ಮನೆ ಸಮಸ್ಯೆ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಮಾತಿನಲ್ಲೇ ಡಿಚ್ಚಿ ಹೊಡೆದ ಆರ್ಯವರ್ಧನ್​ ಗುರೂಜಿ!

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​’ ಬಗ್ಗೆ ವೀಕ್ಷಕರಲ್ಲಿ ಮಿಶ್ರಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್​ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದಗೋಳು ತೋಡಿಕೊಂಡು ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಬಾರಿ ‘ಬಿಗ್​ ಬಾಸ್​ ಒಟಿಟಿ ಕನ್ನಡ’ (Bigg Boss OTT Kannada) ಕೂಡ ಅಂಥ ಕ್ಷಣಗಳಿಗೆ ಸಾಕ್ಷಿ ಆಗಿದೆ.

16 ಸ್ಪರ್ಧಿಗಳ ಪೈಕಿ ಬಹುತೇಕರು ತಮ್ಮ ಜೀವನದ ಕಷ್ಟದ ಕ್ಷಣಗಳನ್ನು ತೆರೆದಿಟ್ಟಿದ್ದಾರೆ. ಸಾನ್ಯಾ ಅಯ್ಯರ್​, ಉದಯ್​ ಸೂರ್ಯ, ಸೋಮಣ್ಣ ಮಾಚಿಮಾಡ, ಚೈತ್ರಾ ಹಳ್ಳಿಕೇರಿ, ಲೋಕೇಶ್​ (Lokesh) ಮುಂತಾದವರು ನೋವು ತೋಡಿಕೊಂಡಿದ್ದಾರೆ. ಇದನ್ನು ಆರ್ಯವರ್ಧನ್​ ಗುರೂಜಿ (Aryavardhan Guruji) ವಿರೋಧಿಸಿದ್ದಾರೆ. ಅದರಿಂದಾಗಿ ದೊಡ್ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ.

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಫೇಮಸ್​ ಆಗಿದ್ದ ಲೋಕೇಶ್​ ಅವರು ಈಗ ‘ಬಿಗ್​​ ಬಾಸ್​ ಒಟಿಟಿ’ ಶೋಗೆ ಬಂದಿದ್ದಾರೆ. ಅವರ ಬಾಲ್ಯ ತುಂಬ ಕಷ್ಟಕರವಾಗಿತ್ತು. ಮನೆ ಬಿಟ್ಟು ಓಡಿ ಹೋಗಿದ್ದ ಅವರು ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಭಿಕ್ಷೆ ಸಿಗಲಿ ಎಂದು ಮೂಕನಂತೆ ನಟಿಸುತ್ತಿದ್ದರು. ನಂತರ ನಿರಾಶ್ರಿತ ಮಕ್ಕಳ ಕೇಂದ್ರ ಸೇರಿದ ಬಳಿಕ ಬದುಕು ಕಂಡುಕೊಂಡರು.

ಈ ಎಲ್ಲ ಸಂಗತಿಗಳನ್ನು ಲೋಕೇಶ್​ ಅವರು ಬಿಗ್​ ಬಾಸ್​ ಮನೆಯೊಳಗೆ ಹೇಳಲು ಆರಂಭಿಸಿದರು. ‘ಇದನ್ನೆಲ್ಲ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಆರ್ಯವರ್ಧನ್​ ಗುರೂಜಿ ಮಾತಿನಲ್ಲೇ ಡಿಚ್ಚಿ ಕೊಟ್ಟರು. ಈ ಮಾತು ಲೋಕೇಶ್​ಗೆ ಸರಿ ಎನಿಸಲಿಲ್ಲ. ‘ನಿಮ್ಮ ಪ್ರಕಾರ ಇಲ್ಲಿ ನಾವು ಹೇಳುವುದೆಲ್ಲ ವೋಟ್​ ಪಡೆಯೋದಕ್ಕೋಸ್ಕರನಾ?’ ಎಂದು ಮರುಪ್ರಶ್ನೆ ಹಾಕಿದರು.

ಬಿಗ್​ ಬಾಸ್​ ಮನೆಯಲ್ಲಿ ಈ ರೀತಿ ಸಂಗತಿಗಳು ಆಗಾಗ ಎದುರಾಗುತ್ತವೆ. ಎಮೋಷನ್​ಗಳನ್ನು ಇಟ್ಟುಕೊಂಡು ಆಟ ಆಡಲಾಗುತ್ತದೆ. ಈ ಕಾರಣದಿಂದ ಒಂದು ವರ್ಗದ ವೀಕ್ಷಕರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೂ ಪ್ರತಿ ಸೀಸನ್​ನಲ್ಲಿ ಇದು ಮುಂದುವರಿಯುತ್ತಲೇ ಇದೆ. ಈ ಬಾರಿ ಶೋ ಆರಂಭದಲ್ಲೇ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಮೊದಲ ವಾರ 8 ಮಂದಿ ನಾಮಿನೇಟ್​:

ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು. ಇನ್ನುಳಿದ ಸ್ಪರ್ಧಿಗಳಾದ ಚೈತ್ರಾ ಹಳ್ಳಿಕೇರಿ, ಅರ್ಜುನ್​ ರಮೇಶ್​, ಲೋಕೇಶ್​, ಸೋಮಣ್ಣ ಮಾಚಿಮಾಡ, ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್, ಉದಯ್​ ಸೂರ್ಯ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ. ನಾಮಿನೇಟ್​ ಆಗಿರುವವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಚ್ಚು ಶ್ರಮ ಹಾಕಬೇಕು. ಹಾಗಾಗಿ ಎಮೋಷನಲ್​ ಕಾರ್ಡ್​ ಬಳಸುತ್ತಿದ್ದಾರೆ ಎಂಬ ಅಭಿಪ್ರಾಯ ವೀಕ್ಷಕರ ವಲಯದಿಂದ ಕೇಳಿಬರುತ್ತಿದೆ.

Spread the love
  • Related Posts

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಬೆಳ್ತಂಗಡಿ: ಜಿಲ್ಲಾ ನ್ಯಾಯಾಂಗ, ದ.ಕ ಲೋಕೋಪಯೋಗಿ ಇಲಾಖೆ ಹಾಗೂ ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಜನತೆ ಮತ್ತು ವಕೀಲರ ಸಂಘದ ಬಹುದಿನಗಳ ಬೇಡಿಕೆಯಾಗಿದ್ದ ನೂತನ ನ್ಯಾಯಾಲಯ ಸಂಕೀರ್ಣಕ್ಕೆ ಕರ್ನಾಟಕ ಸರಕಾರಕ್ಕೆ ಸಲ್ಲಿಸಲಾದ ಸುಮಾರು 23 ಕೋಟಿ…

    Spread the love

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಬೆಳ್ತಂಗಡಿ, ಜೂನ್ 13: ಸ್ಥಳೀಯ ಪತ್ರಿಕೋದ್ಯಮವನ್ನು ಮತ್ತಷ್ಟು ಬಲಪಡಿಸುವ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಒತ್ತು ನೀಡುವ ಉದ್ದೇಶದಿಂದ ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನ ಬೆಳ್ತಂಗಡಿ ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು. ಸಂಘದ ಮುಂದಿನ ಅವಧಿಗೆ…

    Spread the love

    You Missed

    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    • By admin
    • June 14, 2026
    • 20 views
    ಬೆಳ್ತಂಗಡಿ ನೂತನ ನ್ಯಾಯಾಲಯ ಸಂಕೀರ್ಣದ ಶಂಕುಸ್ಥಾಪನೆ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    • By admin
    • June 13, 2026
    • 72 views
    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಬೆಳ್ತಂಗಡಿ ತಾಲೂಕು ಘಟಕ ರಚನೆ: ನಿಶಾನ್ ಬಂಗೇರ ನಾರ್ಯ ಅಧ್ಯಕ್ಷರಾಗಿ ಆಯ್ಕೆ

    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    • By admin
    • June 13, 2026
    • 25 views
    ಓರಿಯಂಟೇಶನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಯಶಸ್ಸಿನ ಮಂತ್ರ, ಶ್ರದ್ಧೆ ಮತ್ತು ಪರಿಶ್ರಮದಿಂದ ಉಜ್ವಲ ಭವಿಷ್ಯ ಸಾಧ್ಯ: ಸ್ಮಿತೇಶ್ ಬಾರ್ಯ

    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    • By admin
    • June 13, 2026
    • 62 views
    ಸ್ಪರ್ಧಾತ್ಮಕ ಪರೀಕ್ಷೆಗಳತ್ತ ವಿದ್ಯಾರ್ಥಿಗಳನ್ನು ಪ್ರೇರೇಪಿಸುವ ಒಲಿಂಪಿಯಾಡ್ ಕಾರ್ಯಕ್ರಮ,ಸಾಧಕ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    • By admin
    • June 13, 2026
    • 21 views
    ಬೆಳ್ತಂಗಡಿ ನರಸಿಂಹಗಡ (ಗಡಾಯಿಕಲ್ಲು) ಚಾರಣಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಿದ ಅರಣ್ಯ ಇಲಾಖೆ!!!

    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ

    • By admin
    • June 13, 2026
    • 191 views
    ಲ್ಯಾಂಡಿಂಗ್ ವೇಳೆ ದುರಂತ: ಬೆಂಕಿಗಾಹುತಿಯಾದ ವಾಯುಪಡೆಯ AN-32 ವಿಮಾನ