ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ ಕರೆ

ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು ನಿರ್ವಹಿಸಲು ನಿಯಂತ್ರಣಾ ಚೌಕಟ್ಟಿನ ಅಗತ್ಯತೆ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು.

ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ. ಬಿಟ್‌ಕಾಯಿನ್‌ ಅಥವಾ ಕ್ರಿಪ್ಟೊಕರೆನ್ಸಿ ಉದಾಹರಣೆಯನ್ನೇ ತೆಗೆದುಕೊಳ್ಳಿ, ಕ್ರಿಪ್ಟೋಕರೆನ್ಸಿಯ ವಿಷಯದಲ್ಲಿ ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು. ಡಿಜಿಟಲ್ ಕರೆನ್ಸಿ ತಪ್ಪು ಕೈಗಳ ವಶವಾಗಿ ನಮ್ಮ ದೇಶದ ಯವಜನತೆ ಹಾಳಾಗದಂತೆ ನೋಡಿಕೊಳ್ಳಬೇಕು ಎಂದರು.
ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಸಂಪನ್ಮೂಲಗಳ ಪರಿವರ್ತನೆ ಮತ್ತು ಜೀವವೈವಿಧ್ಯದ ರಕ್ಷಣೆಗಾಗಿ ತಂತ್ರಜ್ಞಾನವನ್ನು ಬಳಸಿಕೊಂಡು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ ಎಂದು ಹೇಳಿದರು.

ಕಳೆದ ವಾರ, ಪ್ರಧಾನಿ ಮೋದಿ ಅವರು ದೇಶದಲ್ಲಿ ಎದ್ದಿರುವ ಬಿಟ್‌ಕಾಯಿನ್‌ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದರು. ಭಾರತದಲ್ಲಿನ ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆ ಮತ್ತು ಅದರಿಂದ ಯುವಜನತೆ ಹಾಳಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದರು.

ಸಭೆಯಲ್ಲಿ ಅಂದು ಡಿಜಿಟಲ್ ಕರೆನ್ಸಿ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಲಾಗಿತ್ತು. ಆರ್‌ಬಿಐ, ಹಣಕಾಸು ಸಚಿವಾಲಯ, ಗೃಹ ಸಚಿವಾಲಯವು ಅದರ ಬಗ್ಗೆ ವಿಸ್ತಾರವಾದ ಪರಿಶೀಲನೆ ಮಾಡುತ್ತಿದೆ. ದೇಶ ಮತ್ತು ಪ್ರಪಂಚದಾದ್ಯಂತದ ತಜ್ಞರ ಜೊತೆ ಕೂಡ ಸಮಾಲೋಚನೆ ನಡೆಸಿದ್ದರು.

ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆಗಳು ಅಕ್ರಮ ಹಣ ವರ್ಗಾವಣೆ ಮತ್ತು ಭಯೋತ್ಪಾದಕರಿಗೆ ಹಣಕಾಸು ಒದಗಿಸುವ ಮಾರ್ಗಗಳಾಗಲು ಬಿಡಬಾರದು ಎಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಚರ್ಚಿಸಲಾಗಿತ್ತು.

ಚಳಿಗಾಲ ಅಧಿವೇಶನದಲ್ಲಿ ಮಸೂದೆ ಮಂಡನೆ?: ಈ ತಿಂಗಳ 29ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅದರಲ್ಲಿ ಸರ್ಕಾರ ಕ್ರಿಪ್ಟೊಕರೆನ್ಸಿಗೆ ಸಂಬಂಧಪಟ್ಟ ಮಸೂದೆ ಮಂಡಿಸುವ ಸಾಧ್ಯತೆಯಿದೆ.

Spread the love
  • Related Posts

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಧರ್ಮಸ್ಥಳ: ಧರ್ಮಸ್ಥಳ ಕಡೆಯಿಂದ ಬೆಂಗಳೂರಿನತ್ತ ಸಾಗುತ್ತಿದ್ದ ಟಾಟಾ ಸಫಾರಿ ಕಾರು ಹಾಗೂ ಕುಕ್ಕೆ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಬರುತ್ತಿದ್ದ ಸರ್ಕಾರಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಇಂದು ಕೊಕ್ಕಡ ಸಮೀಪ ನಡೆದಿದೆ. ಅಪಘಾತದ ತೀವ್ರತೆಗೆ ಬಸ್ ಹಾಗೂ ಕಾರು ಸಂಪೂರ್ಣ…

    Spread the love

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ರಂಜನ್ ರಾವ್ ಯರ್ಡೂರು ಸುಪ್ರಿಂ ಕೋರ್ಟ್ ನಲ್ಲಿ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಾಲಯ ದೂರುದಾರರು ನೀಡಿದ ಈ ದೂರು ಆಧಾರ ರಹಿತವಾಗಿದೆ ಎಂದು, ದಾವೆಯನ್ನು ಪ್ರಾಥಮಿಕ ಹಂತದಲ್ಲೇ ವಜಾಗೊಳಿಸಿದೆ. ಶ್ರೀ ಕ್ಷೇತ್ರ…

    Spread the love

    You Missed

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 2 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 8 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 14 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 13 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    • By admin
    • September 3, 2026
    • 9 views
    ಧರ್ಮಸ್ಥಳ ಕೊಕ್ಕಡ ಹೆದ್ದಾರಿ ಬದಿಯಲ್ಲಿ ಕಾಡಾನೆ ಪ್ರತ್ಯಕ್ಷ, ವಾಹನ ಸವಾರರು ಮುನ್ನೆಚ್ಚರಿಕೆ ವಹಿಸುವುದು ಸೂಕ್ತ

    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ

    • By admin
    • September 3, 2026
    • 11 views
    APK ಬಳಿಕ .IMG, .ISO ಫೈಲ್‌ಗಳ ಮೂಲಕ ಸೈಬರ್ ದಾಳಿ; WhatsApp Web ಬಳಕೆದಾರರಿಗೆ ಎಚ್ಚರಿಕೆ