ಮನೆ ಸಮಸ್ಯೆ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಮಾತಿನಲ್ಲೇ ಡಿಚ್ಚಿ ಹೊಡೆದ ಆರ್ಯವರ್ಧನ್​ ಗುರೂಜಿ!

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್​ ಬಾಸ್​’ ಬಗ್ಗೆ ವೀಕ್ಷಕರಲ್ಲಿ ಮಿಶ್ರಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್​ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದಗೋಳು ತೋಡಿಕೊಂಡು ಜನರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಈ ಬಾರಿ ‘ಬಿಗ್​ ಬಾಸ್​ ಒಟಿಟಿ ಕನ್ನಡ’ (Bigg Boss OTT Kannada) ಕೂಡ ಅಂಥ ಕ್ಷಣಗಳಿಗೆ ಸಾಕ್ಷಿ ಆಗಿದೆ.

16 ಸ್ಪರ್ಧಿಗಳ ಪೈಕಿ ಬಹುತೇಕರು ತಮ್ಮ ಜೀವನದ ಕಷ್ಟದ ಕ್ಷಣಗಳನ್ನು ತೆರೆದಿಟ್ಟಿದ್ದಾರೆ. ಸಾನ್ಯಾ ಅಯ್ಯರ್​, ಉದಯ್​ ಸೂರ್ಯ, ಸೋಮಣ್ಣ ಮಾಚಿಮಾಡ, ಚೈತ್ರಾ ಹಳ್ಳಿಕೇರಿ, ಲೋಕೇಶ್​ (Lokesh) ಮುಂತಾದವರು ನೋವು ತೋಡಿಕೊಂಡಿದ್ದಾರೆ. ಇದನ್ನು ಆರ್ಯವರ್ಧನ್​ ಗುರೂಜಿ (Aryavardhan Guruji) ವಿರೋಧಿಸಿದ್ದಾರೆ. ಅದರಿಂದಾಗಿ ದೊಡ್ಮನೆಯಲ್ಲಿ ಮಾತಿನ ಚಕಮಕಿ ನಡೆದಿದೆ.

‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದ ಮೂಲಕ ಫೇಮಸ್​ ಆಗಿದ್ದ ಲೋಕೇಶ್​ ಅವರು ಈಗ ‘ಬಿಗ್​​ ಬಾಸ್​ ಒಟಿಟಿ’ ಶೋಗೆ ಬಂದಿದ್ದಾರೆ. ಅವರ ಬಾಲ್ಯ ತುಂಬ ಕಷ್ಟಕರವಾಗಿತ್ತು. ಮನೆ ಬಿಟ್ಟು ಓಡಿ ಹೋಗಿದ್ದ ಅವರು ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದರು. ಭಿಕ್ಷೆ ಸಿಗಲಿ ಎಂದು ಮೂಕನಂತೆ ನಟಿಸುತ್ತಿದ್ದರು. ನಂತರ ನಿರಾಶ್ರಿತ ಮಕ್ಕಳ ಕೇಂದ್ರ ಸೇರಿದ ಬಳಿಕ ಬದುಕು ಕಂಡುಕೊಂಡರು.

ಈ ಎಲ್ಲ ಸಂಗತಿಗಳನ್ನು ಲೋಕೇಶ್​ ಅವರು ಬಿಗ್​ ಬಾಸ್​ ಮನೆಯೊಳಗೆ ಹೇಳಲು ಆರಂಭಿಸಿದರು. ‘ಇದನ್ನೆಲ್ಲ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಆರ್ಯವರ್ಧನ್​ ಗುರೂಜಿ ಮಾತಿನಲ್ಲೇ ಡಿಚ್ಚಿ ಕೊಟ್ಟರು. ಈ ಮಾತು ಲೋಕೇಶ್​ಗೆ ಸರಿ ಎನಿಸಲಿಲ್ಲ. ‘ನಿಮ್ಮ ಪ್ರಕಾರ ಇಲ್ಲಿ ನಾವು ಹೇಳುವುದೆಲ್ಲ ವೋಟ್​ ಪಡೆಯೋದಕ್ಕೋಸ್ಕರನಾ?’ ಎಂದು ಮರುಪ್ರಶ್ನೆ ಹಾಕಿದರು.

ಬಿಗ್​ ಬಾಸ್​ ಮನೆಯಲ್ಲಿ ಈ ರೀತಿ ಸಂಗತಿಗಳು ಆಗಾಗ ಎದುರಾಗುತ್ತವೆ. ಎಮೋಷನ್​ಗಳನ್ನು ಇಟ್ಟುಕೊಂಡು ಆಟ ಆಡಲಾಗುತ್ತದೆ. ಈ ಕಾರಣದಿಂದ ಒಂದು ವರ್ಗದ ವೀಕ್ಷಕರು ವಿರೋಧ ವ್ಯಕ್ತಪಡಿಸುತ್ತಾರೆ. ಆದರೂ ಪ್ರತಿ ಸೀಸನ್​ನಲ್ಲಿ ಇದು ಮುಂದುವರಿಯುತ್ತಲೇ ಇದೆ. ಈ ಬಾರಿ ಶೋ ಆರಂಭದಲ್ಲೇ ಸ್ಪರ್ಧಿಗಳು ಕಣ್ಣೀರು ಹಾಕಿದ್ದಾರೆ.

ಮೊದಲ ವಾರ 8 ಮಂದಿ ನಾಮಿನೇಟ್​:

ಸೋನು ಶ್ರೀನಿವಾಸ್​ ಗೌಡ ಸೇರಿದಂತೆ ಒಟ್ಟು 8 ಜನರು ಮೊದಲ ವಾರವೇ ನಾಮಿನೇಟ್​ ಆಗಿದ್ದಾರೆ. ಸ್ಫೂರ್ತಿ ಗೌಡ, ಆರ್ಯವರ್ಧನ್​ ಗುರೂಜಿ, ಜಯಶ್ರೀ ಆರಾಧ್ಯಾ, ನಂದಿನಿ, ಜಶ್ವಂತ್​, ಕಿರಣ್​ ಯೋಗೇಶ್ವರ್​ ಮತ್ತು ಅಕ್ಷತಾ ಕುಕ್ಕಿ ಅವರ ಮೇಲೆ ಎಲಿಮಿನೇಷನ್​ ಕತ್ತಿ ತೂಗುತ್ತಿದೆ. ಈ ಪೈಕಿ ಯಾರು ಬಿಗ್​ ಬಾಸ್​ ಮನೆಯಿಂದ ಮೊದಲು ಹೊರಬರುತ್ತಾರೆ ಎಂದು ತಿಳಿಯಲು ವೀಕೆಂಡ್​ ಎಪಿಸೋಡ್​ ನೋಡಬೇಕು. ಇನ್ನುಳಿದ ಸ್ಪರ್ಧಿಗಳಾದ ಚೈತ್ರಾ ಹಳ್ಳಿಕೇರಿ, ಅರ್ಜುನ್​ ರಮೇಶ್​, ಲೋಕೇಶ್​, ಸೋಮಣ್ಣ ಮಾಚಿಮಾಡ, ರಾಕೇಶ್​ ಅಡಿಗ, ಸಾನ್ಯಾ ಐಯ್ಯರ್, ಉದಯ್​ ಸೂರ್ಯ, ರೂಪೇಶ್​ ಶೆಟ್ಟಿ ಸದ್ಯಕ್ಕೆ ಸೇಫ್​ ಆಗಿದ್ದಾರೆ. ನಾಮಿನೇಟ್​ ಆಗಿರುವವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಹೆಚ್ಚು ಶ್ರಮ ಹಾಕಬೇಕು. ಹಾಗಾಗಿ ಎಮೋಷನಲ್​ ಕಾರ್ಡ್​ ಬಳಸುತ್ತಿದ್ದಾರೆ ಎಂಬ ಅಭಿಪ್ರಾಯ ವೀಕ್ಷಕರ ವಲಯದಿಂದ ಕೇಳಿಬರುತ್ತಿದೆ.

Spread the love
  • Related Posts

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್, ಸಕಲೇಶಪುರ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಸಕಲೇಶಪುರ ತಾಲೂಕಿನ ಶೌರ್ಯ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಗಾಗಿ ಒಂದು ದಿನದ ವಿಶೇಷ ತರಬೇತಿ…

    Spread the love

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ತಾಲೂಕಿನ ಪ್ರಮುಖ ಧಾರ್ಮಿಕ ಹಾಗೂ ಪ್ರವಾಸಿ ತಾಣಗಳನ್ನು ಹೊಂದಿರುವ ಮಿತ್ತಬಾಗಿಲು, ಮಲವಂತಿಗೆ ಮತ್ತು ಕಡಿರುದ್ಯಾವರ ಗ್ರಾಮಗಳಲ್ಲಿ ಪದೇಪದೇ ವಿದ್ಯುತ್ ವ್ಯತ್ಯಯ ಉಂಟಾಗುತ್ತಿರುವುದು ಗ್ರಾಮಸ್ಥರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಜೂರು ದರ್ಗಾ ಶರೀಫ್, ಶ್ರೀ ಕ್ಷೇತ್ರ ಕೊಲ್ಲಿ ದುರ್ಗಾಪರಮೇಶ್ವರಿ ದೇವಸ್ಥಾನ ಸೇರಿದಂತೆ…

    Spread the love

    You Missed

    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    • By admin
    • August 24, 2026
    • 5 views
    ಧರ್ಮಸ್ಥಳದ ಶೌರ್ಯ ಪಡೆಗೆ NDRF ತರಬೇತಿ: ವಿಪತ್ತು ನಿರ್ವಹಣೆಯಲ್ಲಿ ಸಮಾಜಸೇವೆಗೆ ಸಜ್ಜು, ವಿಪತ್ತು ನಿರ್ವಹಣೆಯಲ್ಲಿ ಶೌರ್ಯ ತಂಡಗಳ ಸೇವೆ ಶ್ಲಾಘನೀಯ: ಉಪವಿಭಾಗಾಧಿಕಾರಿ ಹುಲ್ಲುಮನಿ ತಿಮ್ಮಣ್ಣ

    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    • By admin
    • August 24, 2026
    • 9 views
    ವಿದ್ಯುತ್ ಕಣ್ಣಾಮುಚ್ಚಾಲೆ! ⚡ಮಿತ್ತಬಾಗಿಲು–ಮಲವಂತಿಗೆ–ಕಡಿರುದ್ಯಾವರದಲ್ಲಿ ವಿದ್ಯುತ್ ಸಮಸ್ಯೆ: ಗ್ರಾಮಸ್ಥರ ಆಕ್ರೋಶ, ಮೆಸ್ಕಾಂ ವಿರುದ್ಧ ಅಸಮಾಧಾನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 10 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 8 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 15 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 11 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ