ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಆಗಿಯೂ ಹೊರಹೊಮ್ಮಿದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಸೂರ್ಯಸೇನೆ ಹಾಗೂ ಕ್ವಾಟ್ಲೆ ಕಿಲಾಡಿಗಳು ತಂಡಗಳು ಕ್ಯಾಪ್ಟನ್ಸಿಗಾಗಿ ಸತತ ಮೂರು ದಿನಗಳ ಕಾಲ ಟಾಸ್ಕ್‌ಗಳನ್ನು ಆಡಿದ್ದರು. ಸೂರ್ಯಸೇನೆ ತಂಡದಲ್ಲಿ ದಿವ್ಯಾ ಉರುಡುಗ ಹಾಗೂ ವೈಷ್ಣವಿ ಇದ್ದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಈ ಬಾರಿ ಕ್ಯಾಪ್ಟನ್ಸಿಗಾಗಿ ಬಿಗ್​ಬಾಸ್ ನೀಡಿದ ಟಾಸ್ಕ್‌ ವಿಶೇಷವಾಗಿತ್ತು. ಸೂರ್ಯ ಸೇನೆ ತಂಡದ ಆರು ಮಂದಿ ಸದಸ್ಯರಿಗೆ ಸೂಚಿಸಿದ ಸಮಯದೊಳಗೆ ಅತಿ ಹೆಚ್ಚು ಬಟ್ಟೆಗಳನ್ನು ತೊಡಬೇಕಾಗಿತ್ತು. ಅದರಲ್ಲಿ 81 ಬಟ್ಟೆಗಳನ್ನು ತೊಟ್ಟುಕೊಳ್ಳುವ ಮೂಲಕ ಎಲ್ಲರಿಗಿಂತ ಹೆಚ್ಚು ಅಂಕಗಳನ್ನು ದಿವ್ಯಾ ಉರುಡುಗ ಪಡೆದರು. ಈ ಮೂಲಕ ಈ ವಾರದ ಕ್ಯಾಪ್ಟನ್ಸ್ ಆಗಿ ಅವರು ಆಯ್ಕೆಯಾದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

‘ನನಗೆ ಮೊದಲಿನಿಂದಲೂ ಮೊದಲ ಮಹಿಳಾ ಕ್ಯಾಪ್ಟನ್ ಆಗಬೇಕು ಎಂದು ಆಸೆ ಇತ್ತು. ಕ್ಯಾಪ್ಟನ್ ಆಗೋಕೆ ಮನೆಯ ಎಲ್ಲ ಮಹಿಳಾ ಸ್ಪರ್ಧಿಗಳು ಕಾರಣ. ಪ್ರತಿಯೊಬ್ಬರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಮಹಿಳಾ ಸ್ಪರ್ಧಿಗಳೇ ನನಗೆ ಹೆಚ್ಚು ಸಹಕಾರ ನೀಡಿದರು’ ಎಂದು ಹೇಳಿ ಎಲ್ಲರಿಗೂ ಪ್ರತ್ಯೇಕವಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಅತ್ಯುತ್ತಮ ಹಾಗೂ ಕಳಪೆ ಪ್ರದರ್ಶನಕ್ಕಾಗಿ ವೋಟ್ ನಡೆಯಿತು. ಶುಭ ಪೂಂಜಾ ಅವರನ್ನು ಕಳಪೆ, ರಘು ಅವರನ್ನು ಅತ್ಯುತ್ತಮ ಎಂದು ಆಯ್ಕೆ ಮಾಡಲಾಯಿತು.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ