ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್‌ ಅವರಿಗೆ ಟಕ್ಕರ್‌ ಕೊಟ್ಟು ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಟ್ರೂಫಿ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್‌ ಅವರು ರನ್ನರ್ ಅಪ್‌ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದರು.

ರಜತ್‌ ಕಿಶನ್‌ ಅವರು ಎರಡನೇ ರನ್ನರ್ ಅಪ್ ಆದರು. ಜತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದರು. ಮನೆಯಲ್ಲಿ ಕೊನೆಯದಾಗಿ ಉಳಿದಿದ್ದ ಮೂವರನ್ನು ಸುದೀಪ್‌ ಅವರೇ ಸ್ವತಃ ಮನೆಯೊಳಗೆ ಹೋಗಿ ಕರೆದುಕೊಂಡು ವೇದಿಕೆಗೆ ಬಂದರು.ದೊಡ್ಡ ಆಲದಮರದ ಬಳಿಯ ಹೊಸ ಅರಮನೆಯಂಥ ಬಿಗ್ ಬಾಸ್ ಮನೆ ಆವರಣದಲ್ಲಿ ಈ ಈವೆಂಟ್ ನಡೆದಿದೆ. ವೇದಿಕೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ವಿನ್ನರ್‌ ಹನುಮಂತಗೆ ಟ್ರೋಫಿ ಮತ್ತು ಬಹುಮಾನದ ಮೊತ್ತದ ಚೆಕ್ ಹಸ್ತಾಂತರಿಸಿದರು.

ಇನ್ನು ಶೋ ಗೆದ್ದ ಹನುಮಂತ ಬಿಗ್‌ಬಾಸ್‌ ಟ್ರೋಪಿ ಜೊತೆಗೆ 50 ಲಕ್ಷ ಮಾತ್ರವಲ್ಲ, ಮನೆಯಲ್ಲಿ ಇಷ್ಟು ದಿನ ಉಳಿದುಕೊಂಡ ಹಿನ್ನೆಲೆಯಲ್ಲಿ ಸಂಭಾವನೆಯನ್ನು ಕೂಡ ಪಡೆದಿದ್ದಾರೆ.ಕಪ್ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿತ್ತು.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡಿತ್ತು. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳುತ್ತಲೇ ಇದ್ದರು. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲೂ ಮಾಹಿತಿ ಅಪ್ಡೇಟ್ ಮಾಡಲಾಗಿತ್ತು. ಘೋಷಣೆಗೂ‌ ಮೊದಲೇ ಸೋರಿಕೆಯಾಗಿದ್ದ ಮಾಹಿತಿ ಕೊನೆಗೂ ನಿಜವಾಗಿದೆ.

ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಬಂದು ಫಿನಾಲೆಯಲ್ಲಿ 2 ಮತ್ತು ಮೂರನೇ ಸ್ಥಾನ ಪಡೆದು ಹನುಮ ಮತ್ತು ರಜತ್‌ ಇತಿಹಾಸ ನಿರ್ಮಿಸಿದ್ದಾರೆ. ಈವರೆಗೆ ಕನ್ನಡ ಬಿಗ್‌ಬಾಸ್‌ ಇತಿಹಾಸದಲ್ಲಿ ಯಾವೊಬ್ಬ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿ ಕೂಡ ಫಿನಾಲೆ ವಾರದವರೆಗೆ ಬಂದಿರುವ ಇತಿಹಾಸವೇ ಇಲ್ಲ. ಶೋ ಆರಂಭವಾಗುವಾಗ ಇಬ್ಬರಿಗೂ ಕಿಚ್ಚ ಸುದೀಪ್‌ ಇದನ್ನು ಹೇಳಿ ಅಭಿನಂದನೆ ಕೂಡ ಸಲ್ಲಿಸಿದ್ದರು.

ಉಗ್ರಂ ಮಂಜು, ರಜತ್‌, ತ್ರಿವಿಕ್ರಮ್‌ ಅವರಿಗೆ ಎದುರಾಗಿ ನಿಂತು ಸಾಕಷ್ಟು ಟಾಸ್ಟ್‌ಗಳಲ್ಲಿ ಹನುಮಂತ ಠಕ್ಕರ್ ಕೊಟ್ಟಿದ್ದರು. ಜೊತೆಗೆ ಧನ್‌ರಾಜ್ ಅವರೊಂದಿಗಿನ ಸ್ನೇಹ ಕೂಡ ತುಂಬಾ ಹೈಲೆಟ್ಸ್ ಆಗಿತ್ತು. ಬಿಗ್‌ಬಾಸ್‌ ಪಿನಾಲೆಗೆ ಒಟ್ಟು 6 ಮಂದಿ ಸೆಲೆಕ್ಟ್ ಆಗಿದ್ದರು. ಅದರಂತೆ ಕ್ರಮವಾಗಿ ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ, ರಜತ್‌ ಮತ್ತು ತ್ರಿವಿಕ್ರಮ್‌ ಕಪ್‌ ಗೆಲ್ಲುವ ರೇಸ್‌ ನಿಂದ ಹೊರಬಿದ್ದರು.

ಒಟ್ಟು ಈ ಬಾರಿ 20 ಮಂದಿ ಸ್ಪರ್ಧಿಗಳು ಶೋನಲ್ಲಿದ್ದರು.ಇದೀಗ ಬಿಗ್ ಬಾಸ್ ಕನ್ನಡ 11ರ ಸೀಸನ್ ಗ್ರಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿ ಹನುಮಂತ ಅವರು ಕಪ್ ಗೆಲ್ಲುವ ಮೂಲಕ ಬಿಗ್ ಬಾಸ್ ಈ ಸೀಸನ್‌ಗೆ ಇತಿಶ್ರೀ ಹಾಡಲಾಯಿತು.

Spread the love
  • Related Posts

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಬೆಳ್ತಂಗಡಿ: ತಾಲೂಕಿನ ಬೆಳಾಲು ಗ್ರಾಮದ ಮಿನಂದೇಲು ಬಸ್ ನಿಲ್ದಾಣದ ಸಮೀಪ ಸೆ. 3ರಂದು ರಾತ್ರಿ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಆನೆ ಪ್ರತ್ಯಕ್ಷವಾಗಿ ಆತಂಕ ಉಂಟುಮಾಡಿದ ಘಟನೆ ವರದಿಯಾಗಿದೆ. ಉಜಿರೆ–ಬೆಳಾಲು–ಬಂದಾರು ಮುಖ್ಯ ರಸ್ತೆಯ ಮಿನಂದೇಲು ಬಸ್ ನಿಲ್ದಾಣ ಹಾಗೂ ಡಿ.ಪಿ.…

    Spread the love

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    ಬೆಳ್ತಂಗಡಿ: ಧರ್ಮಸ್ಥಳ- ಕೊಕ್ಕಡ ರಸ್ತೆಯ ಧರ್ಮಸ್ಥಳ ಸಮೀಪದ ಕಲ್ಲೇರಿ ಪರಿಸರದ ಪುದುವೆಟ್ಟು ಕ್ರಾಸ್ ಬಳಿ ಗುರುವಾರ ರಾತ್ರಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ಗುರುವಾರ ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಕಾಡಾನೆ ಹೆದ್ದಾರಿ ಬದಿಯಲ್ಲಿ…

    Spread the love

    You Missed

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 4 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 3 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 4 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    • By admin
    • September 3, 2026
    • 11 views
    ಚಿರಂಜೀವಿ ಯುವಕ ಮಂಡಲ ಕಾನರ್ಪದಲ್ಲಿ ಸೆ.6ರಂದು 35ನೇ ವರ್ಷದ ಮೊಸರು ಕುಡಿಕೆ ಅಷ್ಟಮಿ ಉತ್ಸವ ಹಾಗೂ ಕೆಸರುಗದ್ದೆಯಲ್ಲಿ ಗ್ರಾಮೀಣ ಕ್ರೀಡಾಕೂಟ ಆಯೋಜನೆ

    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    • By admin
    • August 31, 2026
    • 6 views
    ಬೆಳ್ತಂಗಡಿ : ಲಾಯಿಲ ಗ್ರಾಮಸಭೆಯಲ್ಲಿ ಅಕ್ರಮಗಳ ಆರೋಪಕ್ಕೆ ಕಿಡಿ, ನಿವೇಶನದಿಂದ ಸರ್ಕಾರಿ ಜಮೀನು, ಕಳಪೆ ಕಾಮಗಾರಿವರೆಗೆ ಸಮಗ್ರ ತನಿಖೆಗೆ ಒತ್ತಾಯ

    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ

    • By admin
    • August 27, 2026
    • 8 views
    ನಾಟ ಫಲಿತಾಂಶ: ಎಕ್ಸೆಲ್ ವಿದ್ಯಾರ್ಥಿಗಳ ಅಪೂರ್ವ ಸಾಧನೆ