ಮೋದಿ ಜಪ ಬಿಡಿ : ನಿಮ್ಮ ತಪ್ಪು ತಿದ್ದಿಕೊಂಡು ಎಲೆಕ್ಷನ್ ಸಿದ್ಧವಾಗಿ : ಶಾಸಕರಿಗೆ ಬಿ.ಎಲ್. ಸಂತೋಷ್ ವಾರ್ನಿಂಗ್!

ಬೆಂಗಳೂರು : ಕೇವಲ ಮೋದಿ ಹೆಸರಿನ ಜಪ ಮಾಡುತ್ತ ಚುನಾವಣೆ ಗೆಲ್ಲೋ ಕನಸಿನಲ್ಲಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಹಾಗೂ ಶಾಸಕರುಗಳಿಗೆ ಬಿಜೆಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಕಾರಿಣಿ ವೇಳೆ ಚುನಾವಣಾ ಪೂರ್ವಸಿದ್ಧತೆ ನಡೆಸುವಂತೆ ಕಿವಿಮಾತು ಹೇಳಿದ ಬಿ.ಎಲ್.ಸಂತೋಷ್ ಶಾಸಕರು,ಸಚಿವರನ್ನು ಅಲರ್ಟ್ ಮಾಡಿ ಬಿಸಿ ಮುಟ್ಟಿಸಿದ್ದಾರೆ.

ನಿಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಚುನಾವಣೆಗೆ ತಯಾರಾಗಿ ಲೋಪ ಸರಿಪಡಿಸಿಕೊಂಡು ಚುನಾವಣೆಗೆ ತಯಾರಾಗಿ ಆಡಳಿತ ವಿರೋಧಿ ಅಲೆ ಎದುರಿಸಲು ಸಜ್ಜಾಗಿ, ಪಂಚ ರಾಜ್ಯಗಳ ಚುನಾವಣೆ ಯಲ್ಲೂ ಸಾಕಷ್ಟು ಆಡಳಿತ ವಿರೋಧಿ ಅಲೆ ಇತ್ತು. ಆದರೆ ಅದನ್ನು ಗೆಲುವಾಗಿ ಪರಿವರ್ತಿಸುವಲ್ಲಿ ಪಕ್ಷ ಯಶಸ್ವಿ ಯಾಗಿದೆ. ಅದೇ ರೀತಿ ಇಲ್ಲೂ ಆಡಳಿತ ವಿರೋಧಿ ಅಲೆ ಎದುರಿಸಿ, ಪಕ್ಷ ಗೆಲ್ಲುವ ರೀತಿ ಪಕ್ಷ ಸಂಘಟನೆಗೆ ತೊಡಗಿಸಿಕೊಳ್ಳಿ ಎಂದು ಕಿವಿ ಮಾತು ಹೇಳಿದ್ದಾರೆ . ಮಾತ್ರವಲ್ಲ ಕೇವಲ ಚುನಾವಣೆಗೆ ಕೇವಲ ಮೋದಿ ಹೆಸರು ಜಪ ಮಾಡ್ತಿದ್ರೇ ಸಾಲದು, ಚುನಾವಣೆಗೆ ಗೆಲ್ಲಲು ನಿಮ್ಮ ಲೋಪ ಸರಿಪಡಿಸಿಕೊಳ್ಳಿ. ಅದನ್ನು ಸರಿಪಡಿಸಲು ಈಗಿನಿಂದಲೇ ಮಾರ್ಗಗಳನ್ನು ಪತ್ತೆ ಹಚ್ಚಿ ಪಕ್ಷದ ಪ್ರಭಾರಿಗಳು ಮತ್ತು ಸಹ ಪ್ರಭಾರಿಗಳು ವಿಧಾನಸಭೆ ಕ್ಷೇತ್ರದಲ್ಲಿನ ವೀಕ್ ಪತ್ತೆ ಹಚ್ಚಿ ಅದರ ಬಗ್ಗೆ ರಾಜ್ಯಾಧ್ಯಕ್ಷರಿಗೆ ವರದಿ ನೀಡಿ ಎಂದು ಸೂಚಿಸಿದ್ದಾರೆ.

ಮಾತ್ರವಲ್ಲ ವಿಶ್ವದಲ್ಲಿ ಭಾರತದ ಕುರಿತು ಒಳ್ಳೆಯ ಅಭಿಪ್ರಾಯ ಇದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯ ನಾಯಕತ್ವವೇ ಕಾರಣ. ಅವರ ವಿದೇಶಾಂಗ ನೀತಿಯಿಂದ ವಿಶ್ಚವೇ ಭಾರತ ವನ್ನು ತಿರುಗಿ ನೋಡುವಂತೆ ಮಾಡಿದೆ. ಹೀಗಾಗಿ ಪ್ರಧಾನಿಗಳ ಕಾರ್ಯಗಳ ಬಗ್ಗೆ ಜನರಿಗೆ ತಿಳಿಸಿ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆ ಜನರಿಗೆ ತಲುಪಿಸಿ. ಅಭಿವೃದ್ಧಿ ಕಾರ್ಯಗಳ ಮೂಲಕ ಮತದಾರರ ಸೆಳೆಯುವ ಪ್ರಯತ್ನ ಮಾಡಿ ಎಂದು ಅಲರ್ಟ್ ಮಾಡಿದ್ದಾರೆ.

ಇನ್ನೂ ತಮ್ಮ ಮಾತಿನುದ್ದಕ್ಕೂ ಬಿ.ಎಲ್.ಸಂತೋಷ್, ಇನ್ಮುಂದೆ ಪಕ್ಷದಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ‌ ಅಲ್ಲದೇ ಶಿಸ್ತು ಮೀರಿದರೆ ಸಹಿಸುವುದಿಲ್ಲ. ಪಕ್ಷದಲ್ಲಿ ಅಶಿಸ್ತು ಉಂಟು ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತನಿಂದ ಹಿಡಿದು, ಶಾಸಕರು, ಸಚಿವರು, ಮುಖ್ಯಮಂತ್ರಿ ಯಾರೇ ಆಗಿದ್ದರೂ ಪಕ್ಷದ ವರ್ಚಸ್ಸಿಗೆ ಧಕ್ಕೆ ಬರುವಂತೆ ನಡೆದುಕೊಂಡರೆ ಪಕ್ಷ ಸಹಿಸುವುದಿಲ್ಲ ಎಂದು ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ಇತ್ತೀಚಿಗಷ್ಟೇ ಪ್ರಧಾನಿ ನರೇಂದ್ರ ಮೋದಿಯವರು ಸಹ ಮುಂದಿನ ದಿನಗಳಲ್ಲಿ ಬಿಜೆಪಿಯಲ್ಲಿ ಕುಟುಂಬ ರಾಜಕಾರಣಕ್ಕೆ ಅವಕಾಶವಿಲ್ಲ ಎಂದು ಎಚ್ಚರಿಸಿದ್ದರು.

Spread the love
  • Related Posts

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಕಾನರ್ಪ ನೂಜಿ ರಸ್ತೆಯಲ್ಲಿ ತಡರಾತ್ರಿ ರಸ್ತೆ ಮಧ್ಯೆ ಲಾರಿ ಬಾಕಿ; ಸ್ಥಳೀಯರಿಂದ ಪ್ರತಿಭಟನೆ ಕಡಿರುದ್ಯಾವರ: ಗ್ರಾಮೀಣ ಪ್ರದೇಶದ ರಸ್ತೆಗಳಲ್ಲಿ ನಿರಂತರವಾಗಿ ಮರ ಸಾಗಾಟದ ಲಾರಿಗಳು ಸಂಚರಿಸುತ್ತಿರುವುದರಿಂದ ರಸ್ತೆಗಳು ಸಂಪೂರ್ಣ ಹಾಳಾಗುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಕಾನರ್ಪದಲ್ಲಿ ತಡರಾತ್ರಿ ಮರ ಸಾಗಾಟ ಮಾಡುತ್ತಿದ್ದ…

    Spread the love

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಪದ್ಮುಂಜ: ಸೆ 12 ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ, ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ವಠಾರದಲ್ಲಿ ವಿಜೃಂಭಣೆಯಿಂದ ನೆರವೇರಿತು.ಬೆಳಗ್ಗೆ ಉಮಾಮಹೇಶ್ವರ ಮಹಿಳಾ ಭಜನಾ ತಂಡ,…

    Spread the love

    You Missed

    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    • By admin
    • September 13, 2026
    • 6 views
    ಕಡಿರುದ್ಯಾವರ: ಗ್ರಾಮೀಣ ರಸ್ತೆಯಲ್ಲಿ ಮರ ಸಾಗಾಟದ ಲಾರಿಗಳ ಹಾವಳಿ — ರಸ್ತೆ ಹಾಳಾಗುತ್ತಿರುವ ಆರೋಪ

    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    • By admin
    • September 13, 2026
    • 11 views
    ಪದ್ಮುಂಜ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿ ವತಿಯಿಂದ ಮೊಸರು ಕುಡಿಕೆ ಉತ್ಸವ, ಸಾಧಕರಿಗೆ ಸನ್ಮಾನ,ಬಹುಮಾನ ವಿತರಣೆ ಕಾರ್ಯಕ್ರಮ

    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    • By admin
    • September 12, 2026
    • 6 views
    ಕೊಕ್ಕಡ ಸಮೀಪ ಭೀಕರ ಅಪಘಾತ: ಸರ್ಕಾರಿ ಬಸ್–ಕಾರು ಡಿಕ್ಕಿ

    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    • By admin
    • September 8, 2026
    • 12 views
    ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ದ ಆರೋಪ ಆಧಾರರಹಿತ: ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ವಜಾ

    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    • By admin
    • September 8, 2026
    • 18 views
    ಧರ್ಮ–ಸಂಸ್ಕೃತಿಯ ಸಾರ ಹೊತ್ತು ವಿಜೃಂಭಿಸಿದ ಚಿರಂಜೀವಿಯ 35ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ

    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು

    • By admin
    • September 3, 2026
    • 15 views
    ಬೆಳಾಲಿನಲ್ಲಿ ರಸ್ತೆಯ ಮಧ್ಯೆ ಕಾಡಾನೆ ಪ್ರತ್ಯಕ್ಷ: ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರು