ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಆಗಿಯೂ ಹೊರಹೊಮ್ಮಿದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಸೂರ್ಯಸೇನೆ ಹಾಗೂ ಕ್ವಾಟ್ಲೆ ಕಿಲಾಡಿಗಳು ತಂಡಗಳು ಕ್ಯಾಪ್ಟನ್ಸಿಗಾಗಿ ಸತತ ಮೂರು ದಿನಗಳ ಕಾಲ ಟಾಸ್ಕ್‌ಗಳನ್ನು ಆಡಿದ್ದರು. ಸೂರ್ಯಸೇನೆ ತಂಡದಲ್ಲಿ ದಿವ್ಯಾ ಉರುಡುಗ ಹಾಗೂ ವೈಷ್ಣವಿ ಇದ್ದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಈ ಬಾರಿ ಕ್ಯಾಪ್ಟನ್ಸಿಗಾಗಿ ಬಿಗ್​ಬಾಸ್ ನೀಡಿದ ಟಾಸ್ಕ್‌ ವಿಶೇಷವಾಗಿತ್ತು. ಸೂರ್ಯ ಸೇನೆ ತಂಡದ ಆರು ಮಂದಿ ಸದಸ್ಯರಿಗೆ ಸೂಚಿಸಿದ ಸಮಯದೊಳಗೆ ಅತಿ ಹೆಚ್ಚು ಬಟ್ಟೆಗಳನ್ನು ತೊಡಬೇಕಾಗಿತ್ತು. ಅದರಲ್ಲಿ 81 ಬಟ್ಟೆಗಳನ್ನು ತೊಟ್ಟುಕೊಳ್ಳುವ ಮೂಲಕ ಎಲ್ಲರಿಗಿಂತ ಹೆಚ್ಚು ಅಂಕಗಳನ್ನು ದಿವ್ಯಾ ಉರುಡುಗ ಪಡೆದರು. ಈ ಮೂಲಕ ಈ ವಾರದ ಕ್ಯಾಪ್ಟನ್ಸ್ ಆಗಿ ಅವರು ಆಯ್ಕೆಯಾದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

‘ನನಗೆ ಮೊದಲಿನಿಂದಲೂ ಮೊದಲ ಮಹಿಳಾ ಕ್ಯಾಪ್ಟನ್ ಆಗಬೇಕು ಎಂದು ಆಸೆ ಇತ್ತು. ಕ್ಯಾಪ್ಟನ್ ಆಗೋಕೆ ಮನೆಯ ಎಲ್ಲ ಮಹಿಳಾ ಸ್ಪರ್ಧಿಗಳು ಕಾರಣ. ಪ್ರತಿಯೊಬ್ಬರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಮಹಿಳಾ ಸ್ಪರ್ಧಿಗಳೇ ನನಗೆ ಹೆಚ್ಚು ಸಹಕಾರ ನೀಡಿದರು’ ಎಂದು ಹೇಳಿ ಎಲ್ಲರಿಗೂ ಪ್ರತ್ಯೇಕವಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಅತ್ಯುತ್ತಮ ಹಾಗೂ ಕಳಪೆ ಪ್ರದರ್ಶನಕ್ಕಾಗಿ ವೋಟ್ ನಡೆಯಿತು. ಶುಭ ಪೂಂಜಾ ಅವರನ್ನು ಕಳಪೆ, ರಘು ಅವರನ್ನು ಅತ್ಯುತ್ತಮ ಎಂದು ಆಯ್ಕೆ ಮಾಡಲಾಯಿತು.

Spread the love
  • Related Posts

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಮಂಗಳೂರು: ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆಯು ಬಂಟ್ವಾಳದ ನ್ಯಾಯಾಲಯದ ಆವರಣದಲ್ಲಿ ಇಂದು ಉದ್ಘಾಟನೆಗೊಂಡಿದ್ದು, ಬಂಟ್ವಾಳದ ನೂತನ ಶಾಖೆಯ ಕಚೇರಿಯನ್ನು ಮಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಎಸ್ ಪಿ ಚಂಗಪ್ಪ ರವರು ಉದ್ಘಾಟಿಸಿದರು.…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬುಧವಾರ ಸಂಜೆ ಗಂಟೆ 6.40ರ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದಲ್ಲಿ 106 ಜೊತೆ ವಧೂ-ವರರು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ ಮಾಡಿದರು. ಬುಧವಾರ ಬೆಳಿಗ್ಗೆ ಧರ್ಮಾಧಿಕಾರಿ…

    Spread the love

    You Missed

    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    • By admin
    • April 30, 2026
    • 25 views
    ನ್ಯಾಯವಾದಿಗಳ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ಬಂಟ್ವಾಳದ ನೂತನ ಶಾಖೆ ಉದ್ಘಾಟನೆ

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    • By admin
    • April 29, 2026
    • 23 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ವೈಭವ,106ಜೋಡಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಪಾದಾರ್ಪಣೆ

    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ ದುರ್ಮರಣ

    • By admin
    • April 29, 2026
    • 46 views
    ಬೆಂಗಳೂರಿನಲ್ಲಿ ಘನಘೋರ ದುರಂತ ಬೌರಿಂಗ್ ಆಸ್ಪತ್ರೆಯ ಕೌಂಪೌಂಡು ಕುಸಿದು ಮೂವರು ಮಕ್ಕಳ ಸಹಿತ 8ಮಂದಿಯ   ದುರ್ಮರಣ

    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    • By admin
    • April 29, 2026
    • 96 views
    ಕುಂಟುತ್ತಿರುವ ಕಾಮಗಾರಿಯಿಂದ ಬಿಸಿಲ ಬೇಗೆಗೆ ಬೆಂಡಾದ ಜನ: ಟ್ರಾಫಿಕ್ ಜಾಮ್ ನಿಂದ ಹೈರಾಣಾದ ಜನ

    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    • By admin
    • April 29, 2026
    • 45 views
    ಬಿರು ಬಿಸಿಲಿನಲ್ಲಿ ಪ್ರಾಣಿ–ಪಕ್ಷಿಗಳಿಗೆ ನೀರುಣಿಸುವ ಮಹತ್ವದ ಕಾರ್ಯಕ್ಕೆ ಮುಂದಾಗೋಣ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ

    • By admin
    • April 28, 2026
    • 84 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಬೆಳ್ತಂಗಡಿ ಇದರ ವತಿಯಿಂದ ಕು.ಪ್ರಾಪ್ತಿ ಎಂ ಗೌಡರಿಗೆ ಗೌರವ ಸನ್ಮಾನ