ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಬಡಿಸಲು ಆಮೆಗಳ ಬೇಟೆ, ಆಮೆಗಳ ಸಹಿತ ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಬೆಳ್ತಂಗಡಿ : ವಯೋಸಹಜ ಕಾಯಿಲೆಯಿಂದ ಮೃತಪಟ್ಟ ಅಜ್ಜಿಯ ತಿಥಿ ಕಾರ್ಯಕ್ರಮಕ್ಕೆ ಪದಾರ್ಥ ಮಾಡಿ ಬಡಿಸಲು ಅಜ್ಜಿಗೆ ಇಷ್ಟವಾದ ಆಮೆಯನ್ನು ಸಂಬಂಧಿಕರು ನದಿಯಲ್ಲಿ ಅಕ್ರಮವಾಗಿ ಬೇಟೆಯಾಡಿ ಮಾಂಸ ಮಾಡಲು ಪ್ರಯತ್ನಿಸುತ್ತಿದ್ದಾಗ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ನಾಲ್ಕು ಆಮೆ ಸಮೇತ ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ನಗರದ ಸೋಮವತಿ ನದಿಯಲ್ಲಿ ಅಕ್ರಮವಾಗಿ ನಾಲ್ಕು ಆಮೆಯನ್ನು ಬೇಟೆಯಾಡಿ ನದಿ ಬದಿಯಲ್ಲಿ ಮಾಂಸ ಮಾಡಲು ಪ್ರಯತ್ನಿಸುತ್ತಿರುವಾಗ ಫೆ.14 ರಂದು ಸಂಜೆ 3:30 ರ ಸುಮಾರಿಗೆ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ತಂಡ ದಾಳಿ ಮಾಡಿ ನಾಲ್ಕು ಮಂದಿಯನ್ನು ವಶಕ್ಕೆ ಪಡೆದು ಅವರ ಬಳಿ ಇದ್ದ ನಾಲ್ಕು ಸುಟ್ಟ ಆಮೆಯನ್ನು ಜಪ್ತಿ ಮಾಡಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರ ಮಾಡಿದ್ದಾರೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಯವರು ಫೆ‌.14 ರಂದು ಸಂಜೆ ಬೆಳ್ತಂಗಡಿ ಪೊಲೀಸರಿಂದ ಮಹಜರು ಮಾಡಿ ನಾಲ್ಕು ಸುಟ್ಟಿರುವ ಆಮೆಗಳು ಮತ್ತು ನಾಲ್ಕು ಮಂದಿ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಬದಿಯಡ್ಕ ಅಂಚೆ,ಪೆರ್ಡಲ್ ಗ್ರಾಮದ ನಿರ್ಜಲ್ ನಿವಾಸಿ ಮಣಿಕಂಠ(42), ಮಂಗಳೂರು ನಗರದ ಮುಲ್ಕಿ ತಾಲೂಕಿನ ನೆಲ್ಲಿಗುಡ್ಡೆ ನಿವಾಸಿ ರಾಜೇಂದ್ರ(54), ಮೂಡಬಿದಿರೆ ತಾಲೂಕಿನ ಶಿರ್ತಾಡಿ ಗ್ರಾಮದ ಮಕ್ಕಿ ನಿವಾಸಿ ವಿಘ್ನೇಶ್(32), ಬೆಳ್ತಂಗಡಿ ತಾಲೂಕಿನ ಬಡಗಕಾರಂದೂರು ಗ್ರಾಮದ ನಿವಾಸಿ ಪ್ರಶಾಂತ್(35) ಎಂಬವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನಾಲ್ಕು ಮಂದಿ ಆರೋಪಿಗಳಾದ ಮಣಿಕಂಠ, ರಾಜೇಂದ್ರ, ವಿಘ್ನೇಶ್,ಪ್ರಶಾಂತ್ ಇವರು ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕಂಟಿನಿ ನಿವಾಸಿ ಸಂಬಂಧಿ ಅಜ್ಜಿಯಾದ ದೇವಮ್ಮ ಎಂಬವರ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಫೆ.13 ರಂದು ಆಗಮಿಸಿದ್ದರು. ಅಜ್ಜಿಯ ಪ್ರೀತಿಯ ಆಮೆ ಪದಾರ್ಥ ಮಾಡಿಕೊಂಡು ಬಂದು ತಿಥಿ ಕಾರ್ಯಕ್ರಮದಲ್ಲಿ ಬಡಿಸಲು ತಯಾರಿ ಮಾಡಲು ಫೆ.14 ರಂದು ಬೆಳ್ತಂಗಡಿಯ ಸೋಮವತಿ ನದಿಗೆ ಬೇಟೆಯಾಡಲು ಆಗಮಿಸಿ ನಾಲ್ಕು ಆಮೆ ಸಮೇತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಿ ಫೆ.14 ರಂದು ರಾತ್ರಿ ಬಿಡುಗಡೆ ಮಾಡಲಾಗಿದೆ.

ಬೆಳ್ತಂಗಡಿ ಉಪವಿಭಾಗದ ಡಿವೈಎಸ್ಪಿ ರೋಹಿನಿ.ಸಿ.ಕೆ ಮತ್ತು ಬೆಳ್ತಂಗಡಿ ಇನ್ಸ್‌ಪೆಕ್ಟರ್ ಬಿ.ಜಿ.ಸುಬ್ಬಾಪುರ ಮಠ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ನೇತೃತ್ವದ ಸಿಬ್ಬಂದಿ ಎಎಸ್ಐ ಕುಶಾಲಪ್ಪ, ಹೆಡ್ ಕಾನ್ಟೇಬಲ್ ಪ್ರಮೋದ್, ಪಂಪಾಪತಿ, ಪ್ರಕಾಶ್, ಶ್ವೇತಾ, ಸವಿತಾ ಹಾಗೂ ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ತ್ಯಾಗರಾಜ್, ಡಿ.ಆರ್.ಎಫ್.ಒ ಕಿರಣ್ ಪಾಟೀಲ್, ಸಂದೀಪ್, ಬೀಟ್ ಫಾರೆಸ್ಟರ್ ಪರಶುರಾಮ ಮೇಟಿ, ದಿವಕರ್ ಹಾಗೂ ವಾಹನ ಚಾಲಕ ಕುಶಲಪ್ಪ ಗೌಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.

Spread the love
  • Related Posts

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಬೆಳ್ತಂಗಡಿ: ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರ, ಕೃಷಿ ಪರಂಪರೆ ಹಾಗೂ ಗ್ರಾಮೀಣ ಬದುಕಿನ ವೈಶಿಷ್ಟ್ಯಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನಿಲ್ ಕುಮಾರ್…

    Spread the love

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಬೆಳ್ತಂಗಡಿ: ಆಧುನಿಕತೆಯ ಆಡಂಬರವಿಲ್ಲ… ಮೊಬೈಲ್ ನೆಟ್‌ವರ್ಕ್ ಇಲ್ಲ… ಸುಗಮ ಸಂಚಾರಕ್ಕೆ ಉತ್ತಮ ರಸ್ತೆಗಳಿಲ್ಲ. ಆದರೆ ಎದೆಯಾಳದಲ್ಲಿ ಅಖಂಡ ದೇಶಪ್ರೇಮವಿದೆ! ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ದುರ್ಗಮ ಮಲೆನಾಡಿನ ಕಾನನದ ನಡುವೆ ಇರುವ ಪುಟ್ಟ ಹಳ್ಳಿ ಬಾಂಜಾರುಮಲೆ. ಮತದಾನದಲ್ಲಿ…

    Spread the love

    You Missed

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    • By admin
    • August 23, 2026
    • 4 views
    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೆಸರ್‌ದ ಕಂಡೊಡೊಂಜಿ ದಿನ’ ಮುಂದಿನ ಪೀಳಿಗೆಗೆ ತುಳುನಾಡಿನ ಮೂಲ ಪರಂಪರೆ ಉಳಿಸುವ & ಪರಿಚಯಿಸುವ ಪ್ರಯತ್ನ: ಅನಿಲ್ ಕುಮಾರ್ ಎಸ್.ಎಸ್

    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    • By admin
    • August 20, 2026
    • 7 views
    ಅಪ್ರತಿಮ ದೇಶಪ್ರೇಮದ ಬಾಂಜಾರುಮಲೆ, ಕಾಡಿನ ಕತ್ತಲಲ್ಲೂ ಬೆಳಗಿದ ಸ್ವಾತಂತ್ರ್ಯದ ಜ್ಯೋತಿ — ಮತದಾನದಲ್ಲೂ ಶೇ.100, ದೇಶಭಕ್ತಿಯಲ್ಲೂ ಶೇ.100!

    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    • By admin
    • August 20, 2026
    • 13 views
    ಓ ಮಾನವರೇ, ಯಾವಾಗ ಬರುವುದೋ ಒಳ್ಳೆಯ ಬುದ್ಧಿ! “ಪ್ರಕೃತಿಯ ಮಡಿಲಲ್ಲಿ ಸ್ವಚ್ಛಂದವಾಗಿ ಬದುಕುವ ವಾನರಗಳಿಗೆ ಕುರುಕುರೆ ಏಕೆ?”

    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    • By admin
    • August 16, 2026
    • 10 views
    ನಾಗರಪಂಚಮಿ ಪ್ರಯುಕ್ತ ಸೋಮವಾರ ದ.ಕ. ಜಿಲ್ಲೆಗೆ ಸಾರ್ವತ್ರಿಕ ರಜೆ

    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    • By admin
    • August 15, 2026
    • 13 views
    ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ

    • By admin
    • August 14, 2026
    • 27 views
    ನೀಟ್‌ನಲ್ಲಿ ಅತ್ಯುತ್ತಮ ಸಾಧನೆ: ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ‘ಆರೋಗ್ಯ ರತ್ನ’ ಪ್ರಶಸ್ತಿ