ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಆಗಿಯೂ ಹೊರಹೊಮ್ಮಿದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಸೂರ್ಯಸೇನೆ ಹಾಗೂ ಕ್ವಾಟ್ಲೆ ಕಿಲಾಡಿಗಳು ತಂಡಗಳು ಕ್ಯಾಪ್ಟನ್ಸಿಗಾಗಿ ಸತತ ಮೂರು ದಿನಗಳ ಕಾಲ ಟಾಸ್ಕ್‌ಗಳನ್ನು ಆಡಿದ್ದರು. ಸೂರ್ಯಸೇನೆ ತಂಡದಲ್ಲಿ ದಿವ್ಯಾ ಉರುಡುಗ ಹಾಗೂ ವೈಷ್ಣವಿ ಇದ್ದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಈ ಬಾರಿ ಕ್ಯಾಪ್ಟನ್ಸಿಗಾಗಿ ಬಿಗ್​ಬಾಸ್ ನೀಡಿದ ಟಾಸ್ಕ್‌ ವಿಶೇಷವಾಗಿತ್ತು. ಸೂರ್ಯ ಸೇನೆ ತಂಡದ ಆರು ಮಂದಿ ಸದಸ್ಯರಿಗೆ ಸೂಚಿಸಿದ ಸಮಯದೊಳಗೆ ಅತಿ ಹೆಚ್ಚು ಬಟ್ಟೆಗಳನ್ನು ತೊಡಬೇಕಾಗಿತ್ತು. ಅದರಲ್ಲಿ 81 ಬಟ್ಟೆಗಳನ್ನು ತೊಟ್ಟುಕೊಳ್ಳುವ ಮೂಲಕ ಎಲ್ಲರಿಗಿಂತ ಹೆಚ್ಚು ಅಂಕಗಳನ್ನು ದಿವ್ಯಾ ಉರುಡುಗ ಪಡೆದರು. ಈ ಮೂಲಕ ಈ ವಾರದ ಕ್ಯಾಪ್ಟನ್ಸ್ ಆಗಿ ಅವರು ಆಯ್ಕೆಯಾದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

‘ನನಗೆ ಮೊದಲಿನಿಂದಲೂ ಮೊದಲ ಮಹಿಳಾ ಕ್ಯಾಪ್ಟನ್ ಆಗಬೇಕು ಎಂದು ಆಸೆ ಇತ್ತು. ಕ್ಯಾಪ್ಟನ್ ಆಗೋಕೆ ಮನೆಯ ಎಲ್ಲ ಮಹಿಳಾ ಸ್ಪರ್ಧಿಗಳು ಕಾರಣ. ಪ್ರತಿಯೊಬ್ಬರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಮಹಿಳಾ ಸ್ಪರ್ಧಿಗಳೇ ನನಗೆ ಹೆಚ್ಚು ಸಹಕಾರ ನೀಡಿದರು’ ಎಂದು ಹೇಳಿ ಎಲ್ಲರಿಗೂ ಪ್ರತ್ಯೇಕವಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಅತ್ಯುತ್ತಮ ಹಾಗೂ ಕಳಪೆ ಪ್ರದರ್ಶನಕ್ಕಾಗಿ ವೋಟ್ ನಡೆಯಿತು. ಶುಭ ಪೂಂಜಾ ಅವರನ್ನು ಕಳಪೆ, ರಘು ಅವರನ್ನು ಅತ್ಯುತ್ತಮ ಎಂದು ಆಯ್ಕೆ ಮಾಡಲಾಯಿತು.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 37 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ