ಬಿಗ್​​ಬಾಸ್​ ಸೀಸನ್ 8ರ ದೊಡ್ಮನೇಲಿ ಹೊಸ ದಾಖಲೆ ಬರೆದ ದಿವ್ಯಾ ಉರುಡುಗ

ಬಿಗ್​ಬಾಸ್​ ಸೀಸನ್​ 8ರಲ್ಲಿ ಅತಿ ಹೆಚ್ಚು ಟಾಕ್​ ಆಗುತ್ತಿರುವುದು ದಿವ್ಯಾ ಉರುಡುಗ ಬಗ್ಗೆ. ಯಾವುದೇ ವಿಚಾರದಲ್ಲಾದರೂ ಬಿಗ್​ಬಾಸ್​​ ಮನೆಯೊಳಗೆ ಸದಾ ಸುದ್ದಿಯಲ್ಲಿರುವ ಇವರು ಈ ವಾರ ಕ್ಯಾಪ್ಟನ್ಸಿಗಾಗಿ ಸಖತ್ ಆಗಿ ಟಾಸ್ಕ್​​ ನಿರ್ವಹಣೆ ಮಾಡಿದ್ದಾರೆ. ಈ ಮೂಲಕ ಪ್ರಸಕ್ತ ಆವೃತ್ತಿಯ ಮೊದಲ ಮಹಿಳಾ ಕ್ಯಾಪ್ಟನ್​ ಆಗಿಯೂ ಹೊರಹೊಮ್ಮಿದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಬಿಗ್​ಬಾಸ್​ ಎರಡನೇ ಇನ್ನಿಂಗ್ಸ್​ ಎರಡನೇ ವಾರವನ್ನು ಪೂರ್ಣಗೊಳಿಸಿದ್ದು, ಮೂರನೇ ವಾರಕ್ಕೆ ಕಾಲಿಟ್ಟಿದೆ. ದಿನದಿಂದ ದಿನಕ್ಕೆ ಕಾರ್ಯಕ್ರಮ ಕುತೂಹಲ ಕೆರಳಿಸುತ್ತಾ ಸಾಗಿದೆ. ಸೂರ್ಯಸೇನೆ ಹಾಗೂ ಕ್ವಾಟ್ಲೆ ಕಿಲಾಡಿಗಳು ತಂಡಗಳು ಕ್ಯಾಪ್ಟನ್ಸಿಗಾಗಿ ಸತತ ಮೂರು ದಿನಗಳ ಕಾಲ ಟಾಸ್ಕ್‌ಗಳನ್ನು ಆಡಿದ್ದರು. ಸೂರ್ಯಸೇನೆ ತಂಡದಲ್ಲಿ ದಿವ್ಯಾ ಉರುಡುಗ ಹಾಗೂ ವೈಷ್ಣವಿ ಇದ್ದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

ಈ ಬಾರಿ ಕ್ಯಾಪ್ಟನ್ಸಿಗಾಗಿ ಬಿಗ್​ಬಾಸ್ ನೀಡಿದ ಟಾಸ್ಕ್‌ ವಿಶೇಷವಾಗಿತ್ತು. ಸೂರ್ಯ ಸೇನೆ ತಂಡದ ಆರು ಮಂದಿ ಸದಸ್ಯರಿಗೆ ಸೂಚಿಸಿದ ಸಮಯದೊಳಗೆ ಅತಿ ಹೆಚ್ಚು ಬಟ್ಟೆಗಳನ್ನು ತೊಡಬೇಕಾಗಿತ್ತು. ಅದರಲ್ಲಿ 81 ಬಟ್ಟೆಗಳನ್ನು ತೊಟ್ಟುಕೊಳ್ಳುವ ಮೂಲಕ ಎಲ್ಲರಿಗಿಂತ ಹೆಚ್ಚು ಅಂಕಗಳನ್ನು ದಿವ್ಯಾ ಉರುಡುಗ ಪಡೆದರು. ಈ ಮೂಲಕ ಈ ವಾರದ ಕ್ಯಾಪ್ಟನ್ಸ್ ಆಗಿ ಅವರು ಆಯ್ಕೆಯಾದರು.

Bigg boss kannada divya uruduga creates history in kannada bigg boss-8
ದಿವ್ಯಾ ಉರುಡುಗ

‘ನನಗೆ ಮೊದಲಿನಿಂದಲೂ ಮೊದಲ ಮಹಿಳಾ ಕ್ಯಾಪ್ಟನ್ ಆಗಬೇಕು ಎಂದು ಆಸೆ ಇತ್ತು. ಕ್ಯಾಪ್ಟನ್ ಆಗೋಕೆ ಮನೆಯ ಎಲ್ಲ ಮಹಿಳಾ ಸ್ಪರ್ಧಿಗಳು ಕಾರಣ. ಪ್ರತಿಯೊಬ್ಬರಿಗೂ ಕ್ಯಾಪ್ಟನ್ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಮಹಿಳಾ ಸ್ಪರ್ಧಿಗಳೇ ನನಗೆ ಹೆಚ್ಚು ಸಹಕಾರ ನೀಡಿದರು’ ಎಂದು ಹೇಳಿ ಎಲ್ಲರಿಗೂ ಪ್ರತ್ಯೇಕವಾಗಿ ಧನ್ಯವಾದ ಅರ್ಪಿಸಿದರು.

ಬಳಿಕ ಅತ್ಯುತ್ತಮ ಹಾಗೂ ಕಳಪೆ ಪ್ರದರ್ಶನಕ್ಕಾಗಿ ವೋಟ್ ನಡೆಯಿತು. ಶುಭ ಪೂಂಜಾ ಅವರನ್ನು ಕಳಪೆ, ರಘು ಅವರನ್ನು ಅತ್ಯುತ್ತಮ ಎಂದು ಆಯ್ಕೆ ಮಾಡಲಾಯಿತು.

Spread the love
  • Related Posts

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲು ಪ್ರದೇಶದಲ್ಲಿ ಬೆಳ್ತಂಗಡಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ (MDMA), ಕಾರು, ಆಟೋ ರಿಕ್ಷಾ ಹಾಗೂ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ…

    Spread the love

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    “ಜೀವ ಉಳಿಸಲು ನಿಮ್ಮ ನೆರವು ಅಗತ್ಯ“ ಬೆಳ್ತಂಗಡಿ, ಜು.30: ಬೆಳ್ತಂಗಡಿ ತಾಲೂಕಿನ ಬೆದ್ರಬೆಟ್ಟು ನಿವಾಸಿ ವಸಂತ ಗೌಡರವರು 21/07/2026ರಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಪಡಂಗಡಿ ಸಮೀಪ ಹಾಲು ಹಿಡಿದು ಕೊಂಡು ಹೋಗುತ್ತಿದ್ದ ವೇಳೆ ದಾರಿ ಮಧ್ಯೆ ಜಾರಿ ಬಿದ್ದು ತಲೆಗೆ…

    Spread the love

    You Missed

    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    • By admin
    • July 30, 2026
    • 4 views
    ಬೆಳ್ತಂಗಡಿಯಲ್ಲಿ ಭಾರಿ ಮಾದಕವಸ್ತು ಬೇಟೆ: ₹15.41 ಲಕ್ಷ ಮೌಲ್ಯದ ಗಾಂಜಾ, ಎಂಡಿಎಂಎ ಜಪ್ತಿ – ದುಬೈಗೆ ತೆರಳಬೇಕಿದ್ದ ಯುವಕ ಜೈಲುಪಾಲು

    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ ನೆರವಿಗಾಗಿ ಮನವಿ

    • By admin
    • July 30, 2026
    • 11 views
    ಐಸಿಯುನಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿರುವ ವಸಂತ ಗೌಡರ ತುರ್ತು ಚಿಕಿತ್ಸೆಗೆ  ನೆರವಿಗಾಗಿ ಮನವಿ

    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    • By admin
    • July 30, 2026
    • 9 views
    ಬೆಳ್ತಂಗಡಿ ಕ್ಷೇತ್ರದ ಧಾರ್ಮಿಕ-ಐತಿಹಾಸಿಕ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಉಪಮುಖ್ಯಮಂತ್ರಿಗೆ ಶಾಸಕ ಹರೀಶ್ ಪೂಂಜಾರವರಿಂದ ಮನವಿ

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 10 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 10 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 13 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!