ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಆಗಿಯೂ ಹೊರಹೊಮ್ಮಿದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಸೂರ್ಯಸೇನೆ ಹಾಗೂ ಕ್ವಾಟ್ಲೆ ಕಿಲಾಡಿಗಳು ತಂಡಗಳು ಕ್ಯಾಪ್ಟನ್ಸಿಗಾಗಿ ಸತತ ಮೂರು ದಿನಗಳ ಕಾಲ ಟಾಸ್ಕ್‌ಗಳನ್ನು ಆಡಿದ್ದರು. ಸೂರ್ಯಸೇನೆ ತಂಡದಲ್ಲಿ ದಿವ್ಯಾ ಉರುಡುಗ ಹಾಗೂ ವೈಷ್ಣವಿ ಇದ್ದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಈ ಬಾರಿ ಕ್ಯಾಪ್ಟನ್ಸಿಗಾಗಿ ಬಿಗ್​ಬಾಸ್ ನೀಡಿದ ಟಾಸ್ಕ್‌ ವಿಶೇಷವಾಗಿತ್ತು. ಸೂರ್ಯ ಸೇನೆ ತಂಡದ ಆರು ಮಂದಿ ಸದಸ್ಯರಿಗೆ ಸೂಚಿಸಿದ ಸಮಯದೊಳಗೆ ಅತಿ ಹೆಚ್ಚು ಬಟ್ಟೆಗಳನ್ನು ತೊಡಬೇಕಾಗಿತ್ತು. ಅದರಲ್ಲಿ 81 ಬಟ್ಟೆಗಳನ್ನು ತೊಟ್ಟುಕೊಳ್ಳುವ ಮೂಲಕ ಎಲ್ಲರಿಗಿಂತ ಹೆಚ್ಚು ಅಂಕಗಳನ್ನು ದಿವ್ಯಾ ಉರುಡುಗ ಪಡೆದರು. ಈ ಮೂಲಕ ಈ ವಾರದ ಕ್ಯಾಪ್ಟನ್ಸ್ ಆಗಿ ಅವರು ಆಯ್ಕೆಯಾದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

‘ನನಗೆ ಮೊದಲಿನಿಂದಲೂ ಮೊದಲ ಮಹಿಳಾ ಕ್ಯಾಪ್ಟನ್ ಆಗಬೇಕು ಎಂದು ಆಸೆ ಇತ್ತು. ಕ್ಯಾಪ್ಟನ್ ಆಗೋಕೆ ಮನೆಯ ಎಲ್ಲ ಮಹಿಳಾ ಸ್ಪರ್ಧಿಗಳು ಕಾರಣ. ಪ್ರತಿಯೊಬ್ಬರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಮಹಿಳಾ ಸ್ಪರ್ಧಿಗಳೇ ನನಗೆ ಹೆಚ್ಚು ಸಹಕಾರ ನೀಡಿದರು’ ಎಂದು ಹೇಳಿ ಎಲ್ಲರಿಗೂ ಪ್ರತ್ಯೇಕವಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಅತ್ಯುತ್ತಮ ಹಾಗೂ ಕಳಪೆ ಪ್ರದರ್ಶನಕ್ಕಾಗಿ ವೋಟ್ ನಡೆಯಿತು. ಶುಭ ಪೂಂಜಾ ಅವರನ್ನು ಕಳಪೆ, ರಘು ಅವರನ್ನು ಅತ್ಯುತ್ತಮ ಎಂದು ಆಯ್ಕೆ ಮಾಡಲಾಯಿತು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು