ಮನೆ ಸಮಸ್ಯೆ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಮಾತಿನಲ್ಲೇ ಡಿಚ್ಚಿ ಹೊಡೆದ ಆರ್ಯವರ್ಧನ್​ ಗುರೂಜಿ!

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​’ ಬಗ್ಗೆ ವೀಕ್ಷಕರಲ್ಲಿ ಮಿಶ್ರಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್​ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದಗೋಳು ತೋಡಿಕೊಂಡು ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಬಾರಿ ‘ಬಿಗ್​ ಬಾಸ್​ ಒಟಿಟಿ ಕನ್ನಡ’ (Bigg Boss OTT Kannada) ಕೂಡ ಅಂಥ ಕ್ಷಣಗಳಿಗೆ ಸಾಕ್ಷಿ ಆಗಿದೆ.

16 ಸ್ಪರ್ಧಿಗಳ ಪೈಕಿ ಬಹುತೇಕರು ತಮ್ಮ ಜೀವನದ ಕಷ್ಟದ ಕ್ಷಣಗಳನ್ನು ತೆರೆದಿಟ್ಟಿದ್ದಾರೆ. ಸಾನ್ಯಾ ಅಯ್ಯರ್​, ಉದಯ್​ ಸೂರ್ಯ, ಸೋಮಣ್ಣ ಮಾಚಿಮಾಡ, ಚೈತ್ರಾ ಹಳ್ಳಿಕೇರಿ, ಲೋಕೇಶ್​ (Lokesh) ಮುಂತಾದವರು ನೋವು ತೋಡಿಕೊಂಡಿದ್ದಾರೆ. ಇದನ್ನು ಆರ್ಯವರ್ಧನ್​ ಗುರೂಜಿ (Aryavardhan Guruji) ವಿರೋಧಿಸಿದ್ದಾರೆ. ಅದರಿಂದಾಗಿ ದೊಡ್ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ.

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಫೇಮಸ್​ ಆಗಿದ್ದ ಲೋಕೇಶ್​ ಅವರು ಈಗ ‘ಬಿಗ್​​ ಬಾಸ್​ ಒಟಿಟಿ’ ಶೋಗೆ ಬಂದಿದ್ದಾರೆ. ಅವರ ಬಾಲ್ಯ ತುಂಬ ಕಷ್ಟಕರವಾಗಿತ್ತು. ಮನೆ ಬಿಟ್ಟು ಓಡಿ ಹೋಗಿದ್ದ ಅವರು ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಭಿಕ್ಷೆ ಸಿಗಲಿ ಎಂದು ಮೂಕನಂತೆ ನಟಿಸುತ್ತಿದ್ದರು. ನಂತರ ನಿರಾಶ್ರಿತ ಮಕ್ಕಳ ಕೇಂದ್ರ ಸೇರಿದ ಬಳಿಕ ಬದುಕು ಕಂಡುಕೊಂಡರು.

ಈ ಎಲ್ಲ ಸಂಗತಿಗಳನ್ನು ಲೋಕೇಶ್​ ಅವರು ಬಿಗ್​ ಬಾಸ್​ ಮನೆಯೊಳಗೆ ಹೇಳಲು ಆರಂಭಿಸಿದರು. ‘ಇದನ್ನೆಲ್ಲ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಆರ್ಯವರ್ಧನ್​ ಗುರೂಜಿ ಮಾತಿನಲ್ಲೇ ಡಿಚ್ಚಿ ಕೊಟ್ಟರು. ಈ ಮಾತು ಲೋಕೇಶ್​ಗೆ ಸರಿ ಎನಿಸಲಿಲ್ಲ. ‘ನಿಮ್ಮ ಪ್ರಕಾರ ಇಲ್ಲಿ ನಾವು ಹೇಳುವುದೆಲ್ಲ ವೋಟ್​ ಪಡೆಯೋದಕ್ಕೋಸ್ಕರನಾ?’ ಎಂದು ಮರುಪ್ರಶ್ನೆ ಹಾಕಿದರು.

ಬಿಗ್​ ಬಾಸ್​ ಮನೆಯಲ್ಲಿ ಈ ರೀತಿ ಸಂಗತಿಗಳು ಆಗಾಗ ಎದುರಾಗುತ್ತವೆ. ಎಮೋಷನ್​ಗಳನ್ನು ಇಟ್ಟುಕೊಂಡು ಆಟ ಆಡಲಾಗುತ್ತದೆ. ಈ ಕಾರಣದಿಂದ ಒಂದು ವರ್ಗದ ವೀಕ್ಷಕರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೂ ಪ್ರತಿ ಸೀಸನ್​ನಲ್ಲಿ ಇದು ಮುಂದುವರಿಯುತ್ತಲೇ ಇದೆ. ಈ ಬಾರಿ ಶೋ ಆರಂಭದಲ್ಲೇ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಮೊದಲ ವಾರ 8 ಮಂದಿ ನಾಮಿನೇಟ್​:

ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು. ಇನ್ನುಳಿದ ಸ್ಪರ್ಧಿಗಳಾದ ಚೈತ್ರಾ ಹಳ್ಳಿಕೇರಿ, ಅರ್ಜುನ್​ ರಮೇಶ್​, ಲೋಕೇಶ್​, ಸೋಮಣ್ಣ ಮಾಚಿಮಾಡ, ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್, ಉದಯ್​ ಸೂರ್ಯ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ. ನಾಮಿನೇಟ್​ ಆಗಿರುವವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಚ್ಚು ಶ್ರಮ ಹಾಕಬೇಕು. ಹಾಗಾಗಿ ಎಮೋಷನಲ್​ ಕಾರ್ಡ್​ ಬಳಸುತ್ತಿದ್ದಾರೆ ಎಂಬ ಅಭಿಪ್ರಾಯ ವೀಕ್ಷಕರ ವಲಯದಿಂದ ಕೇಳಿಬರುತ್ತಿದೆ.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 60 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 101 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 43 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 610 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 150 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 63 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ