ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್‌ ಅವರಿಗೆ ಟಕ್ಕರ್‌ ಕೊಟ್ಟು ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಟ್ರೂಫಿ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್‌ ಅವರು ರನ್ನರ್ ಅಪ್‌ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದರು.

ರಜತ್‌ ಕಿಶನ್‌ ಅವರು ಎರಡನೇ ರನ್ನರ್ ಅಪ್ ಆದರು. ಜತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದರು. ಮನೆಯಲ್ಲಿ ಕೊನೆಯದಾಗಿ ಉಳಿದಿದ್ದ ಮೂವರನ್ನು ಸುದೀಪ್‌ ಅವರೇ ಸ್ವತಃ ಮನೆಯೊಳಗೆ ಹೋಗಿ ಕರೆದುಕೊಂಡು ವೇದಿಕೆಗೆ ಬಂದರು.ದೊಡ್ಡ ಆಲದಮರದ ಬಳಿಯ ಹೊಸ ಅರಮನೆಯಂಥ ಬಿಗ್ ಬಾಸ್ ಮನೆ ಆವರಣದಲ್ಲಿ ಈ ಈವೆಂಟ್ ನಡೆದಿದೆ. ವೇದಿಕೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ವಿನ್ನರ್‌ ಹನುಮಂತಗೆ ಟ್ರೋಫಿ ಮತ್ತು ಬಹುಮಾನದ ಮೊತ್ತದ ಚೆಕ್ ಹಸ್ತಾಂತರಿಸಿದರು.

ಇನ್ನು ಶೋ ಗೆದ್ದ ಹನುಮಂತ ಬಿಗ್‌ಬಾಸ್‌ ಟ್ರೋಪಿ ಜೊತೆಗೆ 50 ಲಕ್ಷ ಮಾತ್ರವಲ್ಲ, ಮನೆಯಲ್ಲಿ ಇಷ್ಟು ದಿನ ಉಳಿದುಕೊಂಡ ಹಿನ್ನೆಲೆಯಲ್ಲಿ ಸಂಭಾವನೆಯನ್ನು ಕೂಡ ಪಡೆದಿದ್ದಾರೆ.ಕಪ್ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿತ್ತು.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡಿತ್ತು. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳುತ್ತಲೇ ಇದ್ದರು. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲೂ ಮಾಹಿತಿ ಅಪ್ಡೇಟ್ ಮಾಡಲಾಗಿತ್ತು. ಘೋಷಣೆಗೂ‌ ಮೊದಲೇ ಸೋರಿಕೆಯಾಗಿದ್ದ ಮಾಹಿತಿ ಕೊನೆಗೂ ನಿಜವಾಗಿದೆ.

ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಬಂದು ಫಿನಾಲೆಯಲ್ಲಿ 2 ಮತ್ತು ಮೂರನೇ ಸ್ಥಾನ ಪಡೆದು ಹನುಮ ಮತ್ತು ರಜತ್‌ ಇತಿಹಾಸ ನಿರ್ಮಿಸಿದ್ದಾರೆ. ಈವರೆಗೆ ಕನ್ನಡ ಬಿಗ್‌ಬಾಸ್‌ ಇತಿಹಾಸದಲ್ಲಿ ಯಾವೊಬ್ಬ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿ ಕೂಡ ಫಿನಾಲೆ ವಾರದವರೆಗೆ ಬಂದಿರುವ ಇತಿಹಾಸವೇ ಇಲ್ಲ. ಶೋ ಆರಂಭವಾಗುವಾಗ ಇಬ್ಬರಿಗೂ ಕಿಚ್ಚ ಸುದೀಪ್‌ ಇದನ್ನು ಹೇಳಿ ಅಭಿನಂದನೆ ಕೂಡ ಸಲ್ಲಿಸಿದ್ದರು.

ಉಗ್ರಂ ಮಂಜು, ರಜತ್‌, ತ್ರಿವಿಕ್ರಮ್‌ ಅವರಿಗೆ ಎದುರಾಗಿ ನಿಂತು ಸಾಕಷ್ಟು ಟಾಸ್ಟ್‌ಗಳಲ್ಲಿ ಹನುಮಂತ ಠಕ್ಕರ್ ಕೊಟ್ಟಿದ್ದರು. ಜೊತೆಗೆ ಧನ್‌ರಾಜ್ ಅವರೊಂದಿಗಿನ ಸ್ನೇಹ ಕೂಡ ತುಂಬಾ ಹೈಲೆಟ್ಸ್ ಆಗಿತ್ತು. ಬಿಗ್‌ಬಾಸ್‌ ಪಿನಾಲೆಗೆ ಒಟ್ಟು 6 ಮಂದಿ ಸೆಲೆಕ್ಟ್ ಆಗಿದ್ದರು. ಅದರಂತೆ ಕ್ರಮವಾಗಿ ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ, ರಜತ್‌ ಮತ್ತು ತ್ರಿವಿಕ್ರಮ್‌ ಕಪ್‌ ಗೆಲ್ಲುವ ರೇಸ್‌ ನಿಂದ ಹೊರಬಿದ್ದರು.

ಒಟ್ಟು ಈ ಬಾರಿ 20 ಮಂದಿ ಸ್ಪರ್ಧಿಗಳು ಶೋನಲ್ಲಿದ್ದರು.ಇದೀಗ ಬಿಗ್ ಬಾಸ್ ಕನ್ನಡ 11ರ ಸೀಸನ್ ಗ್ರಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿ ಹನುಮಂತ ಅವರು ಕಪ್ ಗೆಲ್ಲುವ ಮೂಲಕ ಬಿಗ್ ಬಾಸ್ ಈ ಸೀಸನ್‌ಗೆ ಇತಿಶ್ರೀ ಹಾಡಲಾಯಿತು.

Spread the love
  • Related Posts

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    Manglore: ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ. ನಗರ ಜೆಪ್ಪಿನಮೊಗರು ಎಂಬಲ್ಲಿ ದ್ವಿಚಕ್ರ ವಾಹನದಲ್ಲಿ ದೊಡ್ಡ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಬರುತ್ತಿರುವುದಾಗಿ ಕಂಕನಾಡಿ ನಗರ ಪೊಲೀಸರಿಗೆ…

    Spread the love

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಕನ್ಯಾಡಿ: ಇಂದು ಅಕ್ಷಯ ತೃತೀಯ – ಹೊಸ ಆರಂಭಗಳಿಗೆ, ಸಮೃದ್ಧಿಗೆ ನಾಂದಿ ಹಾಡುವ ಪವಿತ್ರ ದಿನ. ಈ ಶುಭ ಸಂದರ್ಭದಲ್ಲಿ ನಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುವ ನಿಟ್ಟಿನಲ್ಲಿ ಒಂದು ಮಹತ್ವದ ನಿರ್ಧಾರ ತೆಗೆದುಕೊಳ್ಳೋಣ. ಜ್ಞಾನದ ಅಕ್ಷಯ ಪಾತ್ರೆಯಂತಿರುವ ಸರ್ಕಾರಿ ಉನ್ನತೀಕರಿಸಿದ ಹಿರಿಯ…

    Spread the love

    You Missed

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 36 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 30 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 78 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    • By admin
    • April 19, 2026
    • 39 views
    ನೆರಿಯದಲ್ಲಿ ಸಂಪನ್ನಗೊಂಡ 36 ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ:

    ಅಪ್ರಾಪ್ತ ಬಾಲಕಿ ಮೇಲೆ ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು ಬಂಧನ

    • By admin
    • April 19, 2026
    • 152 views
    ಅಪ್ರಾಪ್ತ ಬಾಲಕಿ ಮೇಲೆ  ಯುವಕರಿಬ್ಬರಿಂದ ಅತ್ಯಾಚಾರ: ಧರ್ಮಸ್ಥಳ ಪೋಲೀಸರಿಂದ ಇಬ್ಬರು  ಬಂಧನ

    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”

    • By admin
    • April 18, 2026
    • 234 views
    ಅಧಿಕೃತ ಆದೇಶವಿದ್ದರೂ ಬಸ್ ನಿಲ್ಲಿಸದೇ ನಿರ್ಲಕ್ಷ್ಯ: “ಬೋರ್ಡ್ ಇದೆ, ಆದೇಶ ಇದೆ… ಬಸ್ ಮಾತ್ರ ನಿಲ್ಲಲ್ಲ!”