ಬಿಟ್ ಕಾಯಿನ್, ಕ್ರಿಪ್ಟೊಕರೆನ್ಸಿ ಯುವಕರನ್ನು ಹಾಳು ಮಾಡದಂತೆ ನೋಡಿಕೊಳ್ಳಲು ಪ್ರಜಾಪ್ರಭುತ್ವ ರಾಷ್ಟ್ರಗಳು ಒಂದಾಗಬೇಕು: ಪ್ರಧಾನಿ ಮೋದಿ ಕರೆ

ನವದೆಹಲಿ: ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಕ್ರಿಪ್ಟೊಕರೆನ್ಸಿಗಳ ಮೇಲೆ ಒಟ್ಟಾಗಿ ಕೆಲಸ ಮಾಡಬೇಕೆಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಅವರು ಇಂದು ವರ್ಚುವಲ್ ಮೂಲಕ ಭಾರತ-ಸಿಡ್ನಿ ಮಾತುಕತೆಯನ್ನುದ್ದೇಶಿಸಿ ಮಾತನಾಡಿ, ಲಕ್ಷಾಂತರ ಭಾರತೀಯರು ಡಿಜಿಟಲ್ ಕರೆನ್ಸಿಯಲ್ಲಿ ಹೂಡಿಕೆ ಮಾಡುತ್ತಿರುವಾಗ ಸಾಗರೋತ್ತರ ಹೂಡಿಕೆಗಳನ್ನು ನಿರ್ವಹಿಸಲು ನಿಯಂತ್ರಣಾ ಚೌಕಟ್ಟಿನ ಅಗತ್ಯತೆ ಬಗ್ಗೆ ಸರ್ಕಾರ ಪರಿಗಣಿಸುತ್ತಿದೆ ಎಂದು ಹೇಳಿದರು.

ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ. ಬಿಟ್‌ಕಾಯಿನ್‌ ಅಥವಾ ಕ್ರಿಪ್ಟೊಕರೆನ್ಸಿ ಉದಾಹರಣೆಯನ್ನೇ ತೆಗೆದುಕೊಳ್ಳಿ, ಕ್ರಿಪ್ಟೋಕರೆನ್ಸಿಯ ವಿಷಯದಲ್ಲಿ ಎಲ್ಲಾ ಪ್ರಜಾಪ್ರಭುತ್ವ ರಾಷ್ಟ್ರಗಳು ಒಟ್ಟಾಗಿ ಕೆಲಸ ಮಾಡಬೇಕು. ಡಿಜಿಟಲ್ ಕರೆನ್ಸಿ ತಪ್ಪು ಕೈಗಳ ವಶವಾಗಿ ನಮ್ಮ ದೇಶದ ಯವಜನತೆ ಹಾಳಾಗದಂತೆ ನೋಡಿಕೊಳ್ಳಬೇಕು ಎಂದರು.
ಭಾರತದ ಉದ್ಯಮ ಮತ್ತು ಸೇವಾ ಕ್ಷೇತ್ರಗಳು ಸಂಪನ್ಮೂಲಗಳ ಪರಿವರ್ತನೆ ಮತ್ತು ಜೀವವೈವಿಧ್ಯದ ರಕ್ಷಣೆಗಾಗಿ ತಂತ್ರಜ್ಞಾನವನ್ನು ಬಳಸಿಕೊಂಡು ಬೃಹತ್ ಡಿಜಿಟಲ್ ರೂಪಾಂತರಕ್ಕೆ ಒಳಗಾಗುತ್ತಿವೆ ಎಂದು ಹೇಳಿದರು.

ಕಳೆದ ವಾರ, ಪ್ರಧಾನಿ ಮೋದಿ ಅವರು ದೇಶದಲ್ಲಿ ಎದ್ದಿರುವ ಬಿಟ್‌ಕಾಯಿನ್‌ ವ್ಯವಹಾರಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಚರ್ಚಿಸಲು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದರು. ಭಾರತದಲ್ಲಿನ ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆ ಮತ್ತು ಅದರಿಂದ ಯುವಜನತೆ ಹಾಳಾಗಬಹುದು ಎಂದು ಕಳವಳ ವ್ಯಕ್ತಪಡಿಸಿದ್ದರು.

ಸಭೆಯಲ್ಲಿ ಅಂದು ಡಿಜಿಟಲ್ ಕರೆನ್ಸಿ ಬಗ್ಗೆ ಸಮಗ್ರವಾಗಿ ಸಮಾಲೋಚನೆ ನಡೆಸಲಾಗಿತ್ತು. ಆರ್‌ಬಿಐ, ಹಣಕಾಸು ಸಚಿವಾಲಯ, ಗೃಹ ಸಚಿವಾಲಯವು ಅದರ ಬಗ್ಗೆ ವಿಸ್ತಾರವಾದ ಪರಿಶೀಲನೆ ಮಾಡುತ್ತಿದೆ. ದೇಶ ಮತ್ತು ಪ್ರಪಂಚದಾದ್ಯಂತದ ತಜ್ಞರ ಜೊತೆ ಕೂಡ ಸಮಾಲೋಚನೆ ನಡೆಸಿದ್ದರು.

ಅನಿಯಂತ್ರಿತ ಕ್ರಿಪ್ಟೋ ಮಾರುಕಟ್ಟೆಗಳು ಅಕ್ರಮ ಹಣ ವರ್ಗಾವಣೆ ಮತ್ತು ಭಯೋತ್ಪಾದಕರಿಗೆ ಹಣಕಾಸು ಒದಗಿಸುವ ಮಾರ್ಗಗಳಾಗಲು ಬಿಡಬಾರದು ಎಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಚರ್ಚಿಸಲಾಗಿತ್ತು.

ಚಳಿಗಾಲ ಅಧಿವೇಶನದಲ್ಲಿ ಮಸೂದೆ ಮಂಡನೆ?: ಈ ತಿಂಗಳ 29ರಿಂದ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅದರಲ್ಲಿ ಸರ್ಕಾರ ಕ್ರಿಪ್ಟೊಕರೆನ್ಸಿಗೆ ಸಂಬಂಧಪಟ್ಟ ಮಸೂದೆ ಮಂಡಿಸುವ ಸಾಧ್ಯತೆಯಿದೆ.

Spread the love
  • Related Posts

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಗುರುವಾಯನಕೆರೆ–ವೇಣೂರು ಮುಖ್ಯರಸ್ತೆಯ ಪಡಂಗಡಿ ಭಾಗದಲ್ಲಿ ಇತ್ತೀಚಿನ ಭಾರೀ ಮಳೆಯಿಂದ ರಸ್ತೆ ಹದಗೆಟ್ಟು ಸಾರ್ವಜನಿಕರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುತ್ತಿದ್ದರು. ಈ ಕುರಿತು ಶಾಸಕ ಶ್ರೀ ಹರೀಶ್ ಪೂಂಜ ಅವರ ಮುತುವರ್ಜಿಯಿಂದ ಸ್ಥಳವನ್ನು ಪರಿಶೀಲಿಸಿ, ಸಾರ್ವಜನಿಕರ…

    Spread the love

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಬೆಳ್ತಂಗಡಿ: ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ಸಂಪರ್ಕ ರಸ್ತೆ ಕಳೆದ ಹಲವು ದಶಕಗಳಿಂದ ಅಭಿವೃದ್ಧಿಯ ನಿರೀಕ್ಷೆಯಲ್ಲೇ ಉಳಿದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು 200ಕ್ಕೂ ಹೆಚ್ಚು ಮನೆಗಳಿಗೆ ಪ್ರಮುಖ ಸಂಪರ್ಕ ಕಲ್ಪಿಸುವ 6 ಕಿಲೋಮೀಟರ್ ಉದ್ದದ ಈ ರಸ್ತೆಗೆ ಸಮರ್ಪಕ…

    Spread the love

    You Missed

    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    • By admin
    • July 29, 2026
    • 6 views
    ಬೆಳ್ತಂಗಡಿ: ಗುರುವಾಯನಕೆರೆ-ವೇಣೂರಿನ  ಹದಗೆಟ್ಟ ರಸ್ತೆಯ ತುರ್ತು ದುರಸ್ತಿ ಕಾರ್ಯ, ಶಾಸಕರ ತುರ್ತು ಸ್ಪಂದನೆ

    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    • By admin
    • July 29, 2026
    • 6 views
    30 ವರ್ಷಗಳಿಂದ ಶಾಪಗ್ರಸ್ತವಾಗಿರುವ ಮುಂಡಾಜೆ ಗ್ರಾಮದ ಸೀಟು–ಕಾಯರ್ತೋಡಿ–ಕೊಡಂಗೆ–ಮೂಲಾರು ಕುಡೆಂಚಿ ರಸ್ತೆ: ಚುನಾವಣೆ ಬಂದಾಗ ಶಿಲಾನ್ಯಾಸ, ಬಳಿಕ ಮರೆತುಬಿಡುವ ಆರೋಪ

    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    • By admin
    • July 25, 2026
    • 11 views
    ಸಕಲೇಶಪುರ: ಅಕ್ರಮ ಭೂ ಮಂಜೂರಾತಿ ಹಗರಣ – ಬಂಧನ ಭೀತಿಯಿಂದ ನೂರಕ್ಕೂ ಹೆಚ್ಚು ಅಧಿಕಾರಿಗಳು ಸಾಮೂಹಿಕ ರಜೆ!

    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    • By admin
    • July 24, 2026
    • 7 views
    ಕಲ್ಪವೃಕ್ಷ ಜ್ಞಾನ ವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕೆ: ಆರೋಗ್ಯಕರ ಜೀವನಕ್ಕೆ ಸಮತೋಲಿತ ಆಹಾರ ಹಾಗೂ ಸ್ವಚ್ಛತೆ ಅಗತ್ಯ – ಡಾ. ನಿಶ್ಚಯ್ ಎಚ್.ಎನ್.

    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 24, 2026
    • 8 views
    ಕರಾವಳಿಯಲ್ಲಿ ಮುಂದುವರಿದ ಮಳೆ, ಉಡುಪಿ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

    • By admin
    • July 23, 2026
    • 9 views
    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಹಿನ್ನೆಲೆಯಲ್ಲಿ ಶುಕ್ರವಾರ 24ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ