ಬೆಳ್ತಂಗಡಿ ಕಡ್ಯಾರು ಸ್ಫೋಟದ ಬೆನ್ನಲ್ಲೇ ಎಚ್ಚೆತ್ತು ಕೊಂಡ ದ.ಕ ಜಿಲ್ಲಾಡಳಿತ ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಡುಮದ್ದು ತಯಾರಿಕಾ ಘಟಕಗಳನ್ನು ಸೀಲ್ ಡೌನ್ ಮಾಡಲು ಆದೇಶ

ಮಂಗಳೂರು: ದಿನಾಂಕ: 28-01-2024 ರಂದು ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ತಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಮೂವರು ಕಾರ್ಮಿಕರ ಜೀವ ಹಾನಿಯಾಗಿರುತ್ತದೆ ಹಾಗೂ ಸಮೀಪದ ಮನೆಯ ಅಸ್ತಿ ಪಾಸ್ತಿಗಳಿಗೂ ಅಪಾರ ಹಾನಿಯುಂಟಾಗಿರುತ್ತದೆ.

Explosive Act 1984 ಮತ್ತು Explosive Rules 2008 ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ LE -1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಕೆಳಗಿನಂತೆ ಆದೇಶಿಸಿದೆ.

ಆದೇಶ ಸಂಖ್ಯೆ: ARM CR 02/2022-23/C3 ದಿನಾಂಕ: 29-01-2024 ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಅನುಸಾರ ಡಾ|| ಆನಂದ್ ಕ, ಭಾ.ಅ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ತಣದಿಂದ ಜಾರಿಗೆ ಬರುವಂತ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಆದೇಶಿಸಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಮಂಗಳೂರು ಮತ್ತು ಪುತ್ತೂರು ರವರಿಗೆ ನಿರ್ದೇಶನ ನೀಡಿದೆ.

Spread the love
  • Related Posts

    ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

    Belthangady: ವಕೀಲರ ಸಂಘ ರಿ ಬೆಳ್ತಂಗಡಿ ಇದರ ವತಿಯಿಂದ ವಕೀಲರ ಭವನದಲ್ಲಿ ಮಾನ್ಯ ಪ್ರಧಾನ ಹಿರಿಯ ನ್ಯಾಯಾಧಿಶರಾದ ಶ್ರೀ ದೇವರಾಜು ಹೆಚ್ ಎಂ ರವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು. ಅಧ್ಯಕ್ಷತೆಯನ್ನು ವಸಂತ ಮರಕಡರವರು ವಹಿಸಿದ್ದರು. ಮುಖ್ಯ ಅಥಿತಿಗಳುಗಳಾಗಿ ಸಂದೇಶ್ ಕೆ ಜೆ…

    Spread the love

    ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

    ಡೆಂಗ್ಯೂ ರೋಗದಿಂದ ಆಗುವ ಅಪಾಯಗಳು ಹಾಗೂ ರೋಗ ಬಾರದಂತೆ ವಹಿಸಬೇಕಾದ ಎಚ್ಚರಿಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಡೆಂಗ್ಯೂ ದಿನವನ್ನು ಜಾರಿಗೆ ತರಲಾಗಿದೆ. ಹೀಗಾಗಿ ಪ್ರತಿ ವರ್ಷವೂ ಮೇ 16 ರಂದು ರಾಷ್ಟ್ರೀಯ ಡೆಂಗ್ಯೂ ದಿನವನ್ನು ಆಚರಿಸಲಾಗುತ್ತಿದೆ. ರಾಜ್ಯದಲ್ಲಿ ಡೆಂಗ್ಯೂವಿನ…

    Spread the love

    Leave a Reply

    Your email address will not be published. Required fields are marked *

    You Missed

    ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

    • By admin
    • May 18, 2024
    • 3 views
    ವಕೀಲರ ಸಂಘ ಬೆಳ್ತಂಗಡಿ ಇದರ ವತಿಯಿಂದ  ನ್ಯಾಯಾಧೀಶರಿಗೆ ಬೀಳ್ಕೊಡುಗೆ ಸಮಾರಂಭ

    ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

    • By admin
    • May 16, 2024
    • 20 views
    ಡೆಂಗ್ಯೂ ರೋಗದ ಲಕ್ಷಣಗಳು ಹಾಗೂ ಮುನ್ನೆಚ್ಚರಿಕೆ ಕ್ರಮಗಳು

    ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

    • By admin
    • March 11, 2024
    • 13 views
    ಕಾಟನ್‌ ಕ್ಯಾಂಡಿ ಬ್ಯಾನ್‌ : ಕರ್ನಾಟಕ ಸರಕಾರದ ಮಹತ್ವದ ಆದೇಶ

    ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    • By admin
    • February 23, 2024
    • 6 views
    ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ

    ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

    • By admin
    • February 18, 2024
    • 6 views
    ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

    ಹಲವು ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೋಲೀಸರಿಂದ ಐವರ ಬಂಧನ

    • By admin
    • February 4, 2024
    • 6 views
    ಹಲವು ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೋಲೀಸರಿಂದ ಐವರ ಬಂಧನ