ಮೋದಿ ಜಪ ಬಿಡಿ : ನಿಮ್ಮ ತಪ್ಪು ತಿದ್ದಿಕೊಂಡು ಎಲೆಕ್ಷನ್ ಸಿದ್ಧವಾಗಿ : ಶಾಸಕರಿಗೆ ಬಿ.ಎಲ್. ಸಂತೋಷ್ ವಾರ್ನಿಂಗ್!

ಬೆಂಗಳೂರು : ಕೇವಲ ಮೋದಿ ಹೆಸರಿನ ಜಪ ಮಾಡುತ್ತ ಚುನಾವಣೆ ಗೆಲ್ಲೋ ಕನಸಿನಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹಾಗೂ ಶಾಸಕರುಗಳಿಗೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕಾರಿಣಿ ವೇಳೆ ಚುನಾವಣಾ ಪೂರ್ವಸಿದ್ಧತೆ ನಡೆಸುವಂತೆ ಕಿವಿಮಾತು ಹೇಳಿದ ಬಿ.ಎಲ್.ಸಂತೋಷ್ ಶಾಸಕರು,ಸಚಿವರನ್ನು ಅಲರ್ಟ್ ಮಾಡಿ ಬಿಸಿ ಮುಟ್ಟಿಸಿದ್ದಾರೆ.

ನಿಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಚುನಾವಣೆಗೆ ತಯಾರಾಗಿ ಲೋಪ ಸರಿಪಡಿಸಿಕೊಂಡು ಚುನಾವಣೆಗೆ ತಯಾರಾಗಿ ಆಡಳಿತ ವಿರೋಧಿ ಅಲೆ ಎದುರಿಸಲು ಸಜ್ಜಾಗಿ, ಪಂಚ ರಾಜ್ಯಗಳ ಚುನಾವಣೆ ಯಲ್ಲೂ ಸಾಕಷ್ಟು ಆಡಳಿತ ವಿರೋಧಿ ಅಲೆ ಇತ್ತು. ಆದರೆ ಅದನ್ನು ಗೆಲುವಾಗಿ ಪರಿವರ್ತಿಸುವಲ್ಲಿ ಪಕ್ಷ ಯಶಸ್ವಿ ಯಾಗಿದೆ. ಅದೇ ರೀತಿ ಇಲ್ಲೂ ಆಡಳಿತ ವಿರೋಧಿ ಅಲೆ ಎದುರಿಸಿ, ಪಕ್ಷ ಗೆಲ್ಲುವ ರೀತಿ ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದ್ದಾರೆ . ಮಾತ್ರವಲ್ಲ ಕೇವಲ ಚುನಾವಣೆಗೆ ಕೇವಲ ಮೋದಿ ಹೆಸರು ಜಪ ಮಾಡ್ತಿದ್ರೇ ಸಾಲದು, ಚುನಾವಣೆಗೆ ಗೆಲ್ಲಲು ನಿಮ್ಮ ಲೋಪ ಸರಿಪಡಿಸಿಕೊಳ್ಳಿ. ಅದನ್ನು ಸರಿಪಡಿಸಲು ಈಗಿನಿಂದಲೇ ಮಾರ್ಗಗಳನ್ನು ಪತ್ತೆ ಹಚ್ಚಿ ಪಕ್ಷದ ಪ್ರಭಾರಿಗಳು ಮತ್ತು ಸಹ ಪ್ರಭಾರಿಗಳು ವಿಧಾನಸಭೆ ಕ್ಷೇತ್ರದಲ್ಲಿನ ವೀಕ್ ಪತ್ತೆ ಹಚ್ಚಿ ಅದರ ಬಗ್ಗೆ ರಾಜ್ಯಾಧ್ಯಕ್ಷರಿಗೆ ವರದಿ ನೀಡಿ ಎಂದು ಸೂಚಿಸಿದ್ದಾರೆ.

ಮಾತ್ರವಲ್ಲ ವಿಶ್ವದಲ್ಲಿ ಭಾರತದ ಕುರಿತು ಒಳ್ಳೆಯ ಅಭಿಪ್ರಾಯ ಇದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯ ನಾಯಕತ್ವವೇ ಕಾರಣ. ಅವರ ವಿದೇಶಾಂಗ ನೀತಿಯಿಂದ ವಿಶ್ಚವೇ ಭಾರತ ವನ್ನು ತಿರುಗಿ ನೋಡುವಂತೆ ಮಾಡಿದೆ. ಹೀಗಾಗಿ ಪ್ರಧಾನಿಗಳ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆ ಜನರಿಗೆ ತಲುಪಿಸಿ. ಅಭಿವೃದ್ಧಿ ಕಾರ್ಯಗಳ ಮೂಲಕ ಮತದಾರರ ಸೆಳೆಯುವ ಪ್ರಯತ್ನ ಮಾಡಿ ಎಂದು ಅಲರ್ಟ್ ಮಾಡಿದ್ದಾರೆ.

ಇನ್ನೂ ತಮ್ಮ ಮಾತಿನುದ್ದಕ್ಕೂ ಬಿ.ಎಲ್.ಸಂತೋಷ್, ಇನ್ಮುಂದೆ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ‌ ಅಲ್ಲದೇ ಶಿಸ್ತು ಮೀರಿದರೆ ಸಹಿಸುವುದಿಲ್ಲ. ಪಕ್ಷದಲ್ಲಿ ಅಶಿಸ್ತು ಉಂಟು ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು, ಶಾಸಕರು, ಸಚಿವರು, ಮುಖ್ಯಮಂತ್ರಿ ಯಾರೇ ಆಗಿದ್ದರೂ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವಂತೆ ನಡೆದುಕೊಂಡರೆ ಪಕ್ಷ ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಹ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಎಚ್ಚರಿಸಿದ್ದರು.

Spread the love
  • Related Posts

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    Belthangady: ತಾಲೂಕಿನ ಹಲವೆಡೆ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ.Shishila, Kokkada, Dharmasthala, Arasinamakki, Ujire ಹಾಗೂ Nidle ಮೊದಲಾದ ಕಡೆಗಳಲ್ಲಿ ಗುಡುಗು-ಸಿಡಿಲು ಸಹಿತ ಉತ್ತಮ ಮಳೆ ಸುರಿದಿದೆ. ಉಳಿದ ಕೆಲವು ಪ್ರದೇಶಗಳಲ್ಲಿ ತುಂತುರು ಹಾಗೂ ಸಾಮಾನ್ಯ ಮಳೆಯಾಗಿದೆ.ತಾಲೂಕಿನಲ್ಲಿ ಫೆಬ್ರವರಿ 21ರಂದು ಕೆಲವೆಡೆ…

    Spread the love

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಬಂಗಾಡಿ: ಸೂರ್ಯ-ಚಂದ್ರ ಹೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಕಂಬಳ ಅಸೋಸಿಯೇಶನ್, ಕರ್ನಾಟಕ ಸರಕಾರ ಮತ್ತು ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಭಾಗಿತ್ವದೊಂದಿಗೆ 28ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ “ಬಂಗಾಡಿ ಕೊಲ್ಲಿ” ಬಯಲು ಕಂಬಳವು ಶ್ರೀ…

    Spread the love

    You Missed

    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    • By admin
    • March 15, 2026
    • 49 views
    ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು-ಸಿಡಿಲು ಸಹಿತ ಮಳೆ: ನಿಡ್ಲೆ–ಕಳೆಂಜ ರಸ್ತೆಯಲ್ಲಿ ಮರ ಬಿದ್ದು ವಿದ್ಯುತ್ ಲೈನ್ ಹಾನಿ

    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    • By admin
    • March 14, 2026
    • 86 views
    “ಬಂಗಾಡಿ ಕೊಲ್ಲಿ” 28ನೇ ವರ್ಷದ ‘ಸೂರ್ಯ – ಚಂದ್ರ’ ಜೋಡುಕರೆ ಕಂಬಳ

    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    • By admin
    • March 14, 2026
    • 36 views
    ಹಾವು ಕಡಿತಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರೆಗುಡ್ಡೆಯ ಮಹೇಶ್ ಮನೆಗೆ  ಡಿ.ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    • By admin
    • March 13, 2026
    • 605 views
    KSRTC ಬಸ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಮೂವರು ಸಾವು

    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    • By admin
    • March 10, 2026
    • 148 views
    ಎಕ್ಸೆಲ್ ಪಿ.ಯು ಕಾಲೇಜಿನಲ್ಲಿ ಎಲೆಕ್ಟ್ರಿಷಿಯನ್ ಮತ್ತು ಪ್ಲಂಬರ್ ಹುದ್ದೆಗಳಿಗೆ  ಅರ್ಜಿ ಆಹ್ವಾನ

    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ

    • By admin
    • March 10, 2026
    • 62 views
    ಗುರುವಾಯನಕೆರೆ ಎಕ್ಸೆಲ್ ಟೆಕ್ ಶಾಲೆಯಲ್ಲಿ ಕೆ.ಜಿ ಮಕ್ಕಳ ಘಟಿಕೋತ್ಸವ