ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್‌ ಅವರಿಗೆ ಟಕ್ಕರ್‌ ಕೊಟ್ಟು ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಟ್ರೂಫಿ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್‌ ಅವರು ರನ್ನರ್ ಅಪ್‌ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದರು.

ರಜತ್‌ ಕಿಶನ್‌ ಅವರು ಎರಡನೇ ರನ್ನರ್ ಅಪ್ ಆದರು. ಜತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದರು. ಮನೆಯಲ್ಲಿ ಕೊನೆಯದಾಗಿ ಉಳಿದಿದ್ದ ಮೂವರನ್ನು ಸುದೀಪ್‌ ಅವರೇ ಸ್ವತಃ ಮನೆಯೊಳಗೆ ಹೋಗಿ ಕರೆದುಕೊಂಡು ವೇದಿಕೆಗೆ ಬಂದರು.ದೊಡ್ಡ ಆಲದಮರದ ಬಳಿಯ ಹೊಸ ಅರಮನೆಯಂಥ ಬಿಗ್ ಬಾಸ್ ಮನೆ ಆವರಣದಲ್ಲಿ ಈ ಈವೆಂಟ್ ನಡೆದಿದೆ. ವೇದಿಕೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ವಿನ್ನರ್‌ ಹನುಮಂತಗೆ ಟ್ರೋಫಿ ಮತ್ತು ಬಹುಮಾನದ ಮೊತ್ತದ ಚೆಕ್ ಹಸ್ತಾಂತರಿಸಿದರು.

ಇನ್ನು ಶೋ ಗೆದ್ದ ಹನುಮಂತ ಬಿಗ್‌ಬಾಸ್‌ ಟ್ರೋಪಿ ಜೊತೆಗೆ 50 ಲಕ್ಷ ಮಾತ್ರವಲ್ಲ, ಮನೆಯಲ್ಲಿ ಇಷ್ಟು ದಿನ ಉಳಿದುಕೊಂಡ ಹಿನ್ನೆಲೆಯಲ್ಲಿ ಸಂಭಾವನೆಯನ್ನು ಕೂಡ ಪಡೆದಿದ್ದಾರೆ.ಕಪ್ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿತ್ತು.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡಿತ್ತು. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳುತ್ತಲೇ ಇದ್ದರು. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲೂ ಮಾಹಿತಿ ಅಪ್ಡೇಟ್ ಮಾಡಲಾಗಿತ್ತು. ಘೋಷಣೆಗೂ‌ ಮೊದಲೇ ಸೋರಿಕೆಯಾಗಿದ್ದ ಮಾಹಿತಿ ಕೊನೆಗೂ ನಿಜವಾಗಿದೆ.

ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಬಂದು ಫಿನಾಲೆಯಲ್ಲಿ 2 ಮತ್ತು ಮೂರನೇ ಸ್ಥಾನ ಪಡೆದು ಹನುಮ ಮತ್ತು ರಜತ್‌ ಇತಿಹಾಸ ನಿರ್ಮಿಸಿದ್ದಾರೆ. ಈವರೆಗೆ ಕನ್ನಡ ಬಿಗ್‌ಬಾಸ್‌ ಇತಿಹಾಸದಲ್ಲಿ ಯಾವೊಬ್ಬ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿ ಕೂಡ ಫಿನಾಲೆ ವಾರದವರೆಗೆ ಬಂದಿರುವ ಇತಿಹಾಸವೇ ಇಲ್ಲ. ಶೋ ಆರಂಭವಾಗುವಾಗ ಇಬ್ಬರಿಗೂ ಕಿಚ್ಚ ಸುದೀಪ್‌ ಇದನ್ನು ಹೇಳಿ ಅಭಿನಂದನೆ ಕೂಡ ಸಲ್ಲಿಸಿದ್ದರು.

ಉಗ್ರಂ ಮಂಜು, ರಜತ್‌, ತ್ರಿವಿಕ್ರಮ್‌ ಅವರಿಗೆ ಎದುರಾಗಿ ನಿಂತು ಸಾಕಷ್ಟು ಟಾಸ್ಟ್‌ಗಳಲ್ಲಿ ಹನುಮಂತ ಠಕ್ಕರ್ ಕೊಟ್ಟಿದ್ದರು. ಜೊತೆಗೆ ಧನ್‌ರಾಜ್ ಅವರೊಂದಿಗಿನ ಸ್ನೇಹ ಕೂಡ ತುಂಬಾ ಹೈಲೆಟ್ಸ್ ಆಗಿತ್ತು. ಬಿಗ್‌ಬಾಸ್‌ ಪಿನಾಲೆಗೆ ಒಟ್ಟು 6 ಮಂದಿ ಸೆಲೆಕ್ಟ್ ಆಗಿದ್ದರು. ಅದರಂತೆ ಕ್ರಮವಾಗಿ ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ, ರಜತ್‌ ಮತ್ತು ತ್ರಿವಿಕ್ರಮ್‌ ಕಪ್‌ ಗೆಲ್ಲುವ ರೇಸ್‌ ನಿಂದ ಹೊರಬಿದ್ದರು.

ಒಟ್ಟು ಈ ಬಾರಿ 20 ಮಂದಿ ಸ್ಪರ್ಧಿಗಳು ಶೋನಲ್ಲಿದ್ದರು.ಇದೀಗ ಬಿಗ್ ಬಾಸ್ ಕನ್ನಡ 11ರ ಸೀಸನ್ ಗ್ರಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿ ಹನುಮಂತ ಅವರು ಕಪ್ ಗೆಲ್ಲುವ ಮೂಲಕ ಬಿಗ್ ಬಾಸ್ ಈ ಸೀಸನ್‌ಗೆ ಇತಿಶ್ರೀ ಹಾಡಲಾಯಿತು.

Spread the love
  • Related Posts

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಬೆಂಗಳೂರು: ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಪತ್ನಿ ಚನ್ನಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ (ಜು.18) ನಿಧನ ಹೊಂದಿದರು, ಅವರಿಗೆ 85 ವರ್ಷ ವಯಸ್ಸಾಗಿತ್ತು. ಚೆನ್ನಮ್ಮ ಅವರಿಗೆ ಕಳೆದ ಮೂರು ದಿನಗಳಿಂದ…

    Spread the love

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಂಗಳೂರು, ಜು.17: ಭಾರತೀಯ ಹವಾಮಾನ ಇಲಾಖೆ (IMD) ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ…

    Spread the love

    You Missed

    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    • By admin
    • July 18, 2026
    • 5 views
    ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ವಿಧಿವಶ

    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    • By admin
    • July 17, 2026
    • 7 views
    ಭಾರಿ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.18ರಂದು ರಜೆ ಘೋಷಣೆ

    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ: ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    • By admin
    • July 17, 2026
    • 10 views
    ಮಹಿಳಾ ಸಬಲೀಕರಣ ಮತ್ತು ಸಮಾಜ ಸೇವೆಗೆ ಜಾಗತಿಕ ಮನ್ನಣೆ:  ಹೇಮಾವತಿ ವಿ. ಹೆಗ್ಗಡೆಗೆ ಗೌರವ ಡಾಕ್ಟರೇಟ್

    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    • By admin
    • July 17, 2026
    • 9 views
    ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ನೀಟ್ 2026ರಲ್ಲಿ ಐತಿಹಾಸಿಕ ಸಾಧನೆ – ಅಖಿಲ ಭಾರತ ಮಟ್ಟದಲ್ಲಿ 271ನೇ ರ್ಯಾಂಕ್

    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • July 16, 2026
    • 15 views
    ಚಿರಂಜೀವಿ ಯುವಕ ಮಂಡಲ(ರಿ), ಕಾನರ್ಪ ಇದರ 35ನೇ ವರ್ಷದ  ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ

    • By admin
    • July 16, 2026
    • 16 views
    ಬಂಟ್ವಾಳದಲ್ಲಿ ಬೆಚ್ಚಿಬೀಳಿಸಿದ ಭೀಕರ ಹತ್ಯೆ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲೇ ಯುವತಿ ಕೊಲೆ, ಆರೋಪಿ ಪರಾರಿ