ್ಗೆ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳು ವರದಿಯಾಗುತ್ತಿದ್ದು, ಸರ್ಕಾರಿ…

    Spread the love

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ, ಹಲವೆಡೆ ಜಲಾವೃತ ಇನ್ನೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಈ ಹಿನ್ನೆಲೆಯಲ್ಲಿ ಉಭಯ ಜಿಲ್ಲೆಗಳಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 146 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 285 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 192 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 295 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ