ಬೆಳ್ತಂಗಡಿ ಕಡ್ಯಾರು ಸ್ಫೋಟದ ಬೆನ್ನಲ್ಲೇ ಎಚ್ಚೆತ್ತು ಕೊಂಡ ದ.ಕ ಜಿಲ್ಲಾಡಳಿತ ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಡುಮದ್ದು ತಯಾರಿಕಾ ಘಟಕಗಳನ್ನು ಸೀಲ್ ಡೌನ್ ಮಾಡಲು ಆದೇಶ

ಮಂಗಳೂರು: ದಿನಾಂಕ: 28-01-2024 ರಂದು ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ತಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಮೂವರು ಕಾರ್ಮಿಕರ ಜೀವ ಹಾನಿಯಾಗಿರುತ್ತದೆ ಹಾಗೂ ಸಮೀಪದ ಮನೆಯ ಅಸ್ತಿ ಪಾಸ್ತಿಗಳಿಗೂ ಅಪಾರ ಹಾನಿಯುಂಟಾಗಿರುತ್ತದೆ.

Explosive Act 1984 ಮತ್ತು Explosive Rules 2008 ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ LE -1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಕೆಳಗಿನಂತೆ ಆದೇಶಿಸಿದೆ.

ಆದೇಶ ಸಂಖ್ಯೆ: ARM CR 02/2022-23/C3 ದಿನಾಂಕ: 29-01-2024 ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಅನುಸಾರ ಡಾ|| ಆನಂದ್ ಕ, ಭಾ.ಅ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ತಣದಿಂದ ಜಾರಿಗೆ ಬರುವಂತ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಆದೇಶಿಸಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಮಂಗಳೂರು ಮತ್ತು ಪುತ್ತೂರು ರವರಿಗೆ ನಿರ್ದೇಶನ ನೀಡಿದೆ.

Spread the love
  • Related Posts

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಾರ್ಷಿಕ ವಿಷು ಜಾತ್ರಾ ಮಹೋತ್ಸವವು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗಡೆಯವರ ನೇತೃತ್ವದಲ್ಲಿ ಏಪ್ರಿಲ್ 14ರಿಂದ ಪ್ರಾರಂಭವಾಗಿ ಏಪ್ರಿಲ್ 21ರಂದು ಮಂಗಳವಾರ ಬ್ರಹ್ಮರಥೋತ್ಸವದ ಸಂಭ್ರಮದೊಂದಿಗೆ ವಿಜೃಂಭಣೆಯಿಂದ ನೆರವೇರಿತು. ರಾತ್ರಿ ಒಳಾಂಗಣದಲ್ಲಿ…

    Spread the love

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ಚಾರ್ಮಾಡಿ: ಚಾರ್ಮಾಡಿ ಘಾಟ್ ರಸ್ತೆಯ ಮೂರನೇ ತಿರುವಿನಲ್ಲಿ ಪಿಕಪ್ ಪಲ್ಟಿಯಾಗಿ ಪಿಕಪ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಗೂಡ್ಸ್ ಸಾಗಾಟದ ವಾಹನದಲ್ಲಿ ಪ್ರಯಾಣಿಕರ ಸಾಗಾಟ!!!!!!! ಸಂಬಂಧಿತ ಇಲಾಖೆ ಮೌನ!!!!!! ಗೂಡ್ಸ್ ವಾಹನದಲ್ಲಿ ಪ್ರಯಾಣಿಕರ ಸಾಗಾಟ ನಿಷೇಧ ಇದ್ದರೂ ಸಂಬಂಧ…

    Spread the love

    You Missed

    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    • By admin
    • April 22, 2026
    • 9 views
    ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಿಭಾವದೊಂದಿಗೆ ವಿಷು ಜಾತ್ರಾ ಮಹೋತ್ಸವ ಸಂಪನ್ನ

    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    • By admin
    • April 22, 2026
    • 34 views
    ಗೂಡ್ಸ್ ವಾಹನದಲ್ಲಿ ಪ್ರಯಾಣಿಕರು – ಚಾರ್ಮಾಡಿ ಘಾಟಿಯಲ್ಲಿ  ಪಿಕಪ್ ವಾಹನ ಪಲ್ಟಿ, 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    • By admin
    • April 21, 2026
    • 24 views
    ತ್ರಿಶೂರ್ನ ಪಟಾಕಿ ಶೆಡ್ನಲ್ಲಿ ಸ್ಫೋಟ: 10ಮಂದಿ ಸಜೀವ ದಹನ ಹಲವರಿಗೆ ಗಂಭೀರ ಗಾಯ

    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    • By admin
    • April 20, 2026
    • 55 views
    ಬೃಹತ್ ಪ್ರಮಾಣದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳ ಬಂಧನ: 46.50ಲಕ್ಷ ಮೌಲ್ಯದ ಡ್ರಗ್ಸ್ ವಶಕ್ಕೆ

    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    • By admin
    • April 20, 2026
    • 40 views
    ಅಕ್ಷಯ ತೃತೀಯದ ಶುಭ ಘಳಿಗೆಯಲ್ಲಿ: ಕನ್ಯಾಡಿಯ ಅಕ್ಷರ ದೇಗುಲಕ್ಕೆ ಸ್ವಾಗತ!

    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ

    • By admin
    • April 20, 2026
    • 88 views
    ಚಲಿಸುತ್ತಿದ್ದ ಕಾರಿನ ಮೇಲೆ ಮುರಿದು ಬಿದ್ದ ಮರದ ರೆಂಬೆ: ಕಾರು ಜಖಂ