ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿಸೊಗಡಿನ ಹನುಮಂತ ಹೊರಹೊಮ್ಮಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ ಬಿಗ್ ಬಾಸ್ ಕಿರೀಟ ತನ್ನ ಮುಡಿಗೇರಿಸಿಕೊಂಡಿದ್ದಾರೆ.

ತ್ರಿವಿಕ್ರಮ್ ಮತ್ತು ರಜತ್‌ ಅವರಿಗೆ ಟಕ್ಕರ್‌ ಕೊಟ್ಟು ಈ ಸೀಸನ್‌ನ ವಿನ್ನರ್ ಆಗಿದ್ದಾರೆ. ಟ್ರೂಫಿ ಜೊತೆಗೆ 50 ಲಕ್ಷ ರೂ ನಗದು ಬಹುಮಾನ ಕೂಡ ಗೆದ್ದಿದ್ದಾರೆ. ಇನ್ನು ತ್ರಿವಿಕ್ರಮ್‌ ಅವರು ರನ್ನರ್ ಅಪ್‌ ಆಗಿ ಒಟ್ಟು 15 ಲಕ್ಷ ರೂ ನಗದು ಬಹುಮಾನ ಗೆದ್ದರು.

ರಜತ್‌ ಕಿಶನ್‌ ಅವರು ಎರಡನೇ ರನ್ನರ್ ಅಪ್ ಆದರು. ಜತೆಗೆ 10 ಲಕ್ಷ ರೂ ನಗದು ಬಹುಮಾನ ಗೆದ್ದರು. ಮನೆಯಲ್ಲಿ ಕೊನೆಯದಾಗಿ ಉಳಿದಿದ್ದ ಮೂವರನ್ನು ಸುದೀಪ್‌ ಅವರೇ ಸ್ವತಃ ಮನೆಯೊಳಗೆ ಹೋಗಿ ಕರೆದುಕೊಂಡು ವೇದಿಕೆಗೆ ಬಂದರು.ದೊಡ್ಡ ಆಲದಮರದ ಬಳಿಯ ಹೊಸ ಅರಮನೆಯಂಥ ಬಿಗ್ ಬಾಸ್ ಮನೆ ಆವರಣದಲ್ಲಿ ಈ ಈವೆಂಟ್ ನಡೆದಿದೆ. ವೇದಿಕೆಯಲ್ಲಿ ನಿರೂಪಕ ಕಿಚ್ಚ ಸುದೀಪ್ ವಿನ್ನರ್‌ ಹನುಮಂತಗೆ ಟ್ರೋಫಿ ಮತ್ತು ಬಹುಮಾನದ ಮೊತ್ತದ ಚೆಕ್ ಹಸ್ತಾಂತರಿಸಿದರು.

ಇನ್ನು ಶೋ ಗೆದ್ದ ಹನುಮಂತ ಬಿಗ್‌ಬಾಸ್‌ ಟ್ರೋಪಿ ಜೊತೆಗೆ 50 ಲಕ್ಷ ಮಾತ್ರವಲ್ಲ, ಮನೆಯಲ್ಲಿ ಇಷ್ಟು ದಿನ ಉಳಿದುಕೊಂಡ ಹಿನ್ನೆಲೆಯಲ್ಲಿ ಸಂಭಾವನೆಯನ್ನು ಕೂಡ ಪಡೆದಿದ್ದಾರೆ.ಕಪ್ ಯಾರು ಗೆಲ್ಲುತ್ತಾರೆ, 50 ಲಕ್ಷ ರೂಪಾಯಿ ಹಣವನ್ನು ಯಾರು ತೆಗೆದುಕೊಂಡು ಹೋಗುತ್ತಾರೆ ಎಂಬ ಬಗ್ಗೆ ಚರ್ಚೆ ಜೋರಾಗಿತ್ತು.

ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಸಾಕಷ್ಟು ವದಂತಿಗಳು ಕೂಡ ಹರಡಿತ್ತು. ಹನುಮಂತ ಅವರು ವಿನ್ನರ್ ಎಂದು ಅವರ ಅಭಿಮಾನಿಗಳು ಹೇಳುತ್ತಲೇ ಇದ್ದರು. ಈ ಮಧ್ಯೆ ಹನುಮಂತ ಅವರು ಬಿಗ್ ಬಾಸ್ ವಿನ್ನರ್ ಎಂದು ವಿಕಿಪೀಡಿಯಾದಲ್ಲೂ ಮಾಹಿತಿ ಅಪ್ಡೇಟ್ ಮಾಡಲಾಗಿತ್ತು. ಘೋಷಣೆಗೂ‌ ಮೊದಲೇ ಸೋರಿಕೆಯಾಗಿದ್ದ ಮಾಹಿತಿ ಕೊನೆಗೂ ನಿಜವಾಗಿದೆ.

ವೈಲ್ಡ್ ಕಾರ್ಡ್ ಮೂಲಕ ದೊಡ್ಮನೆಗೆ ಬಂದು ಫಿನಾಲೆಯಲ್ಲಿ 2 ಮತ್ತು ಮೂರನೇ ಸ್ಥಾನ ಪಡೆದು ಹನುಮ ಮತ್ತು ರಜತ್‌ ಇತಿಹಾಸ ನಿರ್ಮಿಸಿದ್ದಾರೆ. ಈವರೆಗೆ ಕನ್ನಡ ಬಿಗ್‌ಬಾಸ್‌ ಇತಿಹಾಸದಲ್ಲಿ ಯಾವೊಬ್ಬ ವೈಲ್ಡ್ ಕಾರ್ಡ್ ಎಂಟ್ರಿ ಸ್ಪರ್ಧಿ ಕೂಡ ಫಿನಾಲೆ ವಾರದವರೆಗೆ ಬಂದಿರುವ ಇತಿಹಾಸವೇ ಇಲ್ಲ. ಶೋ ಆರಂಭವಾಗುವಾಗ ಇಬ್ಬರಿಗೂ ಕಿಚ್ಚ ಸುದೀಪ್‌ ಇದನ್ನು ಹೇಳಿ ಅಭಿನಂದನೆ ಕೂಡ ಸಲ್ಲಿಸಿದ್ದರು.

ಉಗ್ರಂ ಮಂಜು, ರಜತ್‌, ತ್ರಿವಿಕ್ರಮ್‌ ಅವರಿಗೆ ಎದುರಾಗಿ ನಿಂತು ಸಾಕಷ್ಟು ಟಾಸ್ಟ್‌ಗಳಲ್ಲಿ ಹನುಮಂತ ಠಕ್ಕರ್ ಕೊಟ್ಟಿದ್ದರು. ಜೊತೆಗೆ ಧನ್‌ರಾಜ್ ಅವರೊಂದಿಗಿನ ಸ್ನೇಹ ಕೂಡ ತುಂಬಾ ಹೈಲೆಟ್ಸ್ ಆಗಿತ್ತು. ಬಿಗ್‌ಬಾಸ್‌ ಪಿನಾಲೆಗೆ ಒಟ್ಟು 6 ಮಂದಿ ಸೆಲೆಕ್ಟ್ ಆಗಿದ್ದರು. ಅದರಂತೆ ಕ್ರಮವಾಗಿ ಭವ್ಯಾ ಗೌಡ, ಉಗ್ರಂ ಮಂಜು, ಮೋಕ್ಷಿತಾ, ರಜತ್‌ ಮತ್ತು ತ್ರಿವಿಕ್ರಮ್‌ ಕಪ್‌ ಗೆಲ್ಲುವ ರೇಸ್‌ ನಿಂದ ಹೊರಬಿದ್ದರು.

ಒಟ್ಟು ಈ ಬಾರಿ 20 ಮಂದಿ ಸ್ಪರ್ಧಿಗಳು ಶೋನಲ್ಲಿದ್ದರು.ಇದೀಗ ಬಿಗ್ ಬಾಸ್ ಕನ್ನಡ 11ರ ಸೀಸನ್ ಗ್ರಾಂಡ್ ಫಿನಾಲೆಯಲ್ಲಿ ವಿನ್ನರ್ ಆಗಿ ಹನುಮಂತ ಅವರು ಕಪ್ ಗೆಲ್ಲುವ ಮೂಲಕ ಬಿಗ್ ಬಾಸ್ ಈ ಸೀಸನ್‌ಗೆ ಇತಿಶ್ರೀ ಹಾಡಲಾಯಿತು.

Spread the love
  • Related Posts

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    ಸಕಲೇಶಪುರ, ಜೂನ್ 5: ತಾಲೂಕಿನ ಉದೇವಾರ ಗ್ರಾಮದ ಕೂಲಿ ಕಾರ್ಮಿಕರಾದ ಸರೋಜಮ್ಮ ಅವರ ಮನೆ ಮೇಲೆ ಭಾರೀ ಗಾಳಿ-ಮಳೆಯಿಂದ ತೆಂಗಿನಮರ ಬಿದ್ದು ಮನೆಗೆ ಅಪಾರ ಹಾನಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಸರೋಜಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಕುಟುಂಬ ಸಂಕಷ್ಟಕ್ಕೆ ಸಿಲುಕಿತ್ತು. ಈ ವಿಷಯ…

    Spread the love

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    ಬೆಳ್ತಂಗಡಿ, ಜೂನ್ 4: ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಚಾರಣತಾಣ ಗಡಾಯಿಕಲ್ಲಿಗೆ ಭೇಟಿ ನೀಡಿದ್ದ ಪ್ರವಾಸಿಗನೊಬ್ಬ ಕಾಲು ತಿರುಗಿ (ಟ್ವಿಸ್ಟ್) ಗಾಯಗೊಂಡು ಕೆಳಗಿಳಿಯಲು ಸಾಧ್ಯವಾಗದೆ ಸಿಲುಕಿದ್ದ ಘಟನೆ ಗುರುವಾರ ಸಂಜೆ ನಡೆದಿದೆ. ಸ್ಥಳೀಯರು, ಅಗ್ನಿಶಾಮಕ ದಳ, ಅರಣ್ಯ ಇಲಾಖೆ ಹಾಗೂ ಶ್ರೀ ಕ್ಷೇತ್ರ…

    Spread the love

    You Missed

    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    • By admin
    • June 5, 2026
    • 52 views
    ಮನೆ ಮೇಲೆ ತೆಂಗಿನಮರ ಬಿದ್ದು ಹಾನಿ: ಧರ್ಮಸ್ಥಳ ಶೌರ್ಯ ಘಟಕದಿಂದ ನೆರವು

    “ಗಡಾಯಿಕಲ್ಲಿನಲ್ಲಿ ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    • By admin
    • June 4, 2026
    • 73 views
    “ಗಡಾಯಿಕಲ್ಲಿನಲ್ಲಿ  ಚಾರಣಕ್ಕೆ ಬಂದ ಯುವಕನ ಕಾಲು ಟ್ವಿಸ್ಟ್: ಮೂರು ಗಂಟೆಗಳ ಸಾಹಸಮಯ ರಕ್ಷಣಾ ಕಾರ್ಯಾಚರಣೆ”

    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    • By admin
    • June 2, 2026
    • 33 views
    “ಮಳೆಯ ಸವಿಯಲ್ಲಿ ಶಿರಾಡಿಯ ಕೆ.ಟಿ.: ರುಚಿ ಮತ್ತು ಸ್ನೇಹದ ಅಪೂರ್ವ ಸಂಗಮ”

    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    • By admin
    • June 2, 2026
    • 32 views
    ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಅವರಿಗೆ ಗೌರವ ಸಮರ್ಪಣೆ

    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    • By admin
    • June 1, 2026
    • 102 views
    ಕಾರಿಗೆ ಲಾರಿ ಡಿಕ್ಕಿ, 5 ಮಂದಿಗೆ ಗಂಭೀರ ಗಾಯ ನಜ್ಜುಗುಜ್ಜಾದ ಕಾರಿನಿಂದ ಗಾಯಾಳುಗಳ ರಕ್ಷಣೆ, ಉಪ್ಪಿನಂಗಡಿ ಕೂಟೇಲು ಸಮೀಪದಲ್ಲಿ ನಡೆದ ಘಟನೆ

    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ

    • By admin
    • June 1, 2026
    • 177 views
    ಎತ್ತಿನಭುಜಕ್ಕೆ ಸಿಡಿಲಿನ ಸ್ಪರ್ಶ: ಪ್ರಕೃತಿಯ ಶಕ್ತಿ ಮತ್ತು ಸೌಂದರ್ಯದ ಅಪೂರ್ವ ಸಂಗಮ