ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್‌ ಅವರಿಗೆ ಟಕ್ಕರ್‌ ಕೊಟ್ಟು ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಟ್ರೂಫಿ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್‌ ಅವರು ರನ್ನರ್ ಅಪ್‌ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದರು.

ರಜತ್‌ ಕಿಶನ್‌ ಅವರು ಎರಡನೇ ರನ್ನರ್ ಅಪ್ ಆದರು. ಜತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದರು. ಮನೆಯಲ್ಲಿ ಕೊನೆಯದಾಗಿ ಉಳಿದಿದ್ದ ಮೂವರನ್ನು ಸುದೀಪ್‌ ಅವರೇ ಸ್ವತಃ ಮನೆಯೊಳಗೆ ಹೋಗಿ ಕರೆದುಕೊಂಡು ವೇದಿಕೆಗೆ ಬಂದರು.ದೊಡ್ಡ ಆಲದಮರದ ಬಳಿಯ ಹೊಸ ಅರಮನೆಯಂಥ ಬಿಗ್ ಬಾಸ್ ಮನೆ ಆವರಣದಲ್ಲಿ ಈ ಈವೆಂಟ್ ನಡೆದಿದೆ. ವೇದಿಕೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ವಿನ್ನರ್‌ ಹನುಮಂತಗೆ ಟ್ರೋಫಿ ಮತ್ತು ಬಹುಮಾನದ ಮೊತ್ತದ ಚೆಕ್ ಹಸ್ತಾಂತರಿಸಿದರು.

ಇನ್ನು ಶೋ ಗೆದ್ದ ಹನುಮಂತ ಬಿಗ್‌ಬಾಸ್‌ ಟ್ರೋಪಿ ಜೊತೆಗೆ 50 ಲಕ್ಷ ಮಾತ್ರವಲ್ಲ, ಮನೆಯಲ್ಲಿ ಇಷ್ಟು ದಿನ ಉಳಿದುಕೊಂಡ ಹಿನ್ನೆಲೆಯಲ್ಲಿ ಸಂಭಾವನೆಯನ್ನು ಕೂಡ ಪಡೆದಿದ್ದಾರೆ.ಕಪ್ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿತ್ತು.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡಿತ್ತು. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳುತ್ತಲೇ ಇದ್ದರು. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲೂ ಮಾಹಿತಿ ಅಪ್ಡೇಟ್ ಮಾಡಲಾಗಿತ್ತು. ಘೋಷಣೆಗೂ‌ ಮೊದಲೇ ಸೋರಿಕೆಯಾಗಿದ್ದ ಮಾಹಿತಿ ಕೊನೆಗೂ ನಿಜವಾಗಿದೆ.

ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಬಂದು ಫಿನಾಲೆಯಲ್ಲಿ 2 ಮತ್ತು ಮೂರನೇ ಸ್ಥಾನ ಪಡೆದು ಹನುಮ ಮತ್ತು ರಜತ್‌ ಇತಿಹಾಸ ನಿರ್ಮಿಸಿದ್ದಾರೆ. ಈವರೆಗೆ ಕನ್ನಡ ಬಿಗ್‌ಬಾಸ್‌ ಇತಿಹಾಸದಲ್ಲಿ ಯಾವೊಬ್ಬ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿ ಕೂಡ ಫಿನಾಲೆ ವಾರದವರೆಗೆ ಬಂದಿರುವ ಇತಿಹಾಸವೇ ಇಲ್ಲ. ಶೋ ಆರಂಭವಾಗುವಾಗ ಇಬ್ಬರಿಗೂ ಕಿಚ್ಚ ಸುದೀಪ್‌ ಇದನ್ನು ಹೇಳಿ ಅಭಿನಂದನೆ ಕೂಡ ಸಲ್ಲಿಸಿದ್ದರು.

ಉಗ್ರಂ ಮಂಜು, ರಜತ್‌, ತ್ರಿವಿಕ್ರಮ್‌ ಅವರಿಗೆ ಎದುರಾಗಿ ನಿಂತು ಸಾಕಷ್ಟು ಟಾಸ್ಟ್‌ಗಳಲ್ಲಿ ಹನುಮಂತ ಠಕ್ಕರ್ ಕೊಟ್ಟಿದ್ದರು. ಜೊತೆಗೆ ಧನ್‌ರಾಜ್ ಅವರೊಂದಿಗಿನ ಸ್ನೇಹ ಕೂಡ ತುಂಬಾ ಹೈಲೆಟ್ಸ್ ಆಗಿತ್ತು. ಬಿಗ್‌ಬಾಸ್‌ ಪಿನಾಲೆಗೆ ಒಟ್ಟು 6 ಮಂದಿ ಸೆಲೆಕ್ಟ್ ಆಗಿದ್ದರು. ಅದರಂತೆ ಕ್ರಮವಾಗಿ ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ, ರಜತ್‌ ಮತ್ತು ತ್ರಿವಿಕ್ರಮ್‌ ಕಪ್‌ ಗೆಲ್ಲುವ ರೇಸ್‌ ನಿಂದ ಹೊರಬಿದ್ದರು.

ಒಟ್ಟು ಈ ಬಾರಿ 20 ಮಂದಿ ಸ್ಪರ್ಧಿಗಳು ಶೋನಲ್ಲಿದ್ದರು.ಇದೀಗ ಬಿಗ್ ಬಾಸ್ ಕನ್ನಡ 11ರ ಸೀಸನ್ ಗ್ರಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿ ಹನುಮಂತ ಅವರು ಕಪ್ ಗೆಲ್ಲುವ ಮೂಲಕ ಬಿಗ್ ಬಾಸ್ ಈ ಸೀಸನ್‌ಗೆ ಇತಿಶ್ರೀ ಹಾಡಲಾಯಿತು.

Spread the love
  • Related Posts

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ರುಡ್ ಸೆಟ್ ಸಂಸ್ಥೆ, ಉಜಿರೆಯಲ್ಲಿ ಮೊಬೈಲ್‌ ಫೋನ್‌ ರಿಪೇರಿ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ: 17.03.2025 ರಿಂದ 15.04.2025ರ ವರೆಗೆ (30ದಿನ) ತರಬೇತಿ ನಡೆಯುತ್ತದೆ. ತರಬೇತಿಯು ಊಟ, ವಸತಿಯೊಂದಿಗೆ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ ಭಾಗವಹಿಸಿಸುವವರು ಈ ಕೆಳಗಿನ ಲಿಂಕ್…

    Spread the love

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಇಂದು ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.ಶಿಬಿರದ ಉದ್ಘಾಟನೆಯನ್ನು ಶ್ರೀಯುತ ಅವಿನಾಶ್ ಎಚ್ ಗೌಡ,…

    Spread the love

    You Missed

    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    • By admin
    • March 15, 2025
    • 66 views
    ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    • By admin
    • February 21, 2025
    • 54 views
    ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    • By admin
    • February 15, 2025
    • 61 views
    ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ

    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    • By admin
    • February 15, 2025
    • 228 views
    ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’

    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    • By admin
    • February 12, 2025
    • 83 views
    ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು

    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ

    • By admin
    • February 12, 2025
    • 159 views
    ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ